AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Racket ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಿಡ್ನಿ ಮಾರಾಟ ದಂಧೆ: ಹಾಸ್​ಮ್ಯಾಟ್​ ಆಸ್ಪತ್ರೆ ಹೆಸರು ಬಳಸಿ ವಂಚನೆ

ರಾಜ್ಯ ರಾಜಧಾನಿಯಲ್ಲಿ ಕೆಲವು ದಶಕಗಳ ಹಿಂದೆ ಎಗ್ಗಿಲ್ಲದೆ ನಡೆಯುತ್ತಿದ್ದ ಕಿಡ್ನಿ ಮಾರಾಟ ದಂಧೆಗೆ ಕಾಲಕ್ರಮೇಣ ಬ್ರೇಕ್​ ಬಿದ್ದಿತ್ತು. ಆದರೆ, ಇದೀಗ ಸಿಲಿಕಾನ್​ ಸಿಟಿಯಲ್ಲಿ ಈ ಕರಾಳ ದಂಧೆ ಮತ್ತು ಅದರ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

Kidney Racket ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಿಡ್ನಿ ಮಾರಾಟ ದಂಧೆ: ಹಾಸ್​ಮ್ಯಾಟ್​ ಆಸ್ಪತ್ರೆ ಹೆಸರು ಬಳಸಿ ವಂಚನೆ
ಸಾಂದರ್ಭಿಕ ಚಿತ್ರ
KUSHAL V
|

Updated on: Dec 17, 2020 | 4:35 PM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಶಕಗಳ ಹಿಂದೆ ಎಗ್ಗಿಲ್ಲದೆ ನಡೆಯುತ್ತಿದ್ದ ಕಿಡ್ನಿ ಮಾರಾಟ ದಂಧೆಗೆ Kidney Racket ಕಾಲಕ್ರಮೇಣ ಬ್ರೇಕ್​ ಬಿದ್ದಿತ್ತು. ಆದರೆ, ಇದೀಗ ಸಿಲಿಕಾನ್​ ಸಿಟಿಯಲ್ಲಿ ಈ ಕರಾಳ ದಂಧೆ ಮತ್ತು ಅದರ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಕಿಡ್ನಿ ಕೊಟ್ಟವರಿಗೆ 2 ಕೋಟಿ ಹಣ ಕೊಡುತ್ತೇವೆಂದು ನಂಬಿಸಿ ವಂಚನೆ ಮಾಡಿರುವ ಪ್ರಕರಣ ಇದೀಗ ನಡೆದಿದೆ. ಹಾಸ್​ಮ್ಯಾಟ್​ ಆಸ್ಪತ್ರೆ ಹೆಸರು ಬಳಸಿ ಅಮಾಯಕರಿಗೆ ಕರೆ ಮಾಡುತ್ತಿದ್ದ ನಯವಂಚಕರು ಕಿಡ್ನಿ ಕೊಡಿಸ್ತೇವೆಂದು ರೋಗಿ ಸಂಬಂಧಿಕರಿಂದ ಮುಂಗಡ ಹಣ ಪಡೆಯುತ್ತಿದ್ದರು. ಇತ್ತ, ಕಿಡ್ನಿ ದಾನಿಗಳಿಗೆ 2 ಕೋಟಿ ಕೊಡುತ್ತೇವೆಂದು ನಂಬಿಸಿ ಕಿಡ್ನಿ ರೋಗಿ​ಗಳ ಜೊತೆ ಮಾತನಾಡಿಸುತ್ತಿದ್ದರು. ರೋಗಿಯ ಸಂಬಂಧಿಕರಿಗೆ ನಂಬಿಕೆ ಬಂದ ಮೇಲೆ ಅವರಿಂದ ಮುಂಗಡ ಹಣ ಪಡೆದ ಆಸಾಮಿಗಳು ಎಸ್ಕೇಪ್​!

ಅಂದ ಹಾಗೆ, ಈ ಕಿಡ್ನಿ ಕಿರಾತಕರು ಹಾಸ್​ಮ್ಯಾಟ್​ ಆಸ್ಪತ್ರೆ ಹೆಸರು ಬಳಸಿ ಹಲವರಿಗೆ ವಂಚನೆ ಮಾಡಿದ್ದರು ಎಂದು ಹೇಳಲಾಗಿದೆ. ನಾನು ಹಾಸ್​ಮ್ಯಾಟ್​ ಆಸ್ಪತ್ರೆ ವೈದ್ಯನೆಂದು ಹೇಳಿ ವಂಚಿಸಿದ್ದನು ಎಂದು ತಿಳಿದುಬಂದಿದೆ. ಸದ್ಯ, ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈ ನಡುವೆ, ನಮ್ಮ​ ಆಸ್ಪತ್ರೆಯಲ್ಲಿ ಯಾರಿಂದಲೂ ಕಿಡ್ನಿ ಪಡೆಯುತ್ತಿಲ್ಲ. ಸಾರ್ವಜನಿಕರು ಮೋಸ ಹೋಗಬೇಡಿ. ನಮ್ಮ ಆಸ್ಪತ್ರೆಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗ್ತಿದೆ. ಕಿಡ್ನಿ ಹೆಸರಲ್ಲಿ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ಸೂಚಿಸಿದೆ.

ಹಾಸ್​ಮ್ಯಾಟ್ ಆಸ್ಪತ್ರೆ ಹೆಸರಲ್ಲಿ ಯಾರಾದರೂ ಕರೆ ಮಾಡಿದ್ರೆ. ಆಸ್ಪತ್ರೆ ಆಡಳಿತ ಮಂಡಳಿ ಅಥವಾ ಪೊಲೀಸರಿಗೆ ದೂರು ನೀಡಿ. ಕಿಡ್ನಿ ಜಾಲದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಮನವಿ ಮಾಡಿದ್ದೇವೆ ಎಂದು ಆಸ್ಪತ್ರೆಯ ಎಂಡಿ ಡಾ.ಅಜಿತ್ ಬೆನೆಡಿಕ್ಟ್​ ರಾಯನ್​ ಮನವಿ ಮಾಡಿದ್ದಾರೆ.

ಲಾರಿ ಡಿಕ್ಕಿ ಹೊಡೆದು.. ಪಾದಚಾರಿ ಸ್ಥಳದಲ್ಲೇ ದುರ್ಮರಣ, ಯಾವೂರಲ್ಲಿ?

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!