AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ
ಪ್ರತಿಭಟನೆImage Credit source: News.Career
ನಯನಾ ರಾಜೀವ್
|

Updated on:Nov 03, 2023 | 4:17 PM

Share

ಐಐಟಿ-ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ವಿದ್ಯಾರ್ಥಿನಿಯು ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಬಂದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಅವರನ್ನು ಅಡ್ಡಗಟ್ಟಿದ್ದಾರೆ.

ಆಕೆಯನ್ನು ಬಲವಂತವಾಗಿ ಒಂದು ಮೂಲೆಗೆ ಕರೆದೊಯ್ದಿದ್ದಾರೆ ಆಕೆಯ ಸ್ನೇಹಿತನಿಂದ ದೂರ ಕರೆದೊಯ್ದು, ಬಾಯಿಯನ್ನು ಮುಚ್ಚಿ, ವಿವಸ್ತ್ರಗೊಳಿಸಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಅಷ್ಟೇ ಅಲ್ಲದೆ ಆಕೆಯ ಫೋಟೊವನ್ನು ಕ್ಲಿಕ್ಕಿಸಿದ್ದಾರೆ, 15 ನಿಮಿಷಗಳ ನಂತರ ಆಕೆಯನ್ನು ಹೋಗಲು ಬಿಟ್ಟು ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡಿದ್ದಾರೆ.

ಆಕೆ ತಕ್ಷಣವೇ ಓಡಿ ಹೋಗಿ ಪ್ರಾಧ್ಯಾಪಕರ ಮನೆಯನ್ನು ತಲುಪಿದ್ದಾಳೆ, ತಕ್ಷಣವೇ ಆಕೆಯನ್ನು ಮನೆಯೊಳಗೆ ಕರೆದೊಯ್ದು, ಸಮಾಧಾನಪಡಿಸಿದ್ದಾರೆ.

ವಿದ್ಯಾರ್ಥಿಯನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ತನ್ನ ಹಾಸ್ಟೆಲ್‌ಗೆ ಕರೆದೊಯ್ದರು. ಘಟನೆಯ ನಂತರ ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದು, ತನ್ನ ಹಾಸ್ಟೆಲ್‌ನಿಂದ ಹೊರಬರುತ್ತಿಲ್ಲ ಎಂದು ಹೇಳಲಾಗಿದೆ. ಗಲಾಟೆಯಲ್ಲಿ ಆಕೆಯ ಸ್ನೇಹಿತೆ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:14 pm, Fri, 3 November 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ