ಕೊಡಗು: ಪ್ರೇಯಸಿಯ ಪತಿಯನ್ನು ಕೊಲೆ ಮಾಡಲು ಯತ್ನಿಸಿದ ಪೊಲೀಸ್ ಪೇದೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ.
ಕೊಡಗು, ಅಕ್ಟೋಬರ್ 23: ಪೊಲೀಸ್ ಪೇದೆಯೋರ್ವ (Police Constable) ಕೊಲೆ ಮಾಡಲು ಯತ್ನಿಸಿರುವ ಘಟನೆ ಸೋಮವಾರಪೇಟೆ (Somwarpet) ತಾಲೂಕಿನ ಶನಿವಾರಸಂತೆ ಎಂಬಲ್ಲಿ ನಡೆದಿದೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ರೇಶ್ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿದ್ದಾರೆ.
ಪೊಲೀಸ್ ಪೇದೆ ಕೋಟ್ರೆಶ್ ಪ್ರೇಯಸಿ ಆಯಿಷಾಳ ಪಕ್ಕದ ಮನೆಯಲ್ಲಿ ವಾಸವಾಗಿದ್ದಾನೆ. ಆಯಿಷಾ ಪೊಲೀಸ್ ಪೇದೆ ಕೊಟ್ರೇಶ್ನನ್ನು ಮಂಗಳವಾರ ಮಧ್ಯರಾತ್ರಿ ಮನೆಗೆ ಕರೆಸಿದ್ದಾಳೆ. ಬಳಿಕ, ಕೊಟ್ರೇಶ್ ದಿಂಬಿನಿಂದ ಉಸಿರುಗಟ್ಟಿಸಿ ಆಯಿಷಾ ಪತಿ ಇಫ್ರಾಜ್ರನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಪಕ್ಕದ ಕೋಣೆಯಲ್ಲಿ ಮಲಗಿದ್ದ ಇಫ್ರಾಜ್ ಅವರ ಅಕ್ಕನ ಮಗ ತಡೆದಿದ್ದಾರೆ. ಇಫ್ರಾಜ್ರನ್ನು ಬಚಾವ್ ಮಾಡಿದ್ದಾರೆ. ನಂತರ, ಆಯಿಷಾ ಮತ್ತು ಕಟ್ರೋಶ್ ನಡುವಿನ ಅಕ್ರಮ ಸಂಬಂಧ ಬಯಲಾಗಿದೆ.
ಆರೋಪಿ ಕೋಟ್ರೆಶ್ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ. ನಂತರ, ಇಫ್ರಾಜ್ ಕೊಡಗು ಎಸ್ಪಿ ರಾಮರಾಜನ್ ಅವರಿಗೆ ದೂರು ನೀಡಿದ್ದಾರೆ. ಎಸ್ಪಿ ಸೂಚನೆ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಆರೋಪಿ ಕೊಟ್ರೇಶ್ನನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ಬೆಂಗಳೂರಿನ ಹೆಡ್ಕಾನ್ಸ್ಟೇಬಲ್ ಅಮಾನತು
ಗೃಹಲಕ್ಷ್ಮೀ ಯೋಜನೆ ಹಣ ತರಲು ಹೋಗಿದ್ದ ಮಹಿಳೆಯ ಕೊಲೆ
ದಾವಣಗೆರೆ: ಗೃಹಲಕ್ಷ್ಮೀ ಯೋಜನೆ ಹಣ ತರಲು ಬ್ಯಾಂಕ್ಗೆ ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಸಿರುಗಟ್ಟಿಸಿ ಪತ್ನಿ ಸತ್ಯಮ್ಮಳನ್ನು ಕೊಲೆಮಾಡಿ ಪತಿ ಅಣ್ಣಪ್ಪ ಪರಾರಿಯಾಗಿದ್ದಾನೆ.
ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು ಮನೆ ಸೇರಿದ್ದರು.
ಗೃಹಲಕ್ಷ್ಮೀ ಯೋಜನೆ ಹಣ ಪಡೆಯಲು ಸತ್ಯಮ್ಮ ಮಂಗಳವಾರ ಜಗಳೂರು ತಾಲೂಕಿನ ಅಸಗೋಡ್ ಬ್ಯಾಂಕ್ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮ ಅವರನ್ನು ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ