AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan News: ಪತ್ನಿ ಸೇರಿ ಆಕೆಯ ಪೋಷಕರಿಂದ ಕಿರುಕುಳ ಆರೋಪ: ಮನನೊಂದು ಸಾವಿಗೆ ಶರಣಾದ ನವವಿವಾಹಿತ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತ ಸಾವಿಗೆ ಶರಣಾದ ಘಟನೆ ನಡೆದಿದೆ. ಕಿರಣ್ ಬಿ.ಬಿ. (26) ಮೃತ ದುರ್ದೈವಿ.

Hassan News: ಪತ್ನಿ ಸೇರಿ ಆಕೆಯ ಪೋಷಕರಿಂದ ಕಿರುಕುಳ ಆರೋಪ: ಮನನೊಂದು ಸಾವಿಗೆ ಶರಣಾದ ನವವಿವಾಹಿತ
ಮೃತ ರ್ದುದೈವಿ
ಮಂಜುನಾಥ ಕೆಬಿ
| Edited By: |

Updated on: Aug 02, 2023 | 9:52 AM

Share

ಹಾಸನ, ಆ.2: ಜಿಲ್ಲೆಯ ಚನ್ನರಾಯಪಟ್ಟಣ(Channarayapatna) ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ನವವಿವಾಹಿತ ಸಾವಿಗೆ ಶರಣಾದ ಘಟನೆ ನಡೆದಿದೆ. ಕಿರಣ್ ಬಿ.ಬಿ. (26) ಮೃತ ದುರ್ದೈವಿ. ಇನ್ನು ಮೂಲತಃ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದವನಾದ ಕಿರಣ್, ಬೇಕರಿ ನಡೆಸುತ್ತಿದ್ದ. ಕಳೆದ ಫೆ.19 ರಂದು ದಂಡಿಗನಹಳ್ಳಿ ಹೋಬಳಿಯ ವಗರಹಳ್ಳಿ ಗ್ರಾಮದ ಸ್ಪಂದನಾ (24) ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ನಂತರ ಪತ್ನಿ ಸ್ಪಂದನಾ ಸೇರಿ ಆಕೆಯ ತಂದೆ ವಾಸು, ತಾಯಿ ಗೀತಾ, ಅಜ್ಜಿ ರತ್ನಮ್ಮ ಹಣಕ್ಕಾಗಿ ಬೇಡಿಕೆಯಿಟ್ಟು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕಿರಣ್ ವಿರುದ್ಧ ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್

ಇನ್ನು ಮದುವೆಯಾಗಿ ಒಂದು ವರ್ಷವೂ ಕಳೆದಿಲ್ಲ ಅಷ್ಟರಲ್ಲಿಯೇ ಕಿರಣ್ ವಿರುದ್ಧ ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಿದ್ದ ಬಗ್ಗೆ ಕಿರಣ್ ಪೋಷಕರು ಆರೋಪ ಮಾಡಿದ್ದಾರೆ. ಇನ್ನು ಜೈಲುಪಾಲಾಗಿದ್ದ ಕಿರಣ್,​ವಾರದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ಎಲ್ಲಾ ಘಟನೆಯಿಂದ ಮನನೊಂದು ಜುಲೈ 31ರ ರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಖುಷ್​​ ಖುಷಿಯಾಗಿದ್ದ ನವದಂಪತಿ ಬೆಳ್ಳಂಬೆಳಗ್ಗೆ ಜೋಡಿಯಾಗಿಯೇ ಶವವಾದರು: ನವದಂಪತಿಯದ್ದು ಕೊಲೆಯೋ, ಆತ್ಮಹತ್ಯೆಯೋ?

ದೇವರ ಮೂರ್ತಿ ಕಳ್ಳತನ ಮಾಡ್ತಿದ್ದ ಕಳ್ಳನ ಬಂಧನ

ಕಲಬುರಗಿ: ದೇವರ ಮೂರ್ತಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಇದೀಗ ಮಹಗಾಂವ್ ಪೊಲೀಸರು ಬಂಧಿಸಿದ್ದಾರೆ. ಮುದ್ದಡಗಾ ಗ್ರಾಮದ ಯಲ್ಲಾಲಿಂಗ್ ಇಟಕರ್(40) ಬಂಧಿತ ಆರೋಪಿ. ಇತ ಕಮಲಾಪುರ ತಾಲೂಕಿನ ಚಂದ್ರನಗರ ಗ್ರಾಮದ ಬೀರಲಿಂಗೇಶ್ವರ ಮತ್ತು ಮಾಳಿಂಗರಾಯ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ. ಇನ್ನು ಬಂಧಿತನಿಂದ 2 ಬೆಳ್ಳಿ ಬಸವಣ್ಣನ ಮೂರ್ತಿ, 2 ಬೆಳ್ಳಿ ತ್ರಿಶೂಲ, ಕಂಚಿನ ಕಳಸ ಸೇರಿದಂತೆ 68,300 ರೂ. ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ