Shocking News: ಸ್ವಾತಂತ್ರ್ಯಯ ದಿನ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಒಂದೇ ದಿನದಲ್ಲಿ 6 ದರೋಡೆ ಮಾಡಿದ 16 ವರ್ಷದ ಬಾಲಕ! ಎಲ್ಲಿ?

ಆರೋಪಿಯು ಹದಿಹರೆಯದವನಾಗಿದ್ದು ಮಾದಕ ವ್ಯಸನಿಯಾಗಿದ್ದಾನೆ. 13 ದರೋಡೆ, ಕಳ್ಳತನ ಮತ್ತು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಮುಖ್ಯವಾಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕುಕೃತ್ಯಗಳನ್ನು ಎಸಗಿದ್ದಾನೆ ಎಂದು ದಕ್ಷಿಣ ದೆಹಲಿ ಪೊಲೀಸರು ತಿಳಿಸಿದ್ದಾರೆ.

Shocking News: ಸ್ವಾತಂತ್ರ್ಯಯ ದಿನ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಒಂದೇ ದಿನದಲ್ಲಿ 6 ದರೋಡೆ ಮಾಡಿದ 16 ವರ್ಷದ ಬಾಲಕ! ಎಲ್ಲಿ?
ಸಾಂಧರ್ಬಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on: Aug 18, 2022 | 9:01 PM

ಆರೋಪಿಯು ಹದಿಹರೆಯದವನಾಗಿದ್ದು ಮಾದಕ ವ್ಯಸನಿಯಾಗಿದ್ದಾನೆ. 13 ದರೋಡೆ, ಕಳ್ಳತನ ಮತ್ತು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಮುಖ್ಯವಾಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕುಕೃತ್ಯಗಳನ್ನು ಎಸಗಿದ್ದಾನೆ ಎಂದು ದಕ್ಷಿಣ ದೆಹಲಿ ಪೊಲೀಸರು ತಿಳಿಸಿದ್ದಾರೆ.

24 ಗಂಟೆಗಿಂತ ಕಡಿಮೆ ಅವಧಿಯಲ್ಲಿ, 16 ವರ್ಷದ ಬಾಲಕನೊಬ್ಬ ಸ್ವಾತಂತ್ರ್ಯ ದಿನದಂದು ದಕ್ಷಿಣ ದೆಹಲಿಯ ವಸತಿ ಪ್ರದೇಶಗಳಲ್ಲಿ ಆರು ದರೋಡೆಗಳನ್ನು ನಡೆಸಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ವಿಶೇಷ ಪೊಲೀಸ್ ಸಿಬ್ಬಂದಿ ಕೊನೆಗೂ ಆರೋಪಿಯನ್ನು ಬಂಧಿಸಿದ್ದಾರೆ.

ಹದಿಹರೆಯದ ಯುವಕ ಮಾದಕ ವ್ಯಸನಿಯಾಗಿದ್ದು, 13 ದರೋಡೆ, ಕಳ್ಳತನ ಮತ್ತು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯವಾಗಿ ಸಂಜೆ ಅಥವಾ ತಡರಾತ್ರಿಯಲ್ಲಿ ಏಕಾಂಗಿಯಾಗಿ ರಸ್ತೆಯಲ್ಲಿ ಓಡಾಡುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರ ಮೊಬೈಲ್ ಅಥವಾ ಚಿನ್ನಾಭರಣಗಳನ್ನು ಕಸಿಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಆಗಸ್ಟ್ 15 ರಂದು ಮೊದಲ ಘಟನೆ ಹೌಜ್ ಖಾಸ್‌ನಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ. ಆರೋಪಿ ಬಾಲಕನು ಮಹಿಳೆಯೊಬ್ಬರ ಮೊಬೈಲ್ ಕಿತ್ತುಕೊಂಡು ತನ್ನ ಸ್ಕೂಟರ್ ನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಅದೇ ದಿನ ಸಂಜೆ 5.30ರ ಸುಮಾರಿಗೆ ಮತ್ತೊಬ್ಬ ಮಹಿಳೆಯನ್ನು ಗುರಿಯಾಗಿಸಿಕೊಂಡು ಸಾಕೇತ್‌ನಲ್ಲಿ ಆಕೆಯ ಪರ್ಸ್ ಕಸಿದುಕೊಂಡಿದ್ದಾನೆ ಎನ್ನಲಾಗಿದೆ.

ಬಾಲಕ ಲಾಡೋ ಸರಾಯ್ ಮಾರುಕಟ್ಟೆ ಪ್ರದೇಶಕ್ಕೆ ತೆರಳಿ ಸಂಜೆ 5.40-5.50ರ ಸುಮಾರಿಗೆ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಿತ್ತುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕನೇ ಘಟನೆ ಮಾಳವೀಯ ನಗರದಲ್ಲಿ ಬೆಳಗಿನ ಜಾವ 2.15ರ ಸುಮಾರಿಗೆ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಬ್ಬ ವ್ಯಕ್ತಿ ಆಸ್ಪತ್ರೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಅವರ ಫೋನ್ ಕಸಿದುಕೊಂಡು ತನ್ನ ನೀಲಿ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾನೆ ಎಂದು ಅವರು ಹೇಳಿದರು.

ಮುಂದಿನ ಒಂದು ಗಂಟೆಯಲ್ಲಿ ಆರೋಪಿ ಸಾಕೇತ್ ಮತ್ತು ಗ್ರೇಟರ್ ಕೈಲಾಶ್‌ನಲ್ಲಿ ಫುಡ್​ ಡೆಲಿವರಿ ಬಾಯ್ ಮತ್ತು ಒಬ್ಬ ಮಹಿಳೆಯನ್ನು ಗುರಿಯಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ದೂರುದಾರರು ಆರೋಪಿಯು ನೀಲಿ ಸ್ಕೂಟರ್‌ನಲ್ಲಿ ಓಡಾಡುತ್ತಿದ್ದ ಎಂಬ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಎಲ್ಲಾ ಸಿಸಿಟಿವಿಗಳನ್ನು ಪರಿಶೀಲಿಸಿ, ಹುಡುಗನನ್ನು ಹುಡುಕಲು ಪ್ರಾರಂಭಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಆರೋಪಿಯ ಪತ್ತೆಗೆ ಹಲವು ತಂಡಗಳನ್ನು ನಿಯೋಜಿಸಲಾಗಿ, ಆರೋಪಿಯು ಬುಧವಾರ ಅದೇ ಸ್ಕೂಟರ್‌ನೊಂದಿಗೆ ಬಿಆರ್‌ಟಿ ಪ್ರದೇಶಕ್ಕೆ ಬರುತ್ತಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ತಂಡಗಳನ್ನು ಸಿದ್ಧಪಡಿಸಿಕೊಂಡು, ಆರೋಪಿಯನ್ನು ಹೆಡೆಮುರಿಗೆ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು indianexpress ವರದಿ ಮಾಡಿದೆ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ