AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟಪಟ್ಟು ಓಡಿ ಬಂದವನಿಂದಲೇ ಸೇರಿದಳು ಸ್ಮಶಾನ, ಮೂವರು ಮಕ್ಕಳು ತಬ್ಬಲಿ

ಹಾಸನ: ಪತಿಯ ಸಂಬಂಧಿ ಜೊತೆ ಓಡಿಹೋದ ಪತ್ನಿಯನ್ನು ಸಂಬಂಧಿಯೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಹಾಸನದಲ್ಲಿ ನಡೆದಿದೆ. 10 ವರ್ಷದ ತುಂಬಿದ ಸಂಸಾರದಲ್ಲಿ ಆಕೆ ಮಾಡಿದ ತಪ್ಪಿಗೆ 3 ಮಕ್ಕಳು ಅನಾಥವಾಗಿವೆ. ಮೂವರು ಮಕ್ಕಳಿದ್ರೂ ದಾರಿ ತಪ್ಪಿದ್ಲು ಮದನಾರಿ..! ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಾಂಧಿನಗರ ನಿವಾಸಿ ಲೋಕೇಶ್ ಕಳೆದ 13 ವರ್ಷಗಳ ಹಿಂದೆ ಮಂಜುಳಾನ ಮದುವೆಯಾಗಿದ್ದ. ಮಂಜುಳಾ ಬದುಕಲ್ಲಿ ರಾಣಿಯಾಗಿ ಬಂದ ಮೇಲೆ ಸಂಸಾರವು ಸುಂದರವಾಗಿ ಸಾಗ್ತಿತ್ತು. ಮೂವರು ಮಕ್ಕಳು ಕೂಡಾ ಇವರ ನಗುವಿನಲ್ಲಿ […]

ಇಷ್ಟಪಟ್ಟು ಓಡಿ ಬಂದವನಿಂದಲೇ ಸೇರಿದಳು ಸ್ಮಶಾನ, ಮೂವರು ಮಕ್ಕಳು ತಬ್ಬಲಿ
ಸಾಧು ಶ್ರೀನಾಥ್​
|

Updated on: Nov 27, 2019 | 6:32 PM

Share

ಹಾಸನ: ಪತಿಯ ಸಂಬಂಧಿ ಜೊತೆ ಓಡಿಹೋದ ಪತ್ನಿಯನ್ನು ಸಂಬಂಧಿಯೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಹಾಸನದಲ್ಲಿ ನಡೆದಿದೆ. 10 ವರ್ಷದ ತುಂಬಿದ ಸಂಸಾರದಲ್ಲಿ ಆಕೆ ಮಾಡಿದ ತಪ್ಪಿಗೆ 3 ಮಕ್ಕಳು ಅನಾಥವಾಗಿವೆ.

ಮೂವರು ಮಕ್ಕಳಿದ್ರೂ ದಾರಿ ತಪ್ಪಿದ್ಲು ಮದನಾರಿ..! ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಾಂಧಿನಗರ ನಿವಾಸಿ ಲೋಕೇಶ್ ಕಳೆದ 13 ವರ್ಷಗಳ ಹಿಂದೆ ಮಂಜುಳಾನ ಮದುವೆಯಾಗಿದ್ದ. ಮಂಜುಳಾ ಬದುಕಲ್ಲಿ ರಾಣಿಯಾಗಿ ಬಂದ ಮೇಲೆ ಸಂಸಾರವು ಸುಂದರವಾಗಿ ಸಾಗ್ತಿತ್ತು. ಮೂವರು ಮಕ್ಕಳು ಕೂಡಾ ಇವರ ನಗುವಿನಲ್ಲಿ ಭಾಗಿಯಾಗಿದ್ರು.

ಆದ್ರೆ, 3 ವರ್ಷಗಳಿಂದ ಈ ಮಂಜುಳಾ ಲೋಕೇಶ್​ನ ಸಂಬಂಧಿ ಸೋಮಶೇಖರ್​ ಎಂಬವನ ಜೊತೆ ಸಂಬಂಧ ಬೆಳೆಸಿದ್ದಾಳೆ. ಪತ್ನಿಯ ಕಳ್ಳಾಟ ಗಂಡನಿಗೆ ಗೊತ್ತಿತ್ತು. ಹೀಗಿದ್ರೂ ಲೋಕೇಶ್ ಮಕ್ಕಳ ಮುಖ ನೋಡಿ ಸುಮ್ಮನಾಗಿದ್ದ. ಆದ್ರೆ, ಮಂಜುಳಾ ಮಾತ್ರ ಮಕ್ಕಳನ್ನ ಕರೆದುಕೊಂಡು ಸೋಮಶೇಖರ್ ಜೊತೆ ಓಡಿ ಹೋಗಿದ್ದಾಳೆ.

ಇವನಿಗೆ ಅವಳು ಬೇಕಿದ್ಲು.. ಮತ್ತೊಬ್ಬಳು ಬೇಕಿದ್ಲು.. ಆಗಿದ್ದು ಭಯಂಕರ! ಈ ಮಂಜುಳಾ ಯಾರನ್ನ ಇಷ್ಟಪಟ್ಟು ಬಂದಿದ್ಲೋ. ಯಾರು ತನ್ನ ಜಗತ್ತು ಅಂತಾ ಅಂದುಕೊಂಡಿದ್ಲೋ ಅವನಿಂದ್ಲೇ ನರಕಯಾತನೆ ಅನುಭವಿಸಿ ಸಾವಿನ ಮನೆ ಸೇರಿದ್ದಾಳೆ. ಅಸಲಿಗೆ ಪ್ರೀತಿ ಹೆಸರಲ್ಲಿ ಮನೆ ಬಿಟ್ಟಿದ್ದವರ ನಡುವೆ ಜಗಳ ಶುರುವಾಗಿತ್ತು. ಯಾಕಂದ್ರೆ, ಸೋಮಶೇಖರ್ ಮಂಜುಳಾ ಜೊತೆ ಇದ್ಕೊಂಡೇ ಇನ್ನೊಂದು ಮದುವೆಗೆ ರೆಡಿಯಾಗಿದ್ದ.

ಈ ವಿಚಾರ ತಿಳಿದ ಮಂಜುಳಾ ಸೋಮಶೇಖರ್ ಮದುವೆಗೆ ವಿರೋಧಿಸಿದ್ಲು. ಇದ್ರಿಂದ ರಾಕ್ಷಸನಾದ ಸೋಮಶೇಖರ್ ಇದೇ ತಿಂಗಳ 21ರಂದು ಮಂಜುಳಾಗೆ ಥಳಿಸಿ, ಮಕ್ಕಳನ್ನ ರೂಮಿನಲ್ಲಿ ಕೂಡಿಹಾಕಿದ್ದಾನೆ. ಬಳಿಕ ಮಕ್ಕಳ ಎದುರಲ್ಲೇ ಮಂಜುಳಾ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.

ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದ ಮಂಜುಳಾನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇದೇ ತಿಂಗಳ 23ರಂದು ಸಾವಿನ ಮನೆ ಸೇರಿದ್ದಾಳೆ. ನರರೂಪದ ರಾಕ್ಷಸ ಸೋಮಶೇಖರ್​ನನ್ನ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!