AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಲಿವಿಂಗ್​​​ ಟುಗೆದರ್​ ರಿಲೇಷನ್​ಶಿಪ್​​ನಲ್ಲಿದ್ದ ಜೋಡಿ ಅನುಮಾಸ್ಪದ ಸಾವು

ಬೆಂಗಳೂರಿನ ಬನ್ನೇರುಘಟ್ಟ(Bannerughatta)ದ ಜನತಾ ಕಾಲೋನಿಯಲ್ಲಿ ಲಿವಿಂಗ್​​​ ಟುಗೆದರ್​ ರಿಲೇಶನ್​ಶಿಪ್​​(Living Together relationship)ನಲ್ಲಿದ್ದ ಜೋಡಿಯೊಂದು ಅನುಮಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್: ಲಿವಿಂಗ್​​​ ಟುಗೆದರ್​ ರಿಲೇಷನ್​ಶಿಪ್​​ನಲ್ಲಿದ್ದ ಜೋಡಿ ಅನುಮಾಸ್ಪದ ಸಾವು
ಮೃತ ರ್ದುದೈವಿಗಳು
ರಾಮು, ಆನೇಕಲ್​
| Edited By: |

Updated on:Jun 05, 2024 | 3:48 PM

Share

ಬೆಂಗಳೂರು, ಜೂ.05: ಲಿವಿಂಗ್​​​ ಟುಗೆದರ್​ ರಿಲೇಶನ್​ಶಿಪ್​​(Living Together relationship)ನಲ್ಲಿದ್ದ ಜೋಡಿ ಅನುಮಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ(Bannerughatta)ದ ಜನತಾ ಕಾಲೋನಿಯಲ್ಲಿ ನಡೆದಿದೆ. ವಿಷಸೇವಿಸಿ ಪ್ರಭು(38) ಹಾಗೂ ಲಕ್ಕಮ್ಮ(30) ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪ್ರಭು ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಲಕ್ಕಮ್ಮ ಗಾರ್ಮೆಂಟ್ಸ್​​ ಕಂಪನಿಗೆ ಕೆಲಸ ಹೋಗುತ್ತಿದ್ದರು ಎನ್ನಲಾಗಿದೆ.

ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಇನ್ನು ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರ ಪರಿಚಯವಾಗಿತ್ತು. ಈ ಹಿನ್ನಲೆ ಇಬ್ಬರು ಒಂದೇ ಮನೆಯಲ್ಲಿ ಲಿವಿಂಗ್ ಟುಗೆದರ್ ರಿಲೇಶನ್​ಶಿಪ್​ನಲ್ಲಿದ್ದರು. ಇದೀಗ ಈ ಜೋಡಿ ಕಳೆದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಅವರು ವಾಸವಿದ್ದ ಮನೆಯಲ್ಲಿ ಕೆಟ್ಟ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಇದನ್ನ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ತಿಳಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಹೆಚ್ಚಿದ ಅಪಘಾತಗಳ ಸಂಖ್ಯೆ; ಮೂರೇ ವರ್ಷದಲ್ಲಿ 262 ಸಾವು

ಸ್ಥಳಕ್ಕೆ  ಪೊಲೀಸರು ಭೇಟಿ

ಇನ್ನು ಇವರು ವಿಶ್ವನಾಥ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದರು. ಮೃತ ಪಟ್ಟು ಮೂರ್ನಾಲ್ಕು ದಿನಗಳಾಗಿದ್ದರಿಂದ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಶುರು ಮಾಡಿದ್ದಾರೆ. ಇತ್ತ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ, ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕವೇ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಬೆಳಕಿಗೆ ಬರಲಿದೆ.

 ಅರಕಲಗೂಡಿನಲ್ಲಿ ಸಿಡಿಲಿಗೆ ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರು ಬಲಿ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಬಳಿ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರ ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕರಾದ ಮುತ್ತಮ್ಮ(70), ಪುಟ್ಟಮ್ಮ(63) ಸಾವು. ಇಂದು ಮಧ್ಯಾಹ್ನ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಮಳೆ ಬಂದಿದೆ. ಈ ಹಿನ್ನಲೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎ.ಮಂಜು, ಯೋಗಕ್ಷೇಮ ವಿಚಾರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Wed, 5 June 24

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್