AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಅಕ್ರಮ ಸಾಗಾಟ ಪ್ರಕರಣ: ಆರೋಪಿ ಸ್ಟಾಪ್ ನರ್ಸ್ ಅರೆಸ್ಟ್, ಇಂದು ಮತ್ತೊಂದು ಮಗುವಿನ ರಕ್ಷಣೆ

ಮಕ್ಕಳ ಅಕ್ರಮ ಸಾಗಾಟ ಪ್ರಕರಣ ಪತ್ತೆ ಸಂಬಂಧ ಓರ್ವ ಮಹಿಳಾ ಆರೋಗ್ಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಲಾಗಿದೆ. ಒಟ್ಟು ಐದು ಮಕ್ಕಳನ್ನು ರಕ್ಷಿಸಿ ವಿಜಯಪುರ ಸಿದ್ದೇಶ್ವರ ದತ್ತು ಕೇಂದ್ರದಲ್ಲಿ ಇರಿಸಿ ಆಶ್ರಯ ನೀಡಲಾಗುತ್ತಿದೆ.

ಮಕ್ಕಳ ಅಕ್ರಮ ಸಾಗಾಟ ಪ್ರಕರಣ: ಆರೋಪಿ ಸ್ಟಾಪ್ ನರ್ಸ್ ಅರೆಸ್ಟ್, ಇಂದು ಮತ್ತೊಂದು ಮಗುವಿನ ರಕ್ಷಣೆ
ಆರೋಪಿ ಜಯಮಾಲಾ
TV9 Web
| Edited By: |

Updated on:May 24, 2022 | 5:57 PM

Share

ವಿಜಯಪುರ: ಮಕ್ಕಳ ಅಕ್ರಮ (Illegal) ಸಾಗಾಟ (Trafficking) ಪ್ರಕರಣ ಪತ್ತೆ ಸಂಬಂಧ ಓರ್ವ ಮಹಿಳಾ ಆರೋಗ್ಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಡಚಣ ತಾಲೂಕಿನ ಜಿಗಜಿವಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಜಯಮಾಲಾ ಬಂಧಿತ ಆರೋಪಿಯಾಗಿದ್ದಾಳೆ. ಈಕೆ ವಿಜಯಪುರ ನಗರದ ಅಥಣಿ ಗಲ್ಲಿ ವಾಸಿಯಾಗಿದ್ದಾಳೆ. ಐದು ಮಕ್ಕಳ ಸಾಕಾಣಿಕೆ ಹಾಗೂ ಸಾಗಾಟ ಮಾಡಿದ್ದ ಆರೋಪದ ಮೇಲೆ ವಿಜಯಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ತಾಯಿಯಿಂದ ಪರಿತ್ಯಕವಾದ, ಪೋಷಕರಿಂದ ದೂರವಾದ ಮಕ್ಕಳನ್ನು ಆರೋಪಿ ಜಯಮಾಲಾ ಅನಧಿಕೃತವಾಗಿ ಸಾಕಿದ್ದಳು. ತನ್ನ ಮನೆಯಲ್ಲಿ 5 ವರ್ಷದ ಗಂಡು ಹಾಗೂ 3 ವರ್ಷದ ಹೆಣ್ಣು ಮಗುವನ್ನು ಸಾಕಿದ್ದಳು. ನಗರದ ದರಬಾರ್ ಗಲ್ಲಿಯ ಶಾಂತಮ್ಮ ಹೆರಕಲ್ ಬಳಿ 3 ವರ್ಷದ ಹೆಣ್ಣು ಮಗು ಹಾಗೂ ಅಥಣಿ ಗಲ್ಲಿಯ ಚಂದ್ರಮ್ಮಾ ಮಾದರ ಬಳಿಯ ಮನೆಯಲ್ಲಿ 11 ತಿಂಗಳ ಹೆಣ್ಣು ಮಗುವನ್ನು ಬಿಟ್ಟಿದ್ದಳು. ಜಯಮಾಲಾಳನ್ನು ಬಂಧಿಸಿದ ನಗರದ ಮಹಿಳಾ ಪೊಲೀಸ್ ಠಾಣೆಯ ಆಧಿಕಾರಿಗಳು ಮತ್ತು ಸಿಬ್ಬಂದಿಗಳು ಆಕೆಯ ಮನೆಯಿಂದ 2 ಮಗುವನ್ನು ಮತ್ತು ಇತರರಿಬ್ಬರ ಮನೆಯಿಂದ 2 ಮಕ್ಕಳನ್ನು ರಕ್ಷಿಸಿದ್ದರು.

ಇದನ್ನೂ ಓದಿ: Crime News: ದೆಹಲಿಯಲ್ಲಿ ನಕಲಿ ನೋಟುಗಳನ್ನು ಪೂರೈಕೆ ಮಾಡುತ್ತಿದ್ದ ಗುಂಪು ಕ್ರೈಂ ಬ್ರಾಂಚ್ ವಶಕ್ಕೆ

ಬಂಧಿತ ಆರೋಪಿಯನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ, ಮಹಾರಾಷ್ಟ್ರದ ಸೊಲ್ಲಾಪುರ ನಗರದ ಒಂದು ಕುಟುಂಬಕ್ಕೆ ಮಗುವನ್ನು ಸಾಗಾಟ ಮಾಡಿದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾಳೆ. ಅದರಂತೆ ಇಂದು ಸೊಲ್ಲಾಪುರಕ್ಕೆ ತೆರಳಿದ ಪೊಲೀಸರ ತಂಡ 5 ವರ್ಷದ ಹೆಣ್ಣು ಮಗುವನ್ನು ರಕ್ಷಿಸುವಲ್ಲಿ ಯಶ್ವಿಯಾಗಿದ್ದಾರೆ. ಮಹಿಳಾ ಪೊಲೀಸ್ ಠಾಣೆಯ ಪಿ.ಎಂ ಚೌರ್, ಎಎಸ್ಐ ಆರ್.ಎಸ್ ಬನಸೋಡೆ, ಹೆಡ್ ಕಾನ್ಸ್ಟೇಬಲ್ ಆರ್​.ಆರ್ ವಾಲೀಕಾರ, ಕಾನ್ಸ್ಟೇಬಲ್ ವಿಠಲ್ ಕಟ್ಟಿಮನಿ ಅವರನ್ನೊಳಗೊಂಡ ತಂಡ ಮಗುವನ್ನು ರಕ್ಷಿಸಿದ್ದಾರೆ.

ಸದ್ಯ ಜಯಮಾಲಾ ವಶದಲ್ಲಿದ್ದ ಹಾಗೂ ಮಾರಾಟ ಮಾಡಿದ್ದ ಒಟ್ಟು ಐದು ಮಕ್ಕಳನ್ನು ರಕ್ಷಿಸಿ ನಗರದ ಸಿದ್ದೇಶ್ವರ ದತ್ತು ಕೇಂದ್ರದಲ್ಲಿ ಇರಿಸಿ ಆಶ್ರಯ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಸಮಂತಾ-ವಿಜಯ್ ದೇವರಕೊಂಡ ಅಪಘಾತ ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್​

ಆದಿಕೇಶವುಲು ಮಗ ಶ್ರೀನಿವಾಸ್​ ಎನ್​ಸಿಬಿ ವಶಕ್ಕೆ

ಡ್ರಗ್ಸ್ ಪ್ರಕರಣ ಸಂಬಂಧ ದಿವಂಗತ ಆದಿಕೇಶವುಲು ನಾಯ್ಡು ಮಗ ಶ್ರೀನಿವಾಸ್​ನನ್ನು ನಾಕ್ರೋಟಿಕ್​ ಕಂಟ್ರೋಲ್​ ಬ್ಯೂರೋ (NCB) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಶ್ರೀನಿವಾಸ್ ನಿವಾಸದ ಮನೆ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಶ್ರೀನಿವಾಸ್​ನ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ. ನಂತರ ಆತನನ್ನು ತೀವ್ರ ವಿಚಾರಣೆ ನೆಡೆಸಿ ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Tue, 24 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ