AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಮಿಸ್ಡ್​​ ಕಾಲ್​ನಿಂದ ಶುರುವಾದ ಪ್ರೀತಿ​ ಆತನ ಜೀವವನ್ನೇ ತೆಗೆಯಿತು!

ನೆಲಮಂಗಲ: ಗೃಹಿಣಿಯೊಬ್ಬಳಿಗೆ ಮಿಸ್ಡ್​‌ ಕಾಲ್​ನಿಂದ ಶುರುವಾದ ಪ್ರೀತಿ ಅಕ್ರಮ ಸಂಬಂಧವಾಗಿ ಮಾರ್ಪಟ್ಟು, ಪತಿಯೇ ಪ್ರಿಯಕರನನ್ನು ಕೊಂದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಬಳಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರ ನಿವಾಸಿ ಚಂದ್ರಶೇಖರ್ (20) ಮೃತ ದುರ್ದೈವಿ. ಚೆನ್ನಾದೇವಿ ಅಗ್ರಹಾರದ ನಿವಾಸಿಯಾದ ರಘು ಪತ್ನಿಗೆ ಅಚಾನಕ್ ಆಗಿ‌ ಒಂದು ಮಿಸ್ಡ್​ ಕಾಲ್ ಕೊಟ್ಟಿದ್ದಾನೆ. ಅದೇ ಮಿಸ್ಡ್​ ಕಾಲ್ ಪ್ರೀತಿಯ ವ್ಯಾಮೋಹಕ್ಕೆ ತಿರುಗಿ ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಗಿದೆ. 15ದಿನದ ಹಿಂದೆ ಕುಡಿದ ಮತ್ತಿನಲ್ಲಿ ರಘು ನಿಂದಿಸಿದ್ದಕ್ಕೆ ರಘುವನ್ನ […]

ಒಂದೇ ಒಂದು ಮಿಸ್ಡ್​​ ಕಾಲ್​ನಿಂದ ಶುರುವಾದ ಪ್ರೀತಿ​ ಆತನ ಜೀವವನ್ನೇ ತೆಗೆಯಿತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2020 | 11:36 AM

Share

ನೆಲಮಂಗಲ: ಗೃಹಿಣಿಯೊಬ್ಬಳಿಗೆ ಮಿಸ್ಡ್​‌ ಕಾಲ್​ನಿಂದ ಶುರುವಾದ ಪ್ರೀತಿ ಅಕ್ರಮ ಸಂಬಂಧವಾಗಿ ಮಾರ್ಪಟ್ಟು, ಪತಿಯೇ ಪ್ರಿಯಕರನನ್ನು ಕೊಂದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಬಳಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರ ನಿವಾಸಿ ಚಂದ್ರಶೇಖರ್ (20) ಮೃತ ದುರ್ದೈವಿ.

ಚೆನ್ನಾದೇವಿ ಅಗ್ರಹಾರದ ನಿವಾಸಿಯಾದ ರಘು ಪತ್ನಿಗೆ ಅಚಾನಕ್ ಆಗಿ‌ ಒಂದು ಮಿಸ್ಡ್​ ಕಾಲ್ ಕೊಟ್ಟಿದ್ದಾನೆ. ಅದೇ ಮಿಸ್ಡ್​ ಕಾಲ್ ಪ್ರೀತಿಯ ವ್ಯಾಮೋಹಕ್ಕೆ ತಿರುಗಿ ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಗಿದೆ. 15ದಿನದ ಹಿಂದೆ ಕುಡಿದ ಮತ್ತಿನಲ್ಲಿ ರಘು ನಿಂದಿಸಿದ್ದಕ್ಕೆ ರಘುವನ್ನ ತೊರೆದು ರಾಧಾ ಮನೆ ಬಿಟ್ಟು ಚಂದ್ರಶೇಖರ್ ಜೊತೆ ವಾಸವಿದ್ದರು.

ಪತ್ನಿ ರಾಧಾ ನಡೆಯಿಂದ ಹೈರಾಣಾದ ಪತಿ ರಘು ತನ್ನ ತಮ್ಮ ದೀಪುನನ್ನು ಜೊತೆಯಲ್ಲಿ ಕರೆದುಕೊಂಡು ಪತ್ನಿ ಹಾಗೂ ಆಕೆಯ ಪ್ರಿಯಕರ ವಾಸವಿದ್ದ ಮಾದವಾರಕ್ಕೆ ಬಂದು ಜಗಳ ಪ್ರಾರಂಭಿಸಿದ್ದಾನೆ. ಈ ನಡುವೆ ಜಗಳ ವಿಕೋಪಕ್ಕೆ ತಿರುಗಿ ಮನೆಯ ಬಳಿಯೇ ಪರಸ್ಪರ ಬಡಿದಾಡಿಕೊಂಡಿದ್ದಾರೆ‌. ಅಲ್ಲಿಂದ ನಾಲ್ಕು ಜನ ಚೆನ್ನಾದೇವಿ ಅಗ್ರಹಾರಕ್ಕೆ ಹೋಗುತ್ತಾರೆ. ಅಲ್ಲಿ ಮತ್ತೆ ಗಲಾಟೆ ನಡೆದು ಚಂದ್ರಶೇಖರ್‌ಗೆ ಮಾರಣಾಂತಿಕ ಗಾಯಗಳಾಗುತ್ತವೆ.‌

ಆಗ ಮೃತ ಚಂದ್ರಶೇಖರ್ ಸಾಯುತ್ತಾನೆ ಎನ್ನುವ ಭಯದಲ್ಲಿ ಸ್ವತಃ ರಘು ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸುತ್ತಾನೆ. ಆಸ್ಪತ್ರೆಯಲ್ಲಿ ಅಪಘಾತ ಎಂದು ಬಿಂಬಿಸುವ ಮುಖಾಂತರ ಚಂದ್ರಶೇಖರ್​ನನ್ನು ಆಸ್ಪತ್ರೆಗೆ ದಾಖಲಿಸುತ್ತಾನೆ. ಅದ್ರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಶೇಖರ್ ಕೊನೆಯುಸಿರು ಎಳೆಯುತ್ತಾನೆ.

ಆ ಬಳಿಕ ಅಲ್ಲಿಂದ ರಘು ಕಾಲ್ಕಿತ್ತಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 11:17 am, Tue, 2 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ