AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಕಾಟಕ್ಕೆ ಬೇಸತ್ತ ಸತಿ; ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ವಿಷ ಸೇವಿಸಿದ ತಾಯಿ! ಓರ್ವ ಮಗು ಸಾವು

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಇಲ್ಲೊಂದು ದಂಪತಿ ಮಾಡಿಕೊಂಡ ಕಿರಿಕ್, ಈಗ ತನ್ನ ಮಗುವನ್ನೆ ಬಲಿಕೊಡುವಂತಾಗಿದೆ. ಗಂಡ ಡೈಲಿ ಕುಡಿದುಕೊಂಡು ಬಂದು ಕಿರಿಕ್ ಮಾಡ್ತಾನೆ ಅನ್ನೋ ಒಂದೇ ಒಂದು ಕಾರಣಕ್ಕೆ ಪತ್ನಿ ತಾನು ವಿಷ ಸೇವಿಸಿ ತನ್ನ ಇಬ್ಬರು ಮಕ್ಕಳಿಗೆ ವಿಷ ಪ್ರಾಷಣ ಮಾಡಿಸಿದ್ದಾಳೆ.

ಪತಿಯ ಕಾಟಕ್ಕೆ ಬೇಸತ್ತ ಸತಿ; ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ವಿಷ ಸೇವಿಸಿದ ತಾಯಿ! ಓರ್ವ ಮಗು ಸಾವು
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಮೃತ ಮಗಳು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 13, 2023 | 2:37 PM

Share

ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ(Kollegal) ತಾಲೂಕಿನ ಮದುವನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಶೀಲ ತನ್ನ ಇಬ್ಬರು ಮಕ್ಕಳಾದ ಯಶವಂತ್ ಹಾಗೂ ಸಿಂದುಗೆ ವಿಷ ಉಣಿಸಿ ಕೊನೆಗೆ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೀಲ ಹಾಗೂ ಮಾದೇಶನಿಗೆ ಕಳೆದ 11 ವರ್ಷದ ಹಿಂದೆ ಗುರು ಹಿರಿಯರ ಸಮ್ಮುಖದಲ್ಲಿ ಮದುವೆ ಮಾಡಿ ಕೊಡಲಾಗಿತ್ತು. ಮಾದೇಶ ಕೂಲಿ ನಾಲಿ ಮಾಡಿಕೊಂಡು ಸಂಸಾರದ ನೌಕೆಯನ್ನ ಸಾಗಿಸುತ್ತಿದ್ದ. ಇವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಸಿಂದು ಹಾಗೂ ಯಶವಂತ್ ಎಂಬ ಎರಡು ಮಕ್ಕಳು ಸಹ ಆಗಿದ್ದವು. ಆದ್ರೆ, ಅದೇನಾಯ್ತೊ ಎನೋ ಬರ ಬರುತ್ತ ಮಾದೇಶ್​ ಮದ್ಯದ ದಾಸನಾಗಿಬಿಟ್ಟ.

ದಿನ ನಿತ್ಯ ಕುಡಿದುಕೊಂಡು ಬಂದು ಹೆಂಡತಿ ಜೊತೆ ಕಿರಿಕ್ ಮಾಡುತ್ತಿದ್ದ. ಸಾಲದು ಎಂದು ಕಳೆದೊಂದು ತಿಂಗಳ ಹಿಂದೆ ಎಣ್ಣೆ ಏಟಲ್ಲಿ ನಡೆದುಕೊಂಡು ಬರುವಾಗ ಆಯ ತಪ್ಪಿ ಬಿದ್ದು, ಕಾಲು ಮುರಿದು ಕೊಂಡಿದ್ದ. ಪತ್ನಿ ಶೀಲ ಕೂಲಿ ಮಾಡ್ಕೊಂಡು ಬಂದು ಜೀವನ ಸಾಗಿಸುತ್ತಿದ್ದಳು. ಆದ್ರೆ, ಆಕೆ ತಂದ ಕೂಲಿ ಹಣವನ್ನ ಸಹ ಮಾದೇಶ ಕಿತ್ತುಕೊಂಡು ಮದ್ಯಪಾನ ಮಾಡುತ್ತಿದ್ದ. ಇದರಿಂದ ಬೇಸತ್ತ ಶೀಲ ನಿನ್ನೆ(ಜು.12) ಬೆಳಗ್ಗೆ ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ವಿಷ ಕುಡಿದಿದ್ದಾಳೆ.

ಇದನ್ನೂ ಓದಿ:Chikkaballapur News: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು

ಈ ವಿಚಾರ ತಿಳಿದ ಅಕ್ಕ ಪಕ್ಕದ ಮನೆಯವರು ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಯ್ತಾದರೂ, 6 ವರ್ಷದ ಸಿಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ರೆ, ಇತ್ತ ಶೀಲ ಹಾಗೂ ಯಶವಂತ್ ಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶೀಲ ಹಾಗೂ ಯಶವಂತ್​ರನ್ನ ಮೈಸೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಈ ಕುರಿತು ಕೊಳ್ಳೆಗಾಲ ಗ್ರಾಮಾಂತರ ಠಾಣಾ ಪೊಲೀಸರು ಐಪಿಸಿ 302 ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಇತ್ತ ತಲೆ ಮರೆಸಿಕೊಂಡಿರುವ ಪತಿ ಮಾದೇಶನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್