AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರ: ಹೋಟೆಲ್​​ನಲ್ಲಿ ಜಗಳವಾಡಿ ಸಿಟ್ಟಿಗೆದ್ದು ಇಬ್ಬರ ಮೇಲೆ ಕಾರು ಹರಿಸಿದ ವ್ಯಕ್ತಿ; ಮಹಿಳೆ ಸಾವು

ಮಂಗಳವಾರ ಬೆಳಗ್ಗೆ 5:30 ಮತ್ತು 6 ಗಂಟೆಗೆ ಜೈಪುರದ ಜವಾಹರ್ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗಿರ್ಧರ್ ಮಾರ್ಗ್‌ನಲ್ಲಿರುವ ಹೋಟೆಲ್‌ನ ಹೊರಗೆ ಈ ಘಟನೆ ನಡೆದಿದೆ. ಹೊಟೇಲ್ ಹೊರಭಾಗದಲ್ಲಿ ಯುವಕ ಹಾಗೂ ಯುವತಿಯನ್ನು ಕಾರಿನಡಿಗೆ ಸಿಲುಕಿಸಲು ಯತ್ನಿಸಲಾಗಿದೆ. ಇದರಲ್ಲಿ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜೈಪುರ: ಹೋಟೆಲ್​​ನಲ್ಲಿ ಜಗಳವಾಡಿ ಸಿಟ್ಟಿಗೆದ್ದು ಇಬ್ಬರ ಮೇಲೆ ಕಾರು ಹರಿಸಿದ ವ್ಯಕ್ತಿ; ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 27, 2023 | 5:59 PM

Share

ಜೈಪುರ ಡಿಸೆಂಬರ್  27: ತೀವ್ರ ವಾಗ್ವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕಾರು ಹರಿಸಿದ್ದು, ಮಹಿಳೆ ಸಾವಿಗೀಡಾದ ಘಟನೆ ಜೈಪುರದಲ್ಲಿ (Jaipur) ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆ ಮಂಗಳವಾರ ಮುಂಜಾನೆ ಜೈಪುರದ ಜವಾಹರ್ ಸರ್ಕಲ್ ಪ್ರದೇಶದ (Jawahar Circle area )ಹೋಟೆಲ್‌ನ ಹೊರಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಆರೋಪಿ ಮಂಗೇಶ್ ಅರೋರಾ, ಉಮಾ ಮತ್ತು ಆಕೆಯ ಸ್ನೇಹಿತ ರಾಜ್‌ಕುಮಾರ್ ಮೇಲೆ ಕಾರು ಹರಿಸಿದ್ದಾನೆ. ವಿಡಿಯೋದಲ್ಲಿ ಪುರುಷರ ಗುಂಪು ಕಾರಿನ ಮುಂದೆ ನಿಂತಿದ್ದು, ಅವರಲ್ಲಿ ಒಬ್ಬರು ಕಾರನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಮಂಗೇಶ್ ತನ್ನ ಕಾರನ್ನು ಉಮಾ ಮತ್ತು ಆಕೆಯ ಗೆಳೆಯನ ಮೇಲೆ ಹರಿಸಿದ್ದಾನೆ. ಉಮಾ ಸ್ಥಳದಲ್ಲೇ ಮೃತಪಟ್ಟರೆ, ರಾಜ್‌ಕುಮಾರ್ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು.

ಮಧ್ಯಪ್ರದೇಶದ ನಿವಾಸಿಯಾಗಿರುವ ಉಮಾ ತನ್ನ ಸ್ನೇಹಿತ ರಾಜ್‌ಕುಮಾರ್ ಜೊತೆ ಜೈಪುರದಲ್ಲಿ ಕೆಲಸ ಮಾಡುತ್ತಿದ್ದರು.

ಮಂಗಳವಾರ ಬೆಳಗ್ಗೆ 5:30 ಮತ್ತು 6 ಗಂಟೆಗೆ ಜೈಪುರದ ಜವಾಹರ್ ಸರ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗಿರ್ಧರ್ ಮಾರ್ಗ್‌ನಲ್ಲಿರುವ ಹೋಟೆಲ್‌ನ ಹೊರಗೆ ಈ ಘಟನೆ ನಡೆದಿದೆ. ಹೊಟೇಲ್ ಹೊರಭಾಗದಲ್ಲಿ ಯುವಕ ಹಾಗೂ ಯುವತಿಯನ್ನು ಕಾರಿನಡಿಗೆ ಸಿಲುಕಿಸಲು ಯತ್ನಿಸಲಾಗಿದೆ. ಇದರಲ್ಲಿ ಮಹಿಳೆ ಪ್ರಾಣ ಕಳೆದುಕೊಂಡಿದ್ದು, ಯುವಕನೊಬ್ಬ ಗಾಯಗೊಂಡಿದ್ದಾನೆ ಎಂದು ಎಸ್‌ಎಚ್‌ಒ ದಲ್ಬೀರ್ ಸಿಂಗ್ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಜೈಪುರ: ಟಿಂಡರ್ ಡೇಟ್​​ಗಾಗಿ ಹೋದ 28 ವರ್ಷದ ಯುವಕ ಹೆಣವಾಗಿ ಪತ್ತೆ

“ಆರೋಪಿ ಮಂಗೇಶ್ ಅಲ್ಲಿ ತನ್ನ ಗೆಳತಿಯೊಂದಿಗೆ ಪಾನೀಯ ಸೇವಿಸುತ್ತಿದ್ದ. ಸ್ವಲ್ಪ ಸಮಯದ ನಂತರ ಆತ ಉಮಾ ಬಗ್ಗೆ ಕಾಮೆಂಟ್ ಮಾಡಿದ್ದಾನೆ. ರಾಜ್‌ಕುಮಾರ್ ಕಾಮೆಂಟ್‌ಗಳಿಗೆ ಆಕ್ಷೇಪಿಸಿದಾಗ, ಮಂಗೇಶ್ ನನಗೆ ಆಕೆ ಗೊತ್ತು ಎಂದು ಹೇಳಿದ್ದಾನೆ. ಅಷ್ಟರಲ್ಲಿ ಮಂಗೇಶ್ ಮತ್ತು ಆತನ ಗೆಳತಿ ಕೂಡ ಅಲ್ಲಿಗೆ ಬಂದು ಹೋಟೆಲ್ ಮುಂದೆ ಅವರ ಜೊತೆ ಗಲಾಟೆ ಆರಂಭಿಸಿದರು. ಜಗಳ ಉಲ್ಬಣಗೊಳ್ಳುತ್ತಿದ್ದಂತೆ, ಮಂಗೇಶ್ ಅಲ್ಲಿಂದ ಹೊರಟು ಹೋದ. ತಕ್ಷಣವೇ ಕಾರಿನಲ್ಲಿ ಹಿಂತಿರುಗಿ ಬಂದ ಆತ ರಾಜ್‌ಕುಮಾರ್ ಮತ್ತು ಉಮಾ ಮೇಲೆ ಕಾರು ಹರಿಸಿದ್ದಾನೆ. ಪರಾರಿಯಾಗಿರುವ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯ ಭಾಗವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕೊಲೆ ಮತ್ತು ಕೊಲೆ ಯತ್ನದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ