AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಹಾಡಹಗಲೇ ರೌಡಿಶೀಟರ್ ಭೀಕರ ಹತ್ಯೆ

ವಿಜಯಪುರ(Vijayapura) ‌ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಪೆರೋಲ್ ಮೇಲೆ ಇದ್ದ ರೌಡಿಶೀಟರ್​​ ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಚಡಚಣ ಪಟ್ಟಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಹಾಡಹಗಲೇ ರೌಡಿಶೀಟರ್ ಭೀಕರ ಹತ್ಯೆ
ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Jun 16, 2024 | 3:20 PM

Share

ವಿಜಯಪುರ, ಜೂ.16: ‌ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ವಿಜಯಪುರ(Vijayapura) ‌ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಪೆರೋಲ್ ಮೇಲೆ ಇದ್ದ ರೌಡಿಶೀಟರ್​​ ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮನೆಯಿಂದ ಚಡಚಣ ಪಟ್ಟಣಕ್ಕೆ ತೆರಳುತ್ತಿದ್ದಾಗ ಹಂತಕರು ದಾಳಿ ನಡೆಸಿದ್ದಾರೆ.

ಫೈರಿಂಗ್ ವೇಳೆ ಅಶೋಕ್​ನ​ ಬೆನ್ನಿಗೆ 3ಕ್ಕೂ ಹೆಚ್ಚು ಗುಂಡುಗಳು ಬಿದ್ದಿದೆ. ಗುಂಡಿನ ದಾಳಿಯಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಕೊಲೆಗೀಡಾದ ರೌಡಿಶೀಟರ್ ಅಶೋಕ್ ಪತ್ನಿ ಚಡಚಣ ಪಟ್ಟಣ ಪಂಚಾಯತಿ ಸದಸ್ಯೆಯಾಗಿದ್ದಾರೆ. ಇತ್ತೀಚೆಗೆ ಪೆರೋಲ್​ ಮೇಲೆ ಮೃತ ಅಶೋಕ್ ಜೈಲಿನಿಂದ ಹೊರಬಂದಿದ್ದ​​​. ಇತ ಕೊಲೆ ಹಾಗೂ ಇತರೆ ಕೇಸ್​ಗಳಲ್ಲಿ ಅಪರಾಧಿಯಾಗಿದ್ದ. ಇದೀಗ ಹಳೇ ದ್ವೇಷದ ಹಿನ್ನೆಲೆ ರೌಡಿಶೀಟರ್​ ಅಶೋಕ್​ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಡಚಣ ಪಟ್ಟಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವ್ಯಕ್ತಿಯೊರ್ವನಿಗೆ ಪಿಎಸ್​​ಐ ನಿಂದ ಕಿರುಕುಳ ಆರೋಪ; ಮನನೊಂದು ಠಾಣೆ ಮುಂದೆಯೇ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರ ಠಾಣೆ ಬಳಿಯ ನಡುರಸ್ತೆಯಲ್ಲಿಯೇ ನಡೆದಿದೆ. ಎಲ್​ಎಂಎಲ್ ಶೇಖರ್ ಕೊಲೆಯಾದ ವ್ಯಕ್ತಿ. ಮೇಲ್ನೋಟಕ್ಕೆ ಅನೈತಿಕ ಸಂಬಂಧ, ಕಿರುಕುಳ ಹಾಗೂ ಹಳೆ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Sun, 16 June 24