AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ದೇವರೇ…ಬುದ್ದಿ ಹೇಳಿದಕ್ಕೆ ಹೆತ್ತ ತಾಯಿಯನ್ನೇ ಕೊಂದ ಮಗ, ಬಳಿಕ ಮಾಡಿದ್ದೇನು ಗೊತ್ತಾ?

ಹೆತ್ತು ಹೊತ್ತು ಸಾಕಿದ ತಾಯಿಯನ್ನೇ ಪಾಪಿ ಮಗನೊಬ್ಬ ಭೀಕರವಾಗಿ ಕೊಲೆ ಮಾಡಿದ ಘಟನೆ ಗದಗ(Gadag) ನಗರದ ದಾಸರ ಓಣಿಯಲ್ಲಿ ನಡೆದಿದೆ. ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಯ್ಯೋ ದೇವರೇ...ಬುದ್ದಿ ಹೇಳಿದಕ್ಕೆ ಹೆತ್ತ ತಾಯಿಯನ್ನೇ ಕೊಂದ ಮಗ, ಬಳಿಕ ಮಾಡಿದ್ದೇನು ಗೊತ್ತಾ?
ಆರೋಪಿ ಸಿದ್ಧಲಿಂಗ, ಮೃತ ತಾಯಿ ಶಾರದಮ್ಮ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 28, 2024 | 3:39 PM

Share

ಗದಗ, ಆ.28: ಬುದ್ದಿ ಹೇಳಿದಕ್ಕೆ ಮಗನೇ ಹೆತ್ತ ತಾಯಿಯನ್ನ ಕೊಲೆ ಮಾಡಿದ ಘಟನೆ ಗದಗ(Gadag) ನಗರದ ದಾಸರ ಓಣಿಯಲ್ಲಿ ನಡೆದಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿ. ಮಾನಸಿಕ ಅಸ್ವಸ್ಥ ಪುತ್ರ ಸಿದ್ಧಲಿಂಗ, ಮಲಗಿದಲ್ಲೇ ತಾಯಿಯನ್ನು  ಕೊಂದಿದ್ದಾನೆ. ನಿನ್ನೆ ಪಕ್ಕದ ಮನೆಯವರ ಜೊತೆ ಸಿದ್ಧಲಿಂಗ ಜಗಳ ಮಾಡಿಕೊಂಡಿದ್ದ. ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು. ಇದಾಗಿ ಬೆಳಿಗ್ಗೆ ಆಗುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ.

ತಾಯಿ ಕೊಂದು ಸಹೋದರಿಯರಿಗೆ ಫೋನ್ ಮಾಡಿದ

ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ, ಅಮ್ಮ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾನೆ. ಮಾನಸಿಕ ಅಸ್ವಸ್ಥ ಸಹೋದರನ ಮಾತು ನಂಬದ ಅಕ್ಕಂದಿರು, ಬಳಿಕ ಪೊಲೀಸರು ಮಾಹಿತಿ ನೀಡಿದ ಬಳಿಕ ಓಡೋಡಿ ಬಂದಿದ್ದಾರೆ. ಅಜ್ಜಿ ಮಲಗಿದ ಹಾಸಿಗೆಯಲ್ಲಾ ರಕ್ತಸಿಕ್ತವಾಗಿದ್ದು, ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ರಾಯಚೂರಿನಲ್ಲಿ ಪತ್ನಿ, ಅಜ್ಜಿ ಜೋಡಿ ಕೊಲೆ ಪ್ರಕರಣಕ್ಕೆ ಟ್ವೀಸ್ಟ್​! ಪೊಲೀಸ್ ತನಿಖೆ ವೇಳೆ ಬಯಲಾಯ್ತು ಹತ್ಯೆಯ ಸತ್ಯಾಂಶ

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

ಹಾಸನ: ಬೇಲೂರು ತಾಲೂಕಿನ ಜೆ.ಸುರಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಮಲ್ಲಿಕಾರ್ಜುನ(58) ಎಂಬಾತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆಗಸ್ಟ್​ 13ರಂದು ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿತ್ತು. ಬಳಿಕ ಗಾಯಗೊಂಡಿದ್ದ ಮಲ್ಲಿಕಾರ್ಜುನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Wed, 28 August 24

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್