ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು

ಸ್ನೇಹಿತರು ಎಂದರೆ ಒಡಹುಟ್ಟಿದವನಿಗಿಂತ ಒಂದು ಕೈ ಹೆಚ್ಚು ಎಂಬಂತಿದೆ. ಆದರೆ, ಅವರೇ ಮೋಸ ಮಾಡಿದರೆ ಯಾರನ್ನ ನಂಬುವುದು. ಹೌದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ(Gundlupete)ಯಲ್ಲಿ ಕೇವಲ 2 ಸಾವಿರ ಸಾಲದ ವಿಚಾರಕ್ಕೆ ಗೆಳೆಯನನ್ನೇ ಹೊಡೆದು ಕೊಂದು ಅಪಘಾತದ ಕಥೆ ಕಟ್ಟಿದ ಘಟನೆ ನಡೆದಿದೆ.

ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು
ಮೃತ ವ್ಯಕ್ತಿ ಮಾದಪ್ಪ, ಕುಟುಂಬಸ್ಥರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 07, 2024 | 3:38 PM

ಚಾಮರಾಜನಗರ, ಜೂ.07: ಕೇವಲ 2 ಸಾವಿರ ಸಾಲದ ವಿಚಾರಕ್ಕೆ ಗೆಳೆಯನನ್ನೇ ಹೊಡೆದು ಕೊಂದು ಅಪಘಾತದ ಕಥೆ ಕಟ್ಟಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ(Gundlupete)ಯಲ್ಲಿ ತಡ ರಾತ್ರಿ ನಡೆದಿದೆ. ಮಾದಪ್ಪ ಎಂಬಾತನಿಗೆ ಆರೋಪಿಗಳಾದ ರಮೇಶ್ ಹಾಗೂ ಮಲ್ಲ ಎಂಬುವವರು ಕಪಾಳಕ್ಕೆ ಹೊಡೆದು ಕೊಂದಿದ್ದಾರೆ. ಮೃತ ಮಾದಪ್ಪ ಗುಂಡ್ಲುಪೇಟೆಯಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ. ಕಳೆದೊಂದು ವಾರದ ಹಿಂದೆ ಮಲ್ಲ ಎಂಬುವವನ ಬಳಿ 2 ಸಾವಿರ ಸಾಲ ಪಡೆದಿದ್ದ. ನಿನ್ನೆ(ಜೂ.06) ರಾತ್ರಿ ಮನೆಯಲ್ಲಿದ್ದ ಮಾದಪ್ಪನನ್ನ ಕುಡಿಯಲು ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ.

ಮದ್ಯದ ಅಮಲಿನಲ್ಲಿ ಜಗಳ; ಕೊಲೆ ಮಾಡಿ ಕಥೆ ಕಟ್ಟಿದ ಗೆಳೆಯರು

ಇನ್ನು ಮೊದಲೆ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದ ಇವರ ನಡುವೆ ರಮೇಶ ಹಾಗೂ ಮಲ್ಲ ಎರಡು ಸಾವಿರ ಹಣದ ವಿಚಾರ ಪ್ರಸ್ಥಾಪ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಗಲಾಟೆಯಾಗಿದ್ದು, ಕೋಪದಲ್ಲಿ ಮಾದಪ್ಪನ ಕೆನ್ನೆಗೆ ರಮೇಶ್​ ಜೋರಾಗಿ ಹೊಡೆದಿದ್ದಾನೆ. ಈ ವೇಳೆ ಒಂದೇ ಏಟಿಗೆ ಮಾದಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಆರೋಪಿಗಳಿಬ್ಬರೂ ಅಪಘಾತದ ಕಥೆ ಕಟ್ಟಿದ್ದಾರೆ.

ಇದನ್ನೂ ಓದಿ:ಊಟ ಮಾಡಿ ಮಲಗಿದ್ದ ವ್ಯಕ್ತಿಯ ಭೀಕರ ಕೊಲೆ ಪ್ರಕರಣ; ಒಡೆದ ಬಳೆ ಚೂರಿನಿಂದ ಆರೋಪಿ ಬಂಧನ

ಯಾವಾಗ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆವಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಚಾಮರಾಜನಗರದ ಚಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಣದ ವಿಚಾರಕ್ಕೆ ಜೊತೆಗಿದ್ದ ಗೆಳೆಯರೇ ಕೊಲೆ ಮಾಡಿರುವುದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್