AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿಗಾರಿಕೆ: ಎಸ್ ಬಿ ಮಿನರಲ್ಸ್ ಒಡೆತನದ ಎರಡು ಕಂಪನಿಗಳ 5.21 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಗಣಿಗಾರಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಎಸ್.ಬಿ.ಮಿನರಲ್ಸ್ ಒಡೆತನದ ಎರಡು ಗಣಿ ಕಂಪನಿಗೆ ಸೇರಿದ 5 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ: ಎಸ್ ಬಿ ಮಿನರಲ್ಸ್ ಒಡೆತನದ ಎರಡು ಕಂಪನಿಗಳ 5.21 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಸಾಂದರ್ಭಿಕ ಚಿತ್ರ
Rakesh Nayak Manchi
|

Updated on:Mar 19, 2023 | 3:32 PM

Share

ಬೆಂಗಳೂರು: ಅಕ್ರಮ ಗಣಿಗಾರಿಕೆ (Illegal Mining) ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಎಸ್.ಬಿ.ಮಿನರಲ್ಸ್ (SB Minarals) ಒಡೆತನದ ಎರಡು ಗಣಿ ಕಂಪನಿಗೆ ಸೇರಿದ 5 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು (Enforcement Directorate) ಜಪ್ತಿ ಮಾಡಿದೆ. ಬಿ.ಪಿ.ಆನಂದ್ ಕುಮಾರ್, ಪಾಂಡುರಂಗ ಸಿಂಗ್, ಗೋಪಾಲ್ ಸಿಂಗ್ ಪಾಲುದಾರಿಕೆಯ ಎಸ್​ಬಿ ಮಿನರಲ್ಸ್ ಒಡೆತನದ ದಿನೇಶ್ ಕುಮಾರ್ ಪಾಲುದಾರಿಕೆಯ ಭಾರತ್ ಮಿನರಲ್ಸ್ ಮೈನ್ಸ್ ಹಾಗೂ ಶಾಂತಲಕ್ಷ್ಮಿ ಮತ್ತು ಜೆ.ಮಿಥಿಲೇಶ್ವರ್ ಗಣಿಗೆ ಸೇರಿದ 5.21 ಕೋಟಿ ಮೌಲ್ಯದ ಒಟ್ಟು ಆರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಎರಡು ಕಂಪನಿಗಳು ಕಬ್ಬಿಣದ ಅದಿರನ್ನು ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದವು. ಪ್ರಕರಣ ಸಂಬಂಧ ಎಸ್​ಬಿ ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್, ಸರ್ಕಾರಿ ನೌಕರರು ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಲೋಕಾಯುಕ್ತ ಎಸ್​ಐಟಿ ದೂರು ದಾಖಲಿಸಿತ್ತು. ದೂರಿನ ಅನ್ವಯ ಕಂಪನಿಗಳ ವಿರುದ್ಧ ಇಡಿ ಅಧಿಕಾರಿಗಳು ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಇದನ್ನೂ ಓದಿ: Manish Sisodia: ಮನೀಶ್ ಸಿಸೋಡಿಯಾರ ಇಡಿ ಕಸ್ಟಡಿ 5 ದಿನಗಳವರೆಗೆ ವಿಸ್ತರಿಸಿದ ದೆಹಲಿ ನ್ಯಾಯಾಲಯ

ಅಲ್ಲದೆ, ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಕೇಂದ್ರ ಸಶಕ್ತ ಸಮಿತಿ ರಚಿಸಿತ್ತು. ಅದರಂತೆ ನಡೆದ ತನಿಖೆ ವೇಳೆ ನಾಲ್ಕು ಗಣಿಗಳು ಅಕ್ರಮ ನಡೆಸಿರುವುದು ಪತ್ತೆಯಾಗಿದೆ. ಸದ್ಯ ದಿನೇಶ್ ಕುಮಾರ್ ಪಾಲುದಾರಿಕೆಯ ಭಾರತ್ ಮಿನರಲ್ಸ್ ಮೈನ್ಸ್ ಹಾಗೂ ಶಾಂತಲಕ್ಷ್ಮಿ ಮತ್ತು ಜೆ.ಮಿಥಿಲೇಶ್ವರ್ ಗಣಿಗೆ ಸೇರಿದ ಒಟ್ಟು 5.21 ಕೋಟಿ ಮೌಲ್ಯದ 6 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ಇಡಿ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Sun, 19 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!