AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಸ್ನೇಹಿತನ ನೆರವಿನಿಂದ ಗಂಡನ ಕೊಲೆ

ಸ್ನೇಹಿತನಾದ ಚಲುವರಾಜ್ ನೆರವಿನಿಂದ ಡಿ.7ರಂದು ಪತಿ ಶಿವರಾಜ್​ಗೆ ಕಂಠಪೂರ್ತಿ ಕುಡಿಸಿ ಕೈಕಾಲು ಕಟ್ಟಿ ಹಾಕಿ ಹತ್ಯೆ ನಡೆಸಿದ್ದು, ಡಿ.16ರಂದು ಅಡಹಳ್ಳಿಯ ಬಳಿ ಕಬಿನಿ ಬಲದಂಡೆ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಸ್ನೇಹಿತನ ನೆರವಿನಿಂದ ಗಂಡನ ಕೊಲೆ
ಹುಲ್ಲಹಳ್ಳಿ ಪೊಲೀಸ್ ಠಾಣೆ, ಪತ್ನಿ ಸೌಮ್ಯ
sandhya thejappa
| Edited By: |

Updated on: Dec 17, 2020 | 4:20 PM

Share

ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಸ್ನೇಹಿತನ ನೆರವಿನಿಂದ ಪತಿಯನ್ನೇ ಹತ್ಯೆಗೈದ ಘಟನೆ ನಂಜನಗೂಡು ತಾಲೂಕಿನ ಅಡಹಳ್ಳಿಯಲ್ಲಿ ನಡೆದಿದ್ದು, ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನೇಹಿತನಾದ ಚಲುವರಾಜ್ ನೆರವಿನಿಂದ ಡಿ.7ರಂದು ಪತಿ ಶಿವರಾಜ್​ಗೆ ಕಂಠಪೂರ್ತಿ ಕುಡಿಸಿ ಕೈಕಾಲು ಕಟ್ಟಿ ಹಾಕಿ ಹತ್ಯೆ ನಡೆಸಲಾಗಿತ್ತು. ಡಿ. 16ರಂದು ಅಡಹಳ್ಳಿಯ ಬಳಿ ಕಬಿನಿ ಬಲದಂಡೆ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಪ್ರಕರಣ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ  ದಾಖಲಾಗಿತ್ತು.

ಪತಿ ಶಿವರಾಜ್ (29) ನಾಪತ್ತೆಯಾಗಿ ಒಂದು ವಾರವಾದರೂ ಆತನ ಪತ್ನಿ ನಾಪತ್ತೆ ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ನಂಜನಗೂಡು ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಆ ವೇಳೆ ಪತ್ನಿ ಸೌಮ್ಯಾ ನಿಜ ಬಣ್ಣ ಬಯಲಾಗಿದೆ. ಪ್ರಿಯತಮೆ ಮಾತು ಕೇಳಿ ಕೊಲೆ ಮಾಡಿದ ಪ್ರಿಯಕರ ಯೋಗೇಶ್ ಹಾಗೂ ಸ್ನೇಹಿತ ಚಲುವರಾಜ್ ಇದೀಗ ಜೈಲು ಪಾಲಾಗಿದ್ದಾರೆ.

ಟೋ ಡ್ರೈವರ್​ನೊಂದಿಗೆ ಅಕ್ರಮ ಸಂಬಂಧ: ಸೌಮ್ಯಾಳೊಂದಿಗೆ ಶಿವರಾಜ್ ಅನ್ಯೋನ್ಯವಾಗಿ ಸಂಸಾರ ನಡೆಸುತ್ತಿದ್ದ. ಶುಂಠಿ ಕೆಲಸಕ್ಕೆ ಪ್ರತಿದಿನ ಆಟೋದಲ್ಲಿ ತೆರಳುತ್ತಿದ್ದ ಸೌಮ್ಯ ಆಟೋ ಡ್ರೈವರ್ ಯೋಗೇಶ್ ಜೊತೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಗಲಾಟೆಗಳು ನಡೆಯುತ್ತಿತ್ತು, ಶುಂಠಿ ಕೆಲಸಕ್ಕೆ ಹೋಗದಂತೆಯೂ ಪತ್ನಿಗೆ ತಡೆ ಒಡ್ಡಿದ್ದ. ಇದೇ ಕಾರಣಕ್ಕೆ ತನ್ನ ಗಂಡನನ್ನೇ ಹತ್ಯೆಗೈದಿದ್ದಾಳೆಂದು ತಿಳಿದುಬಂದಿದೆ.

ಮೈದುನನ ಜೊತೆ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿ: ಪತಿಯನ್ನೇ ಕೊಲೆ ಮಾಡಿದ ಪತ್ನಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ