AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

YouTube ಚಾನಲ್‌ಗೆ ವ್ಯೂಸ್​ ಬರಲಿಲ್ಲವೆಂದು ಲೈಫ್​ ಎಂಡ್​ ಮಾಡಿಕೊಂಡ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿ!

ಪೊಲೀಸರ ತನಿಖೆಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಸ್ವತಃ ಯೂಟ್ಯೂಬ್ ನಲ್ಲಿ ಗೇಮ್ ಚಾನೆಲ್ ನಡೆಸುತ್ತಿದ್ದ ದೀನಾ, ಯೂಟ್ಯೂಬ್ ನಲ್ಲಿ ವೀಕ್ಷಣೆ ಹೆಚ್ಚಾಗದ ಕಾರಣ ಒತ್ತಡಕ್ಕೆ ಒಳಗಾಗಿದ್ದ.

YouTube ಚಾನಲ್‌ಗೆ ವ್ಯೂಸ್​ ಬರಲಿಲ್ಲವೆಂದು ಲೈಫ್​ ಎಂಡ್​ ಮಾಡಿಕೊಂಡ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿ!
YouTube ಚಾನಲ್‌ಗೆ ವ್ಯೂಸ್​ ಬರಲಿಲ್ಲವೆಂದು ಲೈಫ್​ ಎಂಡ್​ ಮಾಡಿಕೊಂಡ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿ!
TV9 Web
| Edited By: ಸಾಧು ಶ್ರೀನಾಥ್​|

Updated on: Jul 21, 2022 | 6:03 PM

Share

ಅಂಗೈಗೆ ಮೊಬೈಲ್​ ಫೋನ್ ಬಂದಿದ್ದೇ ಹಿಂದಿನ ಕಾಲದಲ್ಲಿ ಅಂಜನಾ ಹಾಕಿ ನೋಡಿದಂತೆ ಇಡೀ ಪ್ರಪಂಚವನ್ನು ಕುಳಿತಕಡೆಯಿಂದಲೇ ಜನ ನೋಡತೊಗಿದ್ದಾರೆ. ಸೋಷಿಯಲ್ ಆ್ಯಪ್ ಗಳಿಂದ ತುಂಬಿ ತುಳುಕುತ್ತಿರುವ ಇಂದಿನ ಅಂತರ್ಜಾಲ ಯುಗದಲ್ಲಿ ಸ್ವೇಚ್ಛೆಯಿಂದ ವಿಹರಿಸುತ್ತಿದ್ದಾರೆ.. ಯುವ ಮನಸುಗಳು ಹುಚ್ಚು ಕುದುರೆಯಂತಾಗಿವೆ. ಅದಕ್ಕೆ ಲಂಗುಲಗಾಮು ಇಲ್ಲದಂತಾಗಿದೆ. ಮೊದಲು ಅದೊಂದು ವ್ಯಸನವಾಗಿ, ನಂತರ ಅದಕ್ಕೆ ದಾಸನಾಗಿ ಕೊನೆಗೆ.. ಜೀವ ತೆಗೆಯುವ ಸಾಧನಗಳಾಗಿ ಅವು ಮಾರ್ಪಟ್ಟಿವೆ. ಅದೊಂದು ಮೋಜಿನಂತೆ ಆರಂಭವಾಗಿ, ಏಕಾಏಕಿ ಚಂಡಮಾರುತವಾಗಿ ಪರಿವರ್ತನೆಗೊಂಡು ಸಾಕಷ್ಟು (ಜೀವ)ಹಾನಿಯನ್ನುಂಟು ಮಾಡುತ್ತಿದೆ.

ಈ ಅವಧಿಯಲ್ಲಿ ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುತ್ತಾರೆ. ಅವರು ತಮಗಾಗಿ ವಿಶೇಷ ಗುರುತನ್ನು ಪಡೆಯಲು ಹತಾಶರಾಗಿದ್ದಾರೆ. ತಮ್ಮ ಪೋಸ್ಟ್‌ಗಳಿಗೆ ಹೆಚ್ಚಿನ ಲೈಕ್‌ಗಳನ್ನು ಪಡೆಯುವ ಹಪಾಹಪಿಯಲ್ಲಿ ಎದುರಾಗುವ ಅಪಾಯಗಳನ್ನು ಅವರು ಲೆಕ್ಕಿಸುತ್ತಿಲ್ಲ. ಕಡಿಮೆ ಲೈಕ್ಸ್ ಬಂದರೆ ಅವರು ಸಹಿಸುವುದಿಲ್ಲ. ಪ್ರಪಂಚವನ್ನೇ ಕಳೆದುಕೊಂಡವರಂತೆ ತಲೆಯ ಮೇಲೆ ಭಾರ ಬಿದ್ದವರಂತೆ ಅಡುತ್ತಾರೆ. ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಅಂತಿಮವಾಗಿ ಪ್ರಾಣ ತೆಗೆಯುವ ಹಂತಕ್ಕೆ ಬಂದುಬಿಟ್ಟಿದೆ.

ಹೈದರಾಬಾದಿನಲ್ಲಿ ಇಂತಹದ್ದೇ ಆಘಾತಕಾತರಿ ಘಟನೆ ನಡೆದಿದೆ. YouTube ಚಾನಲ್‌ಗೆ ವ್ಯೂಸ್​ ಬರುತ್ತಿಲ್ಲ ಎಂದು ವಿದ್ಯಾರ್ಥಿಯೊಬ್ಬ ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೈದರಾಬಾದ್ ಸೈದಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ರಾಂತಿ ನಗರ ಕಾಲೋನಿಯಲ್ಲಿ ಐಐಟಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕ್ರಾಂತಿನಗರದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಹಾರಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸಿ ದೀನಾ (C Dheena) ಎಂದು ಪೊಲೀಸರು ಗುರುತಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನಾ ಸ್ಥಳ ಹಾಗೂ ಮೃತದೇಹವನ್ನು ಪರಿಶೀಲಿಸಲಾಗಿ, ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಶವಾಗಾರಕ್ಕೆ ರವಾನಿಸಲಾಗಿದೆ. ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ತನಿಖೆಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಸ್ವತಃ ಯೂಟ್ಯೂಬ್ ನಲ್ಲಿ ಗೇಮ್ ಚಾನೆಲ್ ನಡೆಸುತ್ತಿದ್ದ ದೀನಾ, ಯೂಟ್ಯೂಬ್ ನಲ್ಲಿ ವೀಕ್ಷಣೆ ಹೆಚ್ಚಾಗದ ಕಾರಣ ಒತ್ತಡಕ್ಕೆ ಒಳಗಾಗಿದ್ದ. ಇದರಿಂದ ತೀವ್ರ ನೋವು ಅನುಭವಿಸಿದ್ದ ಮತ್ತು ಕೊನೆಗೆ ಪ್ರಾಣ ತ್ಯಜಿಸುವ ಹಂತಕ್ಕೆ ಬಲಿಯಾಗಿದ್ದಾನೆ. ದೀನಾ ಐಐಟಿ ಗ್ವಾಲಿಯರ್‌ನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ.

To read in Telugu click here

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ