Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ
ಪ್ರತಿಭಟನೆImage Credit source: News.Career
Follow us
ನಯನಾ ರಾಜೀವ್
|

Updated on:Nov 03, 2023 | 4:17 PM

ಐಐಟಿ-ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ವಿದ್ಯಾರ್ಥಿನಿಯು ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಬಂದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಅವರನ್ನು ಅಡ್ಡಗಟ್ಟಿದ್ದಾರೆ.

ಆಕೆಯನ್ನು ಬಲವಂತವಾಗಿ ಒಂದು ಮೂಲೆಗೆ ಕರೆದೊಯ್ದಿದ್ದಾರೆ ಆಕೆಯ ಸ್ನೇಹಿತನಿಂದ ದೂರ ಕರೆದೊಯ್ದು, ಬಾಯಿಯನ್ನು ಮುಚ್ಚಿ, ವಿವಸ್ತ್ರಗೊಳಿಸಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಅಷ್ಟೇ ಅಲ್ಲದೆ ಆಕೆಯ ಫೋಟೊವನ್ನು ಕ್ಲಿಕ್ಕಿಸಿದ್ದಾರೆ, 15 ನಿಮಿಷಗಳ ನಂತರ ಆಕೆಯನ್ನು ಹೋಗಲು ಬಿಟ್ಟು ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡಿದ್ದಾರೆ.

ಆಕೆ ತಕ್ಷಣವೇ ಓಡಿ ಹೋಗಿ ಪ್ರಾಧ್ಯಾಪಕರ ಮನೆಯನ್ನು ತಲುಪಿದ್ದಾಳೆ, ತಕ್ಷಣವೇ ಆಕೆಯನ್ನು ಮನೆಯೊಳಗೆ ಕರೆದೊಯ್ದು, ಸಮಾಧಾನಪಡಿಸಿದ್ದಾರೆ.

ವಿದ್ಯಾರ್ಥಿಯನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ತನ್ನ ಹಾಸ್ಟೆಲ್‌ಗೆ ಕರೆದೊಯ್ದರು. ಘಟನೆಯ ನಂತರ ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದು, ತನ್ನ ಹಾಸ್ಟೆಲ್‌ನಿಂದ ಹೊರಬರುತ್ತಿಲ್ಲ ಎಂದು ಹೇಳಲಾಗಿದೆ. ಗಲಾಟೆಯಲ್ಲಿ ಆಕೆಯ ಸ್ನೇಹಿತೆ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:14 pm, Fri, 3 November 23

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ