AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪ್ರೇಯಸಿ ಜತೆ ಹೋಗುತ್ತಿದ್ದವನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಬರ್ಬರ ಹತ್ಯೆ

ಹುಬ್ಬಳ್ಳಿಯ ನೇಹಾ, ಅಂಜಲಿ ಸೇರಿದಂತೆ ರಾಜ್ಯದೆಲ್ಲೆಡೆ ಹಲವಾರು ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದೀಗ ಬೆಳಗಾವಿಯಲ್ಲಿ ಪ್ರೇಯಸಿ ಜೊತೆ ಬೈಕ್​ನಲ್ಲಿ ಹೊರಟಿದ್ದ ಆಕೆಯ ಸಹೋದರನನ್ನೇ ಬರ್ಬರವಾಗಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳಗಾವಿ: ಪ್ರೇಯಸಿ ಜತೆ ಹೋಗುತ್ತಿದ್ದವನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಬರ್ಬರ ಹತ್ಯೆ
ಆರೋಪಿ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 16, 2024 | 5:57 PM

Share

ಬೆಳಗಾವಿ, ಮೇ.16: ಸ್ಕ್ರೂಡ್ರೈವರ್​ನಿಂದ ಚುಚ್ಚಿ ಯುವಕನೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶನಗರದ ಬ್ರಿಡ್ಜ್ ಬಳಿ ಇಂದು(ಮೇ.16) ಮಧ್ಯಾಹ್ನ ನಡೆದಿದೆ. ಬೆಳಗಾವಿ(Belagavi)ಯ ಗಾಂಧಿನಗರ ನಿವಾಸಿ ಇಬ್ರಾಹಿಂ ಗೌಸ್(22) ಕೊಲೆಯಾದ ಯುವಕ. ಪ್ರೇಯಸಿ ಜೊತೆ ಬೈಕ್​ನಲ್ಲಿ ಹೊರಟಿದ್ದ ಆಕೆಯ ಸಹೋದರನನ್ನ ಅಡ್ಡಗಟ್ಟಿದ ಆರೋಪಿ ಮುಜಾಮಿಲ್ ಸತ್ತಿಗೇರಿ, ಸ್ಕ್ರೂಡ್ರೈವರ್​ನಿಂದ ಇರಿದು ಪರಾರಿಯಾಗಿದ್ದ. ಗಾಯಾಳು ಗೌಸ್​ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಾಕುವಿನಿಂದ ಇರಿದು ಯುವಕನ ಹತ್ಯೆಗೈದ ದುರುಳರು

ದಾವಣಗೆರೆ: ತಾಲೂಕಿನ ಓಬಜ್ಜಿಹಳ್ಳಿ ಬಳಿ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ತೆ ಮಾಡಲಾಗಿದೆ. ದಾವಣಗೆರೆಯ ಬೂದಾಳ್ ರಸ್ತೆಯ ನಿವಾಸಿ ಸುದೀಪ್(25) ಮೃತ ರ್ದುದೈವಿ. ಇನ್ನು ಮೃತ ಸುದೀಪ್,  ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ರಾತ್ರಿ ವೇಳೆ ಗಲಾಟೆಯಾಗಿ ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಅಂಜಲಿ ಕೊಲೆ ಮಾಡಿ ಹಂತಕ ಪರಾರಿಯಾಗಿದ್ದೆಲ್ಲಿಗೆ? ಮಹತ್ವದ ಸುಳಿವು ಲಭ್ಯ

ರಸ್ತೆ ಡಿವೈಡರ್‌ಗೆ ಗುದ್ದಿ ಲಾರಿ ಪಲ್ಟಿ

ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ಹೆದ್ದಾರಿಯಲ್ಲಿ ಲಾರಿಯೊಂದು ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿ ಹೊತ್ತಿಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಟೈರ್ ಸ್ಪೋಟದಿಂದ ಲಾರಿಗೆ ಬೆಂಕಿ ತಗುಲಿದ ಶಂಕೆ ವ್ಯಕ್ತವಾಗಿದೆ. ಇನ್ನು ಹೆದ್ದಾರಿಯಲ್ಲಿ ಲಾರಿ ಅಡ್ಡಲಾಗಿ ಬಿದ್ದ ಹಿನ್ನೆಲೆ ಕೆಲಕಾಲ ಟ್ರಾಫಿಕ್​ ಜಾಮ್ ಉಂಟಾಗಿದ್ದು, ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Thu, 16 May 24

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು