AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಅಕ್ರಮ ಸಂಬಂಧ ಆರೋಪ; ದೊಣ್ಣೆಯಿಂದ ಹೊಡೆದು ಗಾರೆ ಮೇಸ್ತ್ರಿ ಕೊಲೆ ಮಾಡಿದ ಕಾರ್ಮಿಕ

ಆತ ತಮಿಳುನಾಡಿನಿಂದ ಬಂದು ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡಿಕೊಂಡಿದ್ದ. ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡು ಒಳ್ಳೆಯ ಹೆಸರಿನ ಜೊತೆಗೆ ತಕ್ಕಮಟ್ಟಿಗೆ ಸಂಪಾದನೆ ಮಾಡುತ್ತಿದ್ದ. ಆದ್ರೆ, ಈತನಿಗೊಂದು ಕೆಟ್ಟ ಚಾಳಿಯಿತ್ತು. ಕೊನೆಗೆ ಅದೇ ಆತನ ಸಾವಿಗೆ ಕಾರಣವಾಗಿದೆ.

ಆನೇಕಲ್: ಅಕ್ರಮ ಸಂಬಂಧ ಆರೋಪ; ದೊಣ್ಣೆಯಿಂದ ಹೊಡೆದು ಗಾರೆ ಮೇಸ್ತ್ರಿ ಕೊಲೆ ಮಾಡಿದ ಕಾರ್ಮಿಕ
ಮೃತ ವ್ಯಕ್ತಿ
ರಾಮು, ಆನೇಕಲ್​
| Edited By: |

Updated on: Aug 18, 2023 | 6:56 AM

Share

ಬೆಂಗಳೂರು, ಆ.18: ತನ್ನ ಬಳಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನಿಂದಲೇ ಬರ್ಬರವಾಗಿ ಹತ್ಯೆಯಾದ ಘಟನೆ ಬೆಂಗಳೂರು(Bengaluru) ಹೊರವಲಯ ಆನೇಕಲ್ (Anekal)ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಬೇಗಿಹಳ್ಳಿಯ ವಸುಂಧರ ಲೇಔಟ್​ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ದಿಲೀಪ್ ಮೃತ ವ್ಯಕ್ತಿ. ಇತ ಮೂಲತಃ ತಮಿಳುನಾಡು(Tamil Nadu) ಮೂಲದ ಗಾರೆ ಮೇಸ್ತ್ರಿಯಾಗಿದ್ದು, ಕಳೆದ ಕೆಲವು ತಿಂಗಳುಗಳ ಹಿಂದೆ ಬೇಗಿಹಳ್ಳಿಯ ವಸುಂಧರ ಲೇಔಟ್​ನಲ್ಲಿ ಒಪ್ಪಂದ ಪಡೆದುಕೊಂಡು ಕಟ್ಟಡ ನಿರ್ಮಾಣ ಮಾಡಿಕೊಂಡಿದ್ದ. ಈತನ ಬಳಿ ಹತ್ತಾರು ಮಂದಿ ಕೂಲಿ ಕಾರ್ಮಿಕರು ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ರಾಯಚೂರು ಮೂಲದ ಕೂಲಿ ಕಾರ್ಮಿಕ ಮಹಿಳೆ ಜೊತೆಗೆ ಮೇಸ್ತ್ರಿ ದಿಲೀಪ್ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಬೆಳಿಗ್ಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ದಿಲೀಪ್ ಹಾಗೂ ಮಹಿಳೆ ಜೊತೆಯಲ್ಲಿರುವುದನ್ನು ಕಂಡ ಮಹಿಳೆಯ ಪತಿ ಹೊನ್ನಪ್ಪ ಎಂಬಾತ ಆಕ್ರೋಶಗೊಂಡು ಅಲ್ಲಿಯೇ ಇದ್ದ ದೊನ್ನೆಯಿಂದ ಮೇಸ್ತ್ರಿ ದಿಲೀಪ್ ತಲೆಗೆ ಹೊಡೆದಿದ್ದಾನೆ.

ಇನ್ನು ನಿರ್ಮಾಣ ಹಂತದ ಬಿಲ್ಡಿಂಗ್ ಬಳಿ ಗಲಾಟೆ ಶಬ್ದ ಕೇಳಿ ಅಲ್ಲಿನ ಸುತ್ತಮುತ್ತಲಿನ ನಿವಾಸಿಗಳು, ಕೂಲಿ ಕಾರ್ಮಿಕರು ಓಡಿ ಬಂದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೇಸ್ತ್ರಿ ದಿಲೀಪ್​ನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿದ್ರು, ಚಿಕಿತ್ಸೆ ಫಲಾಕಾರಿಯಾಗದೆ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಡಿಷನಲ್ ಎಸ್ಪಿ ಪುರುಷೋತ್ತಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಹೊನ್ನಪ್ಪನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಡ್ರೈ ಫ್ರೂಟ್ಸ್​​ ಕೆಲಸ ಮಾಡಿಕೊಂಡಿದ್ದ ಯುವಕ, ರಂಜಾನ್​ಗೆ ಊರಿಗೆ ಹೋದ ಎರಡನೇ ದಿನವೇ ಬರ್ಬರವಾಗಿ ಹತ್ಯೆಗೀಡಾದ

ಘಟನೆ ಸಂಬಂಧ ಬನ್ನೇರುಘಟ್ಟ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಹೊನ್ನಪ್ಪನನ್ನು ವಶಕ್ಕೆ ಪಡೆದು ತನಿಖೆಯನದ್ನು ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಮೇಲ್ನೊಟಕ್ಕೆ ತಿಳಿದಿದ್ದು, ಪೋಲೀಸರ ಸಂಪೂರ್ಣ ತನಿಖೆ ಬಳಿಕ ಕೊಲೆಗೆ ಬೇರೆ ಇನ್ಯಾವುದಾದರೂ ಕಾರಣ ಇದೆಯಾ ಎನ್ನುವ ಬಗ್ಗೆ ತಿಳಿದು ಬರಬೇಕಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು