AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾಗಿದ್ರು ಪತಿಯನ್ನ ಬಿಟ್ಟು ಪ್ರಿಯಕರನ ಜೊತೆ ವಾಸ; ಸಹಿಸದ ಗಂಡ, ಪತ್ನಿಯನ್ನ ಕೊಂದು ಮಗುವಿನ ಜೊತೆ ಎಸ್ಕೇಪ್

ಆಕೆ ನೋಡುವುದಕ್ಕೆ ರೂಪವಂತೆ ಓದು ಬರಹ ಗೊತ್ತಿಲ್ಲದಿದ್ರು, ತನ್ನ ಅಂದ ಚೆಂದದ ಜೊತೆಗೆ ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ಲು. ಹೀಗಾಗಿಯೇ ಮದುವೆಯಾದರೂ ಆಕೆಯ ಹಿಂದೆ ಬಿದ್ದ ಸೋದರ ಸಂಬಂಧಿ, ಬೇರೆಡೆ ಮನೆ ಮಾಡಿ ಮಗು ಜೊತೆ ಇಟ್ಟುಕೊಂಡಿದ್ದ. ಆದ್ರೆ, ಇದೇ ಇದೀಗ ಆಕೆಯ ಜೀವಕ್ಕೆ ಮುಳುವಾಗಿದ್ದು ಮನೆಯಲ್ಲೆ ಕೊಲೆಯಾಗಿ ಹೋಗಿದ್ದಾಳೆ.

ಪ್ರೀತಿಸಿ ಮದುವೆಯಾಗಿದ್ರು ಪತಿಯನ್ನ ಬಿಟ್ಟು ಪ್ರಿಯಕರನ ಜೊತೆ ವಾಸ; ಸಹಿಸದ ಗಂಡ, ಪತ್ನಿಯನ್ನ ಕೊಂದು ಮಗುವಿನ ಜೊತೆ ಎಸ್ಕೇಪ್
ದೊಡ್ಡಬಳ್ಳಾಪುರ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 14, 2023 | 9:17 AM

Share

ಬೆಂಗಳೂರು ಗ್ರಾಮಾಂತರ: ಈ ಪೋಟೋದಲ್ಲಿರುವ ಯುವತಿಯ ಹೆಸರು ಭಾರತಿ ಮೂಲತಃ ಮಧುಗಿರಿ(Madhugiri) ಮೂಲದವಳಾದ ಈಕೆ ಕೆಲಸಕ್ಕೆ ಹೋಗುವ ವೇಳೆ ಹರೀಶ್ ಎಂಬುವವನ ಜೊತೆ ಪರಿಚಯವಾಗಿ, ಪ್ರೀತಿಯ ಬಲೆಗೆ ಬಿದ್ದು ಮದುವೆನೂ ಆಗಿದ್ದಳು. ಜೊತೆಗೆ ಇಬ್ಬರ ಅನೂನ್ಯ ಸಂಸಾರಕ್ಕೆ ಇಬ್ಬರು ಮಕ್ಕಳು ಸಹ ಸಾಕ್ಷಿಯಾಗಿದ್ದು ಗಂಡ ಹೆಂಡತಿ ಇಬ್ಬರು ದುಡಿಯುವುದಕ್ಕೆಂದು ಬೆಂಗಳೂರು ಮತ್ತು ತಮಿಳುನಾಡಿಗೆ ಹೋಗಿ ಬದುಕು ಕಟ್ಟಿಕೊಂಡಿದ್ರು. ಈ ನಡುವೆ ಭಾರತಿಗೆ ತನ್ನ ಹಳೆ ಸೋದರ ಸಂಬಂಧಿ ಗಂಗರಾಜು ಜೊತೆ ಲವ್ವಿಡವ್ವಿ ಶುರುವಾಗಿದ್ದು, ಅಲ್ಲಲ್ಲಿ ಸಿಕ್ಕ ಸಿಕ್ಕ ಕೆಲಸ ಮಾಡಿಕೊಂಡಿದ್ದ ಗಂಗರಾಜು ಜೊತೆ ಕಳೆದ 12 ದಿನಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಕೋಳೂರು ಗ್ರಾಮಕ್ಕೆ ಬಂದು, ಅಲ್ಲಿ ನಾವು ಗಂಡ ಹೆಂಡತಿಯೆಂದು ಹೇಳಿ ಬಾಡಿಗೆ ಮನೆಯೊಂದನ್ನ ಪಡೆದು 4 ವರ್ಷದ ಮಗು ಜೊತೆ ವಾಸವಾಗಿದ್ದರು.

ಗಂಡ ಕುಡಿದು ಟೈಟ್​ ಆದ ಎಂದು ಪ್ರಿಯಕರನ ಜೊತೆ ಮಲಗಿಕೊಂಡ ಪತ್ನಿ

ಈ ವಿಚಾರ ತಿಳಿದುಕೊಂಡ ಗಂಡ ಹರೀಶ್ ಮೂರು ದಿನಗಳಿಂದೆ ಗ್ರಾಮಕ್ಕೆ ಬಂದಿದ್ದು, ಮನೆಯಲ್ಲಿದ್ದ ಪತ್ನಿ ಜೊತೆ ಮಾತನಾಡಿ ನಿನ್ನೆ(ಜು.13) ಮನೆಯಲ್ಲೆ ಉಳಿದುಕೊಂಡಿದ್ದಾನೆ. ಈ ವೇಳೆ ಗಂಡ ಕುಡಿದು ಟೈಟ್ ಆಗಿದ್ದಾನೆಂದು, ಗಂಡನ ಮುಂದೆಯೆ ಪ್ರಿಯಕರನ ಜೊತೆ ಕೊಠಡಿಯಲ್ಲಿ ಮಲಗಿದ್ದಾಳೆ. ಅದನ್ನ ಗಂಡ ಹರೀಶ ನೋಡಿದ್ದನಂತೆ. ಹೀಗಾಗಿ ಆಕ್ರೋಶಗೊಂಡ ಹರೀಶ್, ಪತ್ನಿ ಜೊತೆ ಜಗಳ ಮಾಡಿದ್ದಾನೆ. ನಿನ್ನೆ ಸಂಜೆ ದೊಣ್ಣೆಯಿಂದ ಪತ್ನಿಯ ತಲೆಗೆ ಹೊಡೆದು ನಂತರ ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ಮಗುವನ್ನ ಕರೆದುಕೊಂಡು ಮನೆಗೆ ಚಿಲಕ ಹಾಕಿ, ನಂತರ ಸೀದಾ ತನ್ನ ಊರಿನತ್ತ ಹೊರಟಿದ್ದಾನೆ.

ಇದನ್ನೂ ಓದಿ:ಮನೆಯಲ್ಲಿದ್ದ ಗೃಹಿಣಿ ಕೊಲೆ ಮಾಡಿ 5 ವರ್ಷದ ಮಗು ಕಿಡ್ನ್ಯಾಪ್, ಪ್ರಿಯಕರ ಕೃತ್ಯವೆಸಗಿರುವ ಶಂಕೆ

ಸಂಜೆ ಭಾರತಿಗೆ ಕರೆ ಮಾಡಿದ ಪ್ರಿಯಕರ ಗಂಗರಾಜು ಎಷ್ಟು ಭಾರಿ ಕರೆ ಮಾಡಿದ್ರು, ಪೋನ್ ಪಿಕ್ ಮಾಡದ ಕಾರಣ ಸ್ನೇಹಿತ ಸುರೇಶ್​ನನ್ನ ಮನೆ ಬಳಿಗೆ ನೋಡಲು ಕಳಿಸಿದ್ದಾನೆ. ಈ ವೇಳೆ ಭಾರತಿ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನ ಕಂಡ ಸುರೇಶ್​, ನಂತರ ಪ್ರಿಯಕರನನ್ನ ಮನೆಗೆ ಕರೆಸಿಕೊಂಡು ಮನೆಯಲ್ಲಿ ಕೂಡಿ ಹಾಕಿ ಮನೆ ಮಾಲೀಕರ ಸಹಾಯದದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಇನ್ನು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಿಯಕರನನ್ನ ವಶಕ್ಕೆ ಪಡೆದು ಮೃತದೇಹವನ್ನ ಶವಾಗಾರಕ್ಕೆ ರವಾನಿಸಿದ್ದಾರೆ.

ಮೃತಳ ಸಂಬಂಧಿಕರ ಆಕ್ರೋಶ

ಇನ್ನು ಪ್ರಿಯಕರ ಗಂಗರಾಜುಗೆ ಈಗಾಗಲೆ ಎರಡು ಮದುವೆಯಾಗಿ ಇಬ್ಬರನ್ನು ಕೊಲೆ ಮಾಡಿದ್ದು ಇದೀಗ ನಮ್ಮ ಮಗಳನ್ನು ಬಲಿಪಡೆದುಕೊಂಡಿದ್ದಾನೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆ ಪ್ರೀತಿಸಿ ಮದುವೆಯಾಗಿ ಇಬ್ಬರು ಮಕ್ಕಳಿದ್ರು, ಪರಸಂಗದ ಸಹವಾಸಕ್ಕೆ ಬಿದ್ದ ಸುಂದರಿ ಪ್ರೀತಿಸಿ ಮದುವೆಯಾದವನಿಂದಲೇ ಕೊಲೆಯಾಗಿ ಹೋಗಿದ್ದಾಳೆ. ಮಾಡಿದ ತಪ್ಪಿಗೆ ಗಂಡ ಜೈಲು ಸೇರಿದ್ರೆ, ಪತ್ನಿ ಪರಲೋಕ ಸೇರಿಕೊಂಡಿದ್ದಾಳೆ. ಈ ಮಧ್ಯೆ ಏನು ತಿಳಿಯದ ಇಬ್ಬರು ಕಂದಮ್ಮಗಳು ಚಿಕ್ಕ ವಯಸ್ಸಿನಲ್ಲಿ ತಂದೆ ತಾಯಿ ಪ್ರೀತಿ ಕಳೆದುಕೊಂಡು ಅನಾಥವಾಗಿದ್ದು ನಿಜಕ್ಕೂ ದುರಂತ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:17 am, Fri, 14 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ