AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಲಿವಿಂಗ್​​​ ಟುಗೆದರ್​ ರಿಲೇಷನ್​ಶಿಪ್​​ನಲ್ಲಿದ್ದ ಜೋಡಿ ಅನುಮಾಸ್ಪದ ಸಾವು

ಬೆಂಗಳೂರಿನ ಬನ್ನೇರುಘಟ್ಟ(Bannerughatta)ದ ಜನತಾ ಕಾಲೋನಿಯಲ್ಲಿ ಲಿವಿಂಗ್​​​ ಟುಗೆದರ್​ ರಿಲೇಶನ್​ಶಿಪ್​​(Living Together relationship)ನಲ್ಲಿದ್ದ ಜೋಡಿಯೊಂದು ಅನುಮಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್: ಲಿವಿಂಗ್​​​ ಟುಗೆದರ್​ ರಿಲೇಷನ್​ಶಿಪ್​​ನಲ್ಲಿದ್ದ ಜೋಡಿ ಅನುಮಾಸ್ಪದ ಸಾವು
ಮೃತ ರ್ದುದೈವಿಗಳು
ರಾಮು, ಆನೇಕಲ್​
| Edited By: |

Updated on:Jun 05, 2024 | 3:48 PM

Share

ಬೆಂಗಳೂರು, ಜೂ.05: ಲಿವಿಂಗ್​​​ ಟುಗೆದರ್​ ರಿಲೇಶನ್​ಶಿಪ್​​(Living Together relationship)ನಲ್ಲಿದ್ದ ಜೋಡಿ ಅನುಮಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ(Bannerughatta)ದ ಜನತಾ ಕಾಲೋನಿಯಲ್ಲಿ ನಡೆದಿದೆ. ವಿಷಸೇವಿಸಿ ಪ್ರಭು(38) ಹಾಗೂ ಲಕ್ಕಮ್ಮ(30) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪ್ರಭು ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಲಕ್ಕಮ್ಮ ಗಾರ್ಮೆಂಟ್ಸ್​​ ಕಂಪನಿಗೆ ಕೆಲಸ ಹೋಗುತ್ತಿದ್ದರು ಎನ್ನಲಾಗಿದೆ.

ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಇನ್ನು ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರ ಪರಿಚಯವಾಗಿತ್ತು. ಈ ಹಿನ್ನಲೆ ಇಬ್ಬರು ಒಂದೇ ಮನೆಯಲ್ಲಿ ಲಿವಿಂಗ್ ಟುಗೆದರ್ ರಿಲೇಶನ್​ಶಿಪ್​ನಲ್ಲಿದ್ದರು. ಇದೀಗ ಈ ಜೋಡಿ ಕಳೆದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಅವರು ವಾಸವಿದ್ದ ಮನೆಯಲ್ಲಿ ಕೆಟ್ಟ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಇದನ್ನ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ತಿಳಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಹೆಚ್ಚಿದ ಅಪಘಾತಗಳ ಸಂಖ್ಯೆ; ಮೂರೇ ವರ್ಷದಲ್ಲಿ 262 ಸಾವು

ಸ್ಥಳಕ್ಕೆ  ಪೊಲೀಸರು ಭೇಟಿ

ಇನ್ನು ಇವರು ವಿಶ್ವನಾಥ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದರು. ಮೃತ ಪಟ್ಟು ಮೂರ್ನಾಲ್ಕು ದಿನಗಳಾಗಿದ್ದರಿಂದ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಶುರು ಮಾಡಿದ್ದಾರೆ. ಇತ್ತ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ, ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕವೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಬೆಳಕಿಗೆ ಬರಲಿದೆ.

 ಅರಕಲಗೂಡಿನಲ್ಲಿ ಸಿಡಿಲಿಗೆ ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರು ಬಲಿ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಬಳಿ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರ ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕರಾದ ಮುತ್ತಮ್ಮ(70), ಪುಟ್ಟಮ್ಮ(63) ಸಾವು. ಇಂದು ಮಧ್ಯಾಹ್ನ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಮಳೆ ಬಂದಿದೆ. ಈ ಹಿನ್ನಲೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎ.ಮಂಜು, ಯೋಗಕ್ಷೇಮ ವಿಚಾರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Wed, 5 June 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು