AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ: ಅಡಿಕೆ ತರಲು ಪ್ರಿಯಕರನ ಮನೆಗೆ ಹೋದವಳು ಹೆಣವಾದಳು!

ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ ಅನ್ನೋ ಗಾದೆಯಂತೆ ಆಶಾ ಎನ್ನುವ ಮಹಿಳೆಯ ಜೀವನ ಕೂಡ ಅಡಿಕೆ ಹಿಂದೆ ಹೋಗಿದೆ,

ಅನೈತಿಕ ಸಂಬಂಧ: ಅಡಿಕೆ ತರಲು ಪ್ರಿಯಕರನ ಮನೆಗೆ ಹೋದವಳು ಹೆಣವಾದಳು!
ಮೃತ ಮಹಿಳೆ
TV9 Web
| Edited By: |

Updated on:Nov 08, 2022 | 8:55 PM

Share

ತುಮಕೂರು: ಮಹಿಳೆಗೆ ಮದುವೆಯಾಗಿ ಪತಿ ಮತ್ತು ಇಬ್ಬರು ಮಕ್ಕಳಿದ್ದರೂ ಪರಸಂಗದ ಸಹವಾಸ ಮಾಡಿ ಇದೀಗ ದುರಂತ ಅಂತ್ಯ ಕಂಡಿದ್ದಾಳೆ. ಇದರಿಂದ ಇಬ್ಬರು ಮಕ್ಕಳು ತಾಯಿ ಇಲ್ಲದ ತಬ್ಬಲಿಯಾಗಿದ್ದಾವೆ. ಆಶಾ ಎನ್ನುವ ಮಹಿಖೆ ಕಳೆದ 12 ವರ್ಷದ ಹಿಂದೆ ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಗ್ರಾಮದ ನಿವಾಸಿ ಮದುವೆಯಾಗಿದ್ದಳು. ಇವರಿಗೆ ಎರಡು ಮುದ್ದಾದ ಗಂಡು ಮಕ್ಕಳು ಕೂಡ ಇದ್ದರೂ ಸಹ ಪರಸಂಗ ಸಹವಾಸ ಮಾಡಿ ಈಗ ಹೆಣವಾಗಿದ್ದಾಳೆ.

ಆಶಾ ಮದುವೆಗೂ ಮುನ್ನವೇ ಕುರುಬರಹಳ್ಳಿ ಗ್ರಾಮದ ವೆಂಕಟೇಶ್ ಎಂಬಾತ ಜೊತೆ ಅನೈತಿಕ ಸಂಬಂಧ (illicit relationship) ಇಟ್ಟುಕೊಂಡಿದ್ದಳು. ಮದುವೆಯಾದ್ರೂ ಕೂಡ ಸಂಬಂಧ ಮುಂದುವರೆಸಿದ್ದಾಳೆ. ಹೀಗಿರುವಾಗ ಮೊನ್ನೆ ರಾತ್ರಿ ತನ್ನ ಮನೆಯ ಹಿಂದೆ ಇರುವ ಪ್ರಿಯಕರನ ಮನೆಗೆ ಅಡಿಕೆ ತರಲೂ ಹೋಗಿದ್ದಾಳೆ.ಈ ವೇಳೆ ಹಣಕಾಸು ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಗಲಾಟೆ ವೇಳೆ ವೆಂಕಟೇಶ್ ಆಶಾಳ ತಲೆಗೆ ಬಲವಾಗಿ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಕೊಲೆ ಬಳಿಕ ಮೃತದೇಹವನ್ನು ಪಕ್ಕದಲ್ಲಿ ಇದ್ದ ಹಳ್ಳಕ್ಕೆ ಎಸೆದು ಪರಾರಿಯಾಗಿದ್ದ ವೆಂಕಟೇಶ್​ನನ್ನು ಪೊಲೀಸರು ಹುಡುಕಿ ಬಂಧಿಸಿದ್ದಾರೆ.

ಶಿವಮೊಗ್ಗ: ಮದುವೆಯಾಗಿ ಐದೇ ತಿಂಗಳಿಗೆ ನವವಧು ನೇಣಿಗೆ ಬಿಗಿದ ಸ್ಥಿತಿಯಲ್ಲಿ ಪತ್ತೆ!

ಇನ್ನೂ ಮೃತಳಿಗೆ ಎರಡು ಪುಟ್ಟ ಮಕ್ಕಳಿದ್ದು, ತಾಯಿ ಮಾಡಿದ ತಪ್ಪಿಗೆ ಅನಾಥವಾಗಿವೆ. ಅಡಿಕೆ ಕೊಡುತ್ತೇನೆ ಬಾ ಎಂದು ಕರೆದ ವೆಂಕಟೇಶ್ ಜಗಳ ಮಾಡಿ‌ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇನ್ನೂ ಆಶಾಳ ಜೊತೆ ವೆಂಕಟೇಶ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಬಗ್ಗೆ ವೆಂಕಟೇಶ್ ತಾಯಿ ಕೂಡ ಆಗಾಗ ಜಗಳ ಮಾಡುತ್ತಿದ್ದಳಂತೆ. ಆದರೂ ಕೂಡ ತಮ್ಮ ಚಾಳಿ ಬಿಟ್ಟಿರಲಿಲ್ಲ.

ಇನ್ನೂ ವೆಂಕಟೇಶ್ ಮದುವೆಗೂ ಮುನ್ನ ಸ್ವಲ್ಪ ಹಣ ನೀಡಿದ್ದನಂತೆ. ಹಣ ಕೇಳಿದಾಗ ಆಶಾ ಏನೋ ಒಂದು ಹೇಳಿ ನೈಸ್ ಮಾಡಿ ಸುಮ್ಮನೆ ಆಗ್ತಿದ್ದಳು ಎನ್ನಲಾಗಿದೆ . ಇದೇ ವಿಚಾರಕ್ಕೆ ಇದೀಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ಆಶಾ ಸ್ಥಳದಲ್ಲೇ ಕುಸಿದುಬಿದ್ದ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ವೆಂಕಟೇಶ್ ನನ್ನು ದಂಡಿನಶಿವರ ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.

ಒಟ್ಟಾರೆ ಅಕ್ರಮ ಸಂಬಂಧಕ್ಕೆ ಆಶಾ ಬಲಿಯಾಗಿದ್ದು, ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ ಅನ್ನೋ ಗಾದೆಯಂತೆ ಆಶಾಳ ಜೀವನ ಕೂಡ ಅಡಿಕೆ ಹಿಂದೆ ಹೋದಂತಾಗಿದೆ.

ವರದಿ: ಮಹೇಶ್ ಟಿವಿ9 ತುಮಕೂರು ‌

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:53 pm, Tue, 8 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ