AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube ಚಾನಲ್‌ಗೆ ವ್ಯೂಸ್​ ಬರಲಿಲ್ಲವೆಂದು ಲೈಫ್​ ಎಂಡ್​ ಮಾಡಿಕೊಂಡ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿ!

ಪೊಲೀಸರ ತನಿಖೆಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಸ್ವತಃ ಯೂಟ್ಯೂಬ್ ನಲ್ಲಿ ಗೇಮ್ ಚಾನೆಲ್ ನಡೆಸುತ್ತಿದ್ದ ದೀನಾ, ಯೂಟ್ಯೂಬ್ ನಲ್ಲಿ ವೀಕ್ಷಣೆ ಹೆಚ್ಚಾಗದ ಕಾರಣ ಒತ್ತಡಕ್ಕೆ ಒಳಗಾಗಿದ್ದ.

YouTube ಚಾನಲ್‌ಗೆ ವ್ಯೂಸ್​ ಬರಲಿಲ್ಲವೆಂದು ಲೈಫ್​ ಎಂಡ್​ ಮಾಡಿಕೊಂಡ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿ!
YouTube ಚಾನಲ್‌ಗೆ ವ್ಯೂಸ್​ ಬರಲಿಲ್ಲವೆಂದು ಲೈಫ್​ ಎಂಡ್​ ಮಾಡಿಕೊಂಡ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿ!
TV9 Web
| Updated By: ಸಾಧು ಶ್ರೀನಾಥ್​|

Updated on: Jul 21, 2022 | 6:03 PM

Share

ಅಂಗೈಗೆ ಮೊಬೈಲ್​ ಫೋನ್ ಬಂದಿದ್ದೇ ಹಿಂದಿನ ಕಾಲದಲ್ಲಿ ಅಂಜನಾ ಹಾಕಿ ನೋಡಿದಂತೆ ಇಡೀ ಪ್ರಪಂಚವನ್ನು ಕುಳಿತಕಡೆಯಿಂದಲೇ ಜನ ನೋಡತೊಗಿದ್ದಾರೆ. ಸೋಷಿಯಲ್ ಆ್ಯಪ್ ಗಳಿಂದ ತುಂಬಿ ತುಳುಕುತ್ತಿರುವ ಇಂದಿನ ಅಂತರ್ಜಾಲ ಯುಗದಲ್ಲಿ ಸ್ವೇಚ್ಛೆಯಿಂದ ವಿಹರಿಸುತ್ತಿದ್ದಾರೆ.. ಯುವ ಮನಸುಗಳು ಹುಚ್ಚು ಕುದುರೆಯಂತಾಗಿವೆ. ಅದಕ್ಕೆ ಲಂಗುಲಗಾಮು ಇಲ್ಲದಂತಾಗಿದೆ. ಮೊದಲು ಅದೊಂದು ವ್ಯಸನವಾಗಿ, ನಂತರ ಅದಕ್ಕೆ ದಾಸನಾಗಿ ಕೊನೆಗೆ.. ಜೀವ ತೆಗೆಯುವ ಸಾಧನಗಳಾಗಿ ಅವು ಮಾರ್ಪಟ್ಟಿವೆ. ಅದೊಂದು ಮೋಜಿನಂತೆ ಆರಂಭವಾಗಿ, ಏಕಾಏಕಿ ಚಂಡಮಾರುತವಾಗಿ ಪರಿವರ್ತನೆಗೊಂಡು ಸಾಕಷ್ಟು (ಜೀವ)ಹಾನಿಯನ್ನುಂಟು ಮಾಡುತ್ತಿದೆ.

ಈ ಅವಧಿಯಲ್ಲಿ ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಅವರು ತಮಗಾಗಿ ವಿಶೇಷ ಗುರುತನ್ನು ಪಡೆಯಲು ಹತಾಶರಾಗಿದ್ದಾರೆ. ತಮ್ಮ ಪೋಸ್ಟ್‌ಗಳಿಗೆ ಹೆಚ್ಚಿನ ಲೈಕ್‌ಗಳನ್ನು ಪಡೆಯುವ ಹಪಾಹಪಿಯಲ್ಲಿ ಎದುರಾಗುವ ಅಪಾಯಗಳನ್ನು ಅವರು ಲೆಕ್ಕಿಸುತ್ತಿಲ್ಲ. ಕಡಿಮೆ ಲೈಕ್ಸ್ ಬಂದರೆ ಅವರು ಸಹಿಸುವುದಿಲ್ಲ. ಪ್ರಪಂಚವನ್ನೇ ಕಳೆದುಕೊಂಡವರಂತೆ ತಲೆಯ ಮೇಲೆ ಭಾರ ಬಿದ್ದವರಂತೆ ಅಡುತ್ತಾರೆ. ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಅಂತಿಮವಾಗಿ ಪ್ರಾಣ ತೆಗೆಯುವ ಹಂತಕ್ಕೆ ಬಂದುಬಿಟ್ಟಿದೆ.

ಹೈದರಾಬಾದಿನಲ್ಲಿ ಇಂತಹದ್ದೇ ಆಘಾತಕಾತರಿ ಘಟನೆ ನಡೆದಿದೆ. YouTube ಚಾನಲ್‌ಗೆ ವ್ಯೂಸ್​ ಬರುತ್ತಿಲ್ಲ ಎಂದು ವಿದ್ಯಾರ್ಥಿಯೊಬ್ಬ ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೈದರಾಬಾದ್ ಸೈದಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ರಾಂತಿ ನಗರ ಕಾಲೋನಿಯಲ್ಲಿ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕ್ರಾಂತಿನಗರದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಹಾರಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸಿ ದೀನಾ (C Dheena) ಎಂದು ಪೊಲೀಸರು ಗುರುತಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನಾ ಸ್ಥಳ ಹಾಗೂ ಮೃತದೇಹವನ್ನು ಪರಿಶೀಲಿಸಲಾಗಿ, ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಶವಾಗಾರಕ್ಕೆ ರವಾನಿಸಲಾಗಿದೆ. ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ತನಿಖೆಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಸ್ವತಃ ಯೂಟ್ಯೂಬ್ ನಲ್ಲಿ ಗೇಮ್ ಚಾನೆಲ್ ನಡೆಸುತ್ತಿದ್ದ ದೀನಾ, ಯೂಟ್ಯೂಬ್ ನಲ್ಲಿ ವೀಕ್ಷಣೆ ಹೆಚ್ಚಾಗದ ಕಾರಣ ಒತ್ತಡಕ್ಕೆ ಒಳಗಾಗಿದ್ದ. ಇದರಿಂದ ತೀವ್ರ ನೋವು ಅನುಭವಿಸಿದ್ದ ಮತ್ತು ಕೊನೆಗೆ ಪ್ರಾಣ ತ್ಯಜಿಸುವ ಹಂತಕ್ಕೆ ಬಲಿಯಾಗಿದ್ದಾನೆ. ದೀನಾ ಐಐಟಿ ಗ್ವಾಲಿಯರ್‌ನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ.

To read in Telugu click here

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?