AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಅಪ್ರಾಪ್ತ ಬಾಲಕಿಯೊಂದಿಗೆ ಸರಸ ಸಲ್ಲಾಪ ವೇಳೆ ಸಿಕ್ಕಿ ಬಿದ್ದ ಶಿಕ್ಷಕ; ಇಬ್ಬರನ್ನೂ ವಿವಸ್ತ್ರಗೊಳಿಸಿ ಥಳಿಸಿದ ಜನ

ಅಪ್ರಾಪ್ತ ಬಾಲಕಿ ಮತ್ತು ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಮೂವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ಗುರುವಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಬಿಹಾರ: ಅಪ್ರಾಪ್ತ ಬಾಲಕಿಯೊಂದಿಗೆ ಸರಸ ಸಲ್ಲಾಪ ವೇಳೆ ಸಿಕ್ಕಿ ಬಿದ್ದ ಶಿಕ್ಷಕ; ಇಬ್ಬರನ್ನೂ ವಿವಸ್ತ್ರಗೊಳಿಸಿ ಥಳಿಸಿದ ಜನ
ಬಿಹಾರ ಪೊಲೀಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 22, 2023 | 2:46 PM

Share

ಪಾಟ್ನಾ ಜುಲೈ 22: ಬಿಹಾರದಲ್ಲಿ (Bihar) ಅಪ್ರಾಪ್ತ ಬಾಲಕಿಯೊಂದಿಗೆ ಶಿಕ್ಷಕರೊಬ್ಬರು (Music Teacher) ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಸಿಕ್ಕಿ ಬಿದ್ದಿದ್ದು, ಇವರಿಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿದ ಘಟನೆ ವರದಿ ಆಗಿದೆ. ಈ ಘಟನೆಯ ವಿಡಿಯೊ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದ್ದು, ಮೂವರು ವ್ಯಕ್ತಿಗಳು ಅಪ್ರಾಪ್ತ ಬಾಲಕಿ ಮತ್ತು ಶಿಕ್ಷಕನ  ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವ್ಯಕ್ತಿಯನ್ನು ಸಂಗೀತ ಶಿಕ್ಷಕ ಎಂದು ಗುರುತಿಸಲಾಗಿದ್ದು, ಈತನ ವಯಸ್ಸು 40 ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ನೀಡಿದ ಹೇಳಿಕೆ ಆಧರಿಸಿ ಸಂಗೀತ ಶಿಕ್ಷಕನನ್ನು ಬಂಧಿಸಿದ್ದೇವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 67 ಬಿ ಮತ್ತು ಐಪಿಸಿಯ ಸೆಕ್ಷನ್ 376 ರ (ಲೈಂಗಿಕ ಅಪರಾಧ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್​​ಪಿ ಯೋಗೇಂದ್ರ ಕುಮಾರ್ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿ ಮತ್ತು ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಮೂವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ಗುರುವಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ವಿಡಿಯೊವನ್ನು ಪರಿಶೀಲಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳ ಬಟ್ಟೆಗಳನ್ನು ಮತ್ತು ಸ್ಥಳದಿಂದ ವಶಪಡಿಸಿಕೊಂಡ ಇತರ ಪುರಾವೆಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕುಮಾರ್ ಹೇಳಿದರು.

ಇದನ್ನೂ ಓದಿ: ಮೊಹಬ್ಬತ್ ಕಿ ದುಕಾನ್ ಪ್ರಾಮಾಣಿಕ ಗ್ರಾಹಕರಿಗಾಗಿ ಅಲ್ಲ: ಗೆಹ್ಲೋಟ್ ಸರ್ಕಾರವನ್ನು ಟೀಕಿಸಿದ ಬಿಜೆಪಿ

ಪ್ರಕರಣದ ತನಿಖೆಗಾಗಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಆಕೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Sat, 22 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ