AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ, ಮೂವರು ಅರೆಸ್ಟ್

ಇಂದಿನ ದಿನಗಳಲ್ಲಿ ಯುವಕ-ಯುವತಿಯರು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿಯೇ ಇರಲು ಬಯಸುತ್ತಾರೆ. ಅದರಂತೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಯುವಕನೊಬ್ಬನಿಂದ ಯುವತಿಯೊಬ್ಬಳು ಪ್ರೀತಿ ಹೆಸರಿನಲ್ಲಿ ಮೋಸ ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ, ಮೂವರು ಅರೆಸ್ಟ್
ಬಂಧಿತ ಆರೋಪಿಗಳು
Jagadisha B
| Edited By: |

Updated on: Aug 01, 2023 | 8:00 AM

Share

ಬೆಂಗಳೂರು, ಆ.1: ಇಂದಿನ ದಿನಗಳಲ್ಲಿ ಯುವಕ-ಯುವತಿಯರು ಹೆಚ್ಚಾಗಿ ಸಾಮಾಜಿಕ ಜಾಲತಾಣ (Social Media)ದಲ್ಲಿಯೇ ಇರಲು ಬಯಸುತ್ತಾರೆ. ಅದರಲ್ಲಿ ಅದೆಷ್ಟೋ ಪರಿಚಯವಿಲ್ಲದ ವ್ಯಕ್ತಿಗಳೊಂದಿಗೆ ಸಂಪರ್ಕ ಮಾಡುತ್ತಾರೆ. ಅದರಂತೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಯುವಕನೊಬ್ಬನಿಂದ ಯುವತಿಯೊಬ್ಬಳು ಪ್ರೀತಿ ಹೆಸರಿನಲ್ಲಿ ಮೋಸ ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕ ಹುಡುಗಿಯೊಂದಿಗೆ ಪ್ರೀತಿಯ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ನೊಂದ ಯುವತಿ ಕೊಡಿಗೆಹಳ್ಳಿ ಪೊಲೀಸರಿಗೆ ದೂರು ನೀಡಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆ್ಯಂಡಿ ಜಾರ್ಜ್, ಸಂತೋಷ್, ಶಶಿ ಬಂಧಿತ ಆರೋಪಿಗಳು.

ಘಟನೆ ವಿವರ

ಖಾಸಗಿ ಶಾಲೆಯ ಡ್ಯಾನ್ಸಿಂಗ್ ಟೀಚರ್ ಆಗಿರುವ ಆ್ಯಂಡಿ ಜಾರ್ಜ್ ಎಂಬಾತನಿಗೆ ಎರಡು ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಲೇಜೊಂದರ ವಿದ್ಯಾರ್ಥಿನಿ ಪರಿಚಯವಾಗಿದ್ದಳು. ಆಕೆಯೊಂದಿಗೆ ಪ್ರೀತಿ ಆ್ಯಂಡಿ ಹೆಸರಲ್ಲಿ ಸುತ್ತಾಡಿದ್ದನು. ಈ ವೇಳೆ ಆಕೆಯ ಜೊತೆ ಕೆಲ ಖಾಸಗಿ ಫೋಟೋಗಳನ್ನು ಸೆರೆ ಹಿಡಿದಿದ್ದ. ಬಳಿಕ ಅದೇ ಫೋಟೋ ಬಳಸಿಕೊಂಡು ಆಕೆಗೆ ಬೆದರಿಕೆ ಹಾಕಿದ್ದಾನೆ. ಆತಂಕಗೊಂಡು ಯುವತಿ ಆತನಿಂದ ದೂರಾಗಿದ್ದಳು. ಬಳಿಕ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬೆದರಿಸಿ ಅತ್ಯಾಚಾರ ಮಾಡಿ, ಮೊಬೈಲ್ ವಿಡಿಯೋವನ್ನು ಮಾಡಿಕೊಂಡಿದ್ದನಂತೆ. ಇದೇ ರೀತಿಯಾಗಿ ಹಲವು ಬಾರಿ ಬೆದರಿಸಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಹಾವೇರಿ: ಪ್ರೇಯಸಿ ಸಹೋದರರಿಂದ ಟಾರ್ಚರ್, ಅಣ್ಣನ ಲವ್ ಸ್ಟೋರಿಗೆ ಬಲಿಯಾದ ತಮ್ಮ

ಮೂವರಿಂದ ಪ್ರತ್ಯೇಕವಾಗಿ ಅತ್ಯಾಚಾರ ಆರೋಪ

ಇನ್ನು ಆರೋಪಿ ಆ್ಯಂಡಿ ಜಾರ್ಜ್ ಅಷ್ಟೇ ಅಲ್ಲ, ಬಳಿಕ ಆತನ ಗೆಳೆಯರಿಂದಲೂ ಸಹ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಹೌದು, ಆ್ಯಂಡಿ ಗೆಳೆಯರು ಕೂಡ ಬೆದರಿಸಿ ಯುವತಿಯನ್ನು ಕರೆಸಿಕೊಂಡು ಪ್ರತ್ಯೇಕವಾಗಿ ಇಬ್ಬರಿಂದಲೂ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಇದಾದ ಬಳಿಕ ಆರೋಪಿ ಆ್ಯಂಡಿ ಜಾರ್ಜ್ ತೆಗೆದಿದ್ದ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನಂತೆ. ಇದರಿಂದ ನೊಂದ ಯುವತಿ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ದೂರು ಹಿನ್ನಲೆ ಇದೀಗ ಮೂವರನ್ನು ಬಂಧಿಸಿದ್ದು, ಆರೋಪಿಗಳ ಬಳಿಯಿದ್ದ ಮೊಬೈಲ್, ಪೆನ್ ಡ್ರೈವ್ ಸೇರಿದಂತೆ ಟೆಕ್ನಿಕಲ್ ಸಾಕ್ಷಿಗಳನ್ನ ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ