AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೊಬ್ಬಳ ಜೊತೆ ಸಂಬಂಧ, ಪತ್ನಿಯನ್ನು ಕೊಂದು ಕುಟುಂಬ ಸಹಿತ ಪತಿ ಪರಾರಿ

ಐದು ವರ್ಷಗಳ ಹಿಂದೆ ಮದುವೆಯಾಗಿದ್ದಾಕೆ ಇದೀಗ ಪತಿಯ ವರದಕ್ಷಿಣ ಕಿರುಕುಳ ಹಾಗೂ ಅಕ್ರಮ ಸಂಬಂಧಕ್ಕೆ ಜೀವ ಕಳೆದುಕೊಂಡಿದ್ದಾಳೆ. ಪ್ರಕರಣ ಸಂಬಂಧ ದಾವಣಗೆರೆಯ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೇರೊಬ್ಬಳ ಜೊತೆ ಸಂಬಂಧ, ಪತ್ನಿಯನ್ನು ಕೊಂದು ಕುಟುಂಬ ಸಹಿತ ಪತಿ ಪರಾರಿ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಗೃಹಿಣಿಯ ಅನುಮಾನಸ್ಪದ ಸಾವು
Rakesh Nayak Manchi
|

Updated on: May 18, 2023 | 5:27 PM

Share

ದಾವಣಗೆರೆ: ತನ್ನನ್ನು ಚೆನ್ನಾಗಿ ನೋಡಿಕೊಳ್ಳಬಹುದು ಎಂದು ಭಾವಿಸಿ ಕುಟುಂಬದ ಹಿರಿಯರ ಸಮ್ಮುಖದಲ್ಲಿ ವಿವಾಹವಾಗಿದ್ದಾಕೆ ಇದೀಗ ಪತಿಯ ಅಕ್ರಮ ಸಂಬಂಧ (Immoral relationship) ಹಾಗೂ ವರದಕ್ಷಿಣೆ ಕಿರುಕುಳದಿಂದ (Dowry harassment) ದಾರುಣ ಅಂತ್ಯಕಂಡಿದ್ದಾಳೆ. ಹೌದು, ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ತನ್ನ ಕುಟುಂಬಸ್ಥರೊಂದಿಗೆ ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ನಡೆದಿದೆ. ಅನಿತಾ (28) ಹತ್ಯೆಯಾದ ಗೃಹಿಣಿ.

ಐದು ವರ್ಷಗಳ ಹಿಂದೆಯಷ್ಟೇ ಅನಿತಾ ಅಶೋಕ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಆದರೆ ಅಶೋಕನಿಗೆ ಬೇರೆ ಯುವತಿ ಜೊತೆ ಅನೈತಿಕ ಸಂಬಂಧವಿತ್ತು. ಇದೇ ಕಾರಣಕ್ಕೆ ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಅನಿತಾಳ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಸದ್ಯ ಘಟನೆ ನಂತರ ಎಸ್ಕೇಪ್ ಆಗಿರುವ ಅಳಿಯ ಮತ್ತು ಅವರ ಕುಟುಂಬಸ್ಥರು ವಿರುದ್ಧ ಪೋಷಕರು ಬಸವಪಟ್ಟಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: Viral Video: ವರದಕ್ಷಿಣೆ ಕೇಳ್ತೀಯಾ… ಮಗಳು, ನೆಂಟರಿಷ್ಟರ ಎದುರೇ ಅಳಿಯನಿಗೆ ಬಿತ್ತು ಮಾವನಿಂದ ಚಪ್ಪಲಿ ಏಟು!

ಅನಿತಾ ಕುಟುಂಬಸ್ಥರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇತ್ತ ಇಬ್ಬರು ಪುಟ್ಟ ಮಕ್ಕಳು ಅಮ್ಮನ ಪ್ರೀತಿಯಿಂದ ವಂಚಿತರಾಗಿದ್ದಾರೆ.

ಮತ್ತಷ್ಟು ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?