AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರ: ಹೋಟೆಲ್​​ನಲ್ಲಿ ಜಗಳವಾಡಿ ಸಿಟ್ಟಿಗೆದ್ದು ಇಬ್ಬರ ಮೇಲೆ ಕಾರು ಹರಿಸಿದ ವ್ಯಕ್ತಿ; ಮಹಿಳೆ ಸಾವು

ಮಂಗಳವಾರ ಬೆಳಗ್ಗೆ 5:30 ಮತ್ತು 6 ಗಂಟೆಗೆ ಜೈಪುರದ ಜವಾಹರ್ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗಿರ್ಧರ್ ಮಾರ್ಗ್‌ನಲ್ಲಿರುವ ಹೋಟೆಲ್‌ನ ಹೊರಗೆ ಈ ಘಟನೆ ನಡೆದಿದೆ. ಹೊಟೇಲ್ ಹೊರಭಾಗದಲ್ಲಿ ಯುವಕ ಹಾಗೂ ಯುವತಿಯನ್ನು ಕಾರಿನಡಿಗೆ ಸಿಲುಕಿಸಲು ಯತ್ನಿಸಲಾಗಿದೆ. ಇದರಲ್ಲಿ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜೈಪುರ: ಹೋಟೆಲ್​​ನಲ್ಲಿ ಜಗಳವಾಡಿ ಸಿಟ್ಟಿಗೆದ್ದು ಇಬ್ಬರ ಮೇಲೆ ಕಾರು ಹರಿಸಿದ ವ್ಯಕ್ತಿ; ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Dec 27, 2023 | 5:59 PM

Share

ಜೈಪುರ ಡಿಸೆಂಬರ್  27: ತೀವ್ರ ವಾಗ್ವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕಾರು ಹರಿಸಿದ್ದು, ಮಹಿಳೆ ಸಾವಿಗೀಡಾದ ಘಟನೆ ಜೈಪುರದಲ್ಲಿ (Jaipur) ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆ ಮಂಗಳವಾರ ಮುಂಜಾನೆ ಜೈಪುರದ ಜವಾಹರ್ ಸರ್ಕಲ್ ಪ್ರದೇಶದ (Jawahar Circle area )ಹೋಟೆಲ್‌ನ ಹೊರಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಆರೋಪಿ ಮಂಗೇಶ್ ಅರೋರಾ, ಉಮಾ ಮತ್ತು ಆಕೆಯ ಸ್ನೇಹಿತ ರಾಜ್‌ಕುಮಾರ್ ಮೇಲೆ ಕಾರು ಹರಿಸಿದ್ದಾನೆ. ವಿಡಿಯೋದಲ್ಲಿ ಪುರುಷರ ಗುಂಪು ಕಾರಿನ ಮುಂದೆ ನಿಂತಿದ್ದು, ಅವರಲ್ಲಿ ಒಬ್ಬರು ಕಾರನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಮಂಗೇಶ್ ತನ್ನ ಕಾರನ್ನು ಉಮಾ ಮತ್ತು ಆಕೆಯ ಗೆಳೆಯನ ಮೇಲೆ ಹರಿಸಿದ್ದಾನೆ. ಉಮಾ ಸ್ಥಳದಲ್ಲೇ ಮೃತಪಟ್ಟರೆ, ರಾಜ್‌ಕುಮಾರ್ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು.

ಮಧ್ಯಪ್ರದೇಶದ ನಿವಾಸಿಯಾಗಿರುವ ಉಮಾ ತನ್ನ ಸ್ನೇಹಿತ ರಾಜ್‌ಕುಮಾರ್ ಜೊತೆ ಜೈಪುರದಲ್ಲಿ ಕೆಲಸ ಮಾಡುತ್ತಿದ್ದರು.

ಮಂಗಳವಾರ ಬೆಳಗ್ಗೆ 5:30 ಮತ್ತು 6 ಗಂಟೆಗೆ ಜೈಪುರದ ಜವಾಹರ್ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗಿರ್ಧರ್ ಮಾರ್ಗ್‌ನಲ್ಲಿರುವ ಹೋಟೆಲ್‌ನ ಹೊರಗೆ ಈ ಘಟನೆ ನಡೆದಿದೆ. ಹೊಟೇಲ್ ಹೊರಭಾಗದಲ್ಲಿ ಯುವಕ ಹಾಗೂ ಯುವತಿಯನ್ನು ಕಾರಿನಡಿಗೆ ಸಿಲುಕಿಸಲು ಯತ್ನಿಸಲಾಗಿದೆ. ಇದರಲ್ಲಿ ಮಹಿಳೆ ಪ್ರಾಣ ಕಳೆದುಕೊಂಡಿದ್ದು, ಯುವಕನೊಬ್ಬ ಗಾಯಗೊಂಡಿದ್ದಾನೆ ಎಂದು ಎಸ್‌ಎಚ್‌ಒ ದಲ್ಬೀರ್ ಸಿಂಗ್ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಜೈಪುರ: ಟಿಂಡರ್ ಡೇಟ್​​ಗಾಗಿ ಹೋದ 28 ವರ್ಷದ ಯುವಕ ಹೆಣವಾಗಿ ಪತ್ತೆ

“ಆರೋಪಿ ಮಂಗೇಶ್ ಅಲ್ಲಿ ತನ್ನ ಗೆಳತಿಯೊಂದಿಗೆ ಪಾನೀಯ ಸೇವಿಸುತ್ತಿದ್ದ. ಸ್ವಲ್ಪ ಸಮಯದ ನಂತರ ಆತ ಉಮಾ ಬಗ್ಗೆ ಕಾಮೆಂಟ್ ಮಾಡಿದ್ದಾನೆ. ರಾಜ್‌ಕುಮಾರ್ ಕಾಮೆಂಟ್‌ಗಳಿಗೆ ಆಕ್ಷೇಪಿಸಿದಾಗ, ಮಂಗೇಶ್ ನನಗೆ ಆಕೆ ಗೊತ್ತು ಎಂದು ಹೇಳಿದ್ದಾನೆ. ಅಷ್ಟರಲ್ಲಿ ಮಂಗೇಶ್ ಮತ್ತು ಆತನ ಗೆಳತಿ ಕೂಡ ಅಲ್ಲಿಗೆ ಬಂದು ಹೋಟೆಲ್ ಮುಂದೆ ಅವರ ಜೊತೆ ಗಲಾಟೆ ಆರಂಭಿಸಿದರು. ಜಗಳ ಉಲ್ಬಣಗೊಳ್ಳುತ್ತಿದ್ದಂತೆ, ಮಂಗೇಶ್ ಅಲ್ಲಿಂದ ಹೊರಟು ಹೋದ. ತಕ್ಷಣವೇ ಕಾರಿನಲ್ಲಿ ಹಿಂತಿರುಗಿ ಬಂದ ಆತ ರಾಜ್‌ಕುಮಾರ್ ಮತ್ತು ಉಮಾ ಮೇಲೆ ಕಾರು ಹರಿಸಿದ್ದಾನೆ. ಪರಾರಿಯಾಗಿರುವ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯ ಭಾಗವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕೊಲೆ ಮತ್ತು ಕೊಲೆ ಯತ್ನದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು