AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು

ಸ್ನೇಹಿತರು ಎಂದರೆ ಒಡಹುಟ್ಟಿದವನಿಗಿಂತ ಒಂದು ಕೈ ಹೆಚ್ಚು ಎಂಬಂತಿದೆ. ಆದರೆ, ಅವರೇ ಮೋಸ ಮಾಡಿದರೆ ಯಾರನ್ನ ನಂಬುವುದು. ಹೌದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ(Gundlupete)ಯಲ್ಲಿ ಕೇವಲ 2 ಸಾವಿರ ಸಾಲದ ವಿಚಾರಕ್ಕೆ ಗೆಳೆಯನನ್ನೇ ಹೊಡೆದು ಕೊಂದು ಅಪಘಾತದ ಕಥೆ ಕಟ್ಟಿದ ಘಟನೆ ನಡೆದಿದೆ.

ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು
ಮೃತ ವ್ಯಕ್ತಿ ಮಾದಪ್ಪ, ಕುಟುಂಬಸ್ಥರು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 07, 2024 | 3:38 PM

ಚಾಮರಾಜನಗರ, ಜೂ.07: ಕೇವಲ 2 ಸಾವಿರ ಸಾಲದ ವಿಚಾರಕ್ಕೆ ಗೆಳೆಯನನ್ನೇ ಹೊಡೆದು ಕೊಂದು ಅಪಘಾತದ ಕಥೆ ಕಟ್ಟಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ(Gundlupete)ಯಲ್ಲಿ ತಡ ರಾತ್ರಿ ನಡೆದಿದೆ. ಮಾದಪ್ಪ ಎಂಬಾತನಿಗೆ ಆರೋಪಿಗಳಾದ ರಮೇಶ್ ಹಾಗೂ ಮಲ್ಲ ಎಂಬುವವರು ಕಪಾಳಕ್ಕೆ ಹೊಡೆದು ಕೊಂದಿದ್ದಾರೆ. ಮೃತ ಮಾದಪ್ಪ ಗುಂಡ್ಲುಪೇಟೆಯಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ. ಕಳೆದೊಂದು ವಾರದ ಹಿಂದೆ ಮಲ್ಲ ಎಂಬುವವನ ಬಳಿ 2 ಸಾವಿರ ಸಾಲ ಪಡೆದಿದ್ದ. ನಿನ್ನೆ(ಜೂ.06) ರಾತ್ರಿ ಮನೆಯಲ್ಲಿದ್ದ ಮಾದಪ್ಪನನ್ನ ಕುಡಿಯಲು ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ.

ಮದ್ಯದ ಅಮಲಿನಲ್ಲಿ ಜಗಳ; ಕೊಲೆ ಮಾಡಿ ಕಥೆ ಕಟ್ಟಿದ ಗೆಳೆಯರು

ಇನ್ನು ಮೊದಲೆ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದ ಇವರ ನಡುವೆ ರಮೇಶ ಹಾಗೂ ಮಲ್ಲ ಎರಡು ಸಾವಿರ ಹಣದ ವಿಚಾರ ಪ್ರಸ್ಥಾಪ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಗಲಾಟೆಯಾಗಿದ್ದು, ಕೋಪದಲ್ಲಿ ಮಾದಪ್ಪನ ಕೆನ್ನೆಗೆ ರಮೇಶ್​ ಜೋರಾಗಿ ಹೊಡೆದಿದ್ದಾನೆ. ಈ ವೇಳೆ ಒಂದೇ ಏಟಿಗೆ ಮಾದಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಆರೋಪಿಗಳಿಬ್ಬರೂ ಅಪಘಾತದ ಕಥೆ ಕಟ್ಟಿದ್ದಾರೆ.

ಇದನ್ನೂ ಓದಿ:ಊಟ ಮಾಡಿ ಮಲಗಿದ್ದ ವ್ಯಕ್ತಿಯ ಭೀಕರ ಕೊಲೆ ಪ್ರಕರಣ; ಒಡೆದ ಬಳೆ ಚೂರಿನಿಂದ ಆರೋಪಿ ಬಂಧನ

ಯಾವಾಗ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆವಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಚಾಮರಾಜನಗರದ ಚಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಣದ ವಿಚಾರಕ್ಕೆ ಜೊತೆಗಿದ್ದ ಗೆಳೆಯರೇ ಕೊಲೆ ಮಾಡಿರುವುದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?