AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯನ್ನು ಕೊಲ್ಲಲು ವಾಟ್ಸಾಪ್ ಸ್ಟೇಟಸ್‌ನಲ್ಲಿ ₹ 50,000 ಬಹುಮಾನ ಘೋಷಿಸಿದ ಪತ್ನಿ

ಡಿಸೆಂಬರ್ 21, 2023 ರಂದು ಭಿಂಡ್‌ನಿಂದ ಹಿಂದಿರುಗುತ್ತಿದ್ದಾಗ ತನ್ನ ಮಾವ- ಅತ್ತೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪತಿ ಹೇಳಿಕೊಂಡಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ ಆತನ ಪತ್ನಿ ತನ್ನ ಪತಿಯನ್ನು ಕೊಲ್ಲುವ ವ್ಯಕ್ತಿಗೆ ₹ 50,000 ಬಹುಮಾನ ನೀಡುವುದಾಗಿ ವಾಟ್ಸಾಪ್ ಸ್ಟೇಟಸ್ ಅನ್ನು ಹಂಚಿಕೊಂಡಿದ್ದಾಳೆ.

ಪತಿಯನ್ನು ಕೊಲ್ಲಲು ವಾಟ್ಸಾಪ್ ಸ್ಟೇಟಸ್‌ನಲ್ಲಿ ₹ 50,000 ಬಹುಮಾನ ಘೋಷಿಸಿದ ಪತ್ನಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Mar 31, 2024 | 5:34 PM

ಆಗ್ರಾ ಮಾರ್ಚ್ 31: ಆಗ್ರಾದ (Agra) ಬಹ್ ಜಿಲ್ಲೆಯ ದಂಪತಿ ಜಗಳವಾಡಿಕೊಂಡಿದ್ದು, ಪತಿಯ ಹತ್ಯೆಗೆ (murder) ಪತ್ನಿ ₹ 50,000 ಬಹುಮಾನವನ್ನು ಘೋಷಿಸಿದ್ದಾರೆ. ಅಂದ ಹಾಗೆ ಆಕೆ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ(WhatsApp status) ಈ ಆಫರ್ ನೀಡಿದ್ದಾರೆ. ಪತಿ ಪತ್ನಿಯ ಸ್ಟೇಟಸ್ ನೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ ಪತ್ನಿಯ ಸ್ನೇಹಿತರೊಬ್ಬರು ಬೆದರಿಕೆ ಹಾಕಿದ್ದರು ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.

ನೋಂದಾಯಿತ ದೂರಿನಲ್ಲಿ, ಪತಿ ಜುಲೈ 9, 2022 ರಂದು ಮಧ್ಯಪ್ರದೇಶದ ಭಿಂಡ್‌ನ ಹಳ್ಳಿಯೊಂದರ ಮಹಿಳೆಯನ್ನು ವಿವಾಹವಾದರು ಎಂದು ಬಹಿರಂಗಪಡಿಸಿದ್ದಾರೆ. ಸ್ವಲ್ಪ ಸಮಯದ ನಂತರ, ಅವರ ನಡುವೆ ಜಗಳ ಮತ್ತು ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡವು. ಐದು ತಿಂಗಳ ಕಾಲ ಅತೃಪ್ತಿಕರ ದಾಂಪತ್ಯದ ನಂತರ, ಡಿಸೆಂಬರ್ 2022 ರಲ್ಲಿ, ಮಹಿಳೆ ಬಹ್‌ನಲ್ಲಿರುವ ತನ್ನ ಗಂಡನ ಮನೆಯನ್ನು ತೊರೆದು ತನ್ನ ಹೆತ್ತವರ ಮನೆಗೆ ಹಿಂದಿರುಗಿದಳು. ಅಂದಿನಿಂದ ಮಹಿಳೆ ತನ್ನ ಪೋಷಕರೊಂದಿಗೇ ಇದ್ದಾಳೆ. ಇದೀಗ ದೂರಿನ ಪ್ರಕಾರ ಮಹಿಳೆ ಭಿಂಡ್‌ನ ಪೊಲೀಸ್ ಠಾಣೆಯಲ್ಲಿ ಜೀವನಾಂಶ ದಾವೆ ಹೂಡಿದ್ದಾರೆ.

ಡಿಸೆಂಬರ್ 21, 2023 ರಂದು ಭಿಂಡ್‌ನಿಂದ ಹಿಂದಿರುಗುತ್ತಿದ್ದಾಗ ತನ್ನ ಮಾವ- ಅತ್ತೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪತಿ ಹೇಳಿಕೊಂಡಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ ಆತನ ಪತ್ನಿ ತನ್ನ ಪತಿಯನ್ನು ಕೊಲ್ಲುವ ವ್ಯಕ್ತಿಗೆ ₹ 50,000 ಬಹುಮಾನ ನೀಡುವುದಾಗಿ ವಾಟ್ಸಾಪ್ ಸ್ಟೇಟಸ್ ಅನ್ನು ಹಂಚಿಕೊಂಡಿದ್ದಾಳೆ.

‘ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ನೀಡಲಾಗುವುದು’ ಎಂದು ಪತ್ನಿಯ ಸ್ಟೇಟಸ್​​ನಲ್ಲಿ  ಬರೆಯಲಾಗಿದೆ ಎಂದು ದಾಖಲಾದ ದೂರಿನಲ್ಲಿ ಪತಿ ಉಲ್ಲೇಖಿಸಿದ್ದಾರೆ.

ಈಟಿವಿ ಭಾರತ್ ವರದಿಯ ಪ್ರಕಾರ, ನೆರೆಯ ಮನೆಯಲ್ಲಿ ವಾಸಿಸುವ ಬಾಡಿಗೆದಾರನೊಂದಿಗೆ ತನ್ನ ಹೆಂಡತಿ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಅವರ ಮದುವೆಯ ಆರಂಭದಿಂದಲೂ ಎಲ್ಲಾ ವಿವಾದಗಳಿಗೆ ಏಕೈಕ ಕಾರಣ ಈ ಸಂಬಂಧ ಎಂದು ಅವರು ಹೇಳಿದ್ದಾರೆ.”ಆಕೆಯ ಪ್ರಿಯಕರ ಕೂಡ ದೂರವಾಣಿ ಕರೆ ಮೂಲಕ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಕಾಲೇಜು ಕಟ್ಟಡದಿಂದ ಬಿದ್ದು ಸಾಯುವ ಮುನ್ನ ಅಪ್ಪ, ಅಮ್ಮ, ಅಕ್ಕ, ತಂಗಿಗೆ ಕರುಳುಹಿಂಡುವ ಮೆಸೇಜ್ ಬರೆದ ಬಾಲಕಿ

ಏತನ್ಮಧ್ಯೆ, 2019 ರಲ್ಲಿ ಗುರುಗ್ರಾಮ್‌ನಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದೆ, ಅಲ್ಲಿ ಪತ್ನಿ ತನ್ನ ಗಂಡನ ಹಂತಕರಿಗೆ ₹ 16 ಲಕ್ಷ ನೀಡಿದ್ದಾಳೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್