ರಾಮನಗರ: ಸ್ವೀಟಿಯ ಅಕ್ರಮ ಸಂಬಂಧಕ್ಕೆ ಅಡ್ಡಿ, ಮಕ್ಕಳು ಬಲಿ

ರಾಮನಗರ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆ ಎಂದು ತಾಯಿ ಮಕ್ಕಳನ್ನೇ ಕೊಲೆ ಮಾಡಿದ್ದಾಳೆ. ಕೊಲೆ ಮಾಡಿದ ಬಳಿಕ ಮಗು ಖಾಯಿಲೆಯಿಂದ ಸತ್ತಿದೆ ಎಂದು ಸುಳು ಹೇಳಿದ್ದಾಳೆ. ಆದರೆ ಸ್ಮಶಾನದ ಸಿಬ್ಬಂದಿಯಿಂದ ಸತ್ಯ ಬೆಳಕಿಗೆ ಬಂದಿದೆ.

ರಾಮನಗರ: ಸ್ವೀಟಿಯ ಅಕ್ರಮ ಸಂಬಂಧಕ್ಕೆ ಅಡ್ಡಿ, ಮಕ್ಕಳು ಬಲಿ
ಆರೋಪಿಗಳಾದ ಗ್ರಗೋರಿ ಫ್ರಾನ್ಸೀಸ್, ಸ್ವೀಟಿ
Edited By:

Updated on: Oct 13, 2024 | 12:09 PM

ರಾಮನಗರ, ಅಕ್ಟೋಬರ್​ 13: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದರೆಂದು ಹೆತ್ತ ಮಕ್ಕಳನ್ನೇ ತಾಯಿ ಕೊಲೆ ಮಾಡಿರುವ ಘಟನೆ ರಾಮನಗರ (Ramnagar) ಪಟ್ಟಣದ ಕೆಂಪೇಗೌಡ ಸರ್ಕಲ್ ಬಳಿ ಇರುವ ಮನೆಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಗಳಾದ ಗ್ರಗೋರಿ ಫ್ರಾನ್ಸೀಸ್ (30), ಸ್ವೀಟಿ (21)ಯನ್ನು ಪೊಲೀಸರು ಬಂಧಿಸಿದ್ದಾರೆ. 3 ವರ್ಷ ಕಬಿಲ್ ಮತ್ತು 11 ತಿಂಗಳ ಕಬೀಲನ್ ಮೃತ ಮಕ್ಕಳು.

ಆರೋಪಿ ಸ್ವೀಟಿಗೆ ಶಿವು ಎಂಬುವವರ ಜೊತೆ ಮದುವೆ ಆಗಿದೆ. ಆದರೆ ಸ್ವೀಟಿ ಪತಿ ಶಿವು ಅವರನ್ನು ಬಿಟ್ಟು ಕಳೆದ ಕೆಲವು ದಿನಗಳಿಂದ ಫ್ರಾನ್ಸೀಸ್ ಎಂಬಾತನ ಜೊತೆ ರಾಮನಗರದಲ್ಲಿ ನೆಲಸಿದ್ದಾಳೆ. ಶುಕ್ರವಾರ ರಾತ್ರಿ ಸಂಭೋಗದ ವೇಳೆ ಮಗು ಕಬೀಲನ್ ಅತ್ತಿದೆ. ಇದರಿಂದ ಸಿಟ್ಟಿಗೆದ್ದ ಸ್ವೀಟಿ, ಮಗು ಕಬೀಲನ್​ನ​ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

ಸ್ಮಶಾನದ ಸಿಬ್ಬಂದಿಯಿಂದ ಕೃತ್ಯ ಬಯಲಿಗೆ!

ಇಂದು (ಅ.13) ಬೆಳಗ್ಗೆ ಸ್ವೀಟಿ ಮತ್ತು ಫ್ರಾನ್ಸಿಸ್, ಮಗು ಶವ ತೆಗೆದುಕೊಂಡು ಸ್ಮಶಾನಕ್ಕೆ ಬಂದಿದ್ದಾರೆ. ಸ್ಮಶಾನದ ಸಿಬ್ಬಂದಿ ಮಗು ದೇಹದ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ. ಆಗ, ಸಿಬ್ಬಂದಿ ಮಗುವಿಗೆ‌ ಏನಗಿತ್ತು ಅಂತ ಸ್ವೀಟಿ ಮತ್ತು ಫ್ರಾನ್ಸಿಸ್​ಗೆ ಕೇಳಿದ್ದಾರೆ.

ಇದನ್ನೂ ಓದಿ: ಗಂಡ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಮಹಿಳೆ ಆತ್ಮಹತ್ಯೆ

ಇದಕ್ಕೆ ಸ್ವೀಟಿ, ಮಗುವಿಗೆ ಖಾಯಿಲೆ ಇತ್ತು, ಜ್ವರದಿಂದ ಬಳಲಿ ಸತ್ತು ಹೋಗಿದೆ ಅಂತ ಹೇಳಿದ್ದಾಳೆ. ಆದರೂ ಅನುಮಾನಗೊಂಡ ಸ್ಮಶಾನದ ಸಿಬ್ಬಂದಿ, ಮೊಬೈಲ್​ನಲ್ಲಿ ಮಗುವಿನ ದೇಹದ ಫೋಟೊ ತೆಗೆದಿದ್ದಾರೆ. ಬಳಿಕ ಪೊಲೀಸರಿಗೆ ಫೋಟೋ ನೀಡಿದ್ದಾರೆ.

ಐಜೂರು ಪೊಲೀಸರು ಸ್ವೀಟಿ ಮತ್ತು ಫ್ರಾನ್ಸಿಸ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ಬಾಯಿಬಿಟ್ಟಿದ್ದಾರೆ. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:06 pm, Sun, 13 October 24

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us