ಪತಿಯ ಕಾಟಕ್ಕೆ ಬೇಸತ್ತ ಸತಿ; ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ವಿಷ ಸೇವಿಸಿದ ತಾಯಿ! ಓರ್ವ ಮಗು ಸಾವು

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಇಲ್ಲೊಂದು ದಂಪತಿ ಮಾಡಿಕೊಂಡ ಕಿರಿಕ್, ಈಗ ತನ್ನ ಮಗುವನ್ನೆ ಬಲಿಕೊಡುವಂತಾಗಿದೆ. ಗಂಡ ಡೈಲಿ ಕುಡಿದುಕೊಂಡು ಬಂದು ಕಿರಿಕ್ ಮಾಡ್ತಾನೆ ಅನ್ನೋ ಒಂದೇ ಒಂದು ಕಾರಣಕ್ಕೆ ಪತ್ನಿ ತಾನು ವಿಷ ಸೇವಿಸಿ ತನ್ನ ಇಬ್ಬರು ಮಕ್ಕಳಿಗೆ ವಿಷ ಪ್ರಾಷಣ ಮಾಡಿಸಿದ್ದಾಳೆ.

ಪತಿಯ ಕಾಟಕ್ಕೆ ಬೇಸತ್ತ ಸತಿ; ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ವಿಷ ಸೇವಿಸಿದ ತಾಯಿ! ಓರ್ವ ಮಗು ಸಾವು
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಮೃತ ಮಗಳು
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2023 | 2:37 PM

ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ(Kollegal) ತಾಲೂಕಿನ ಮದುವನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಶೀಲ ತನ್ನ ಇಬ್ಬರು ಮಕ್ಕಳಾದ ಯಶವಂತ್ ಹಾಗೂ ಸಿಂದುಗೆ ವಿಷ ಉಣಿಸಿ ಕೊನೆಗೆ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೀಲ ಹಾಗೂ ಮಾದೇಶನಿಗೆ ಕಳೆದ 11 ವರ್ಷದ ಹಿಂದೆ ಗುರು ಹಿರಿಯರ ಸಮ್ಮುಖದಲ್ಲಿ ಮದುವೆ ಮಾಡಿ ಕೊಡಲಾಗಿತ್ತು. ಮಾದೇಶ ಕೂಲಿ ನಾಲಿ ಮಾಡಿಕೊಂಡು ಸಂಸಾರದ ನೌಕೆಯನ್ನ ಸಾಗಿಸುತ್ತಿದ್ದ. ಇವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಸಿಂದು ಹಾಗೂ ಯಶವಂತ್ ಎಂಬ ಎರಡು ಮಕ್ಕಳು ಸಹ ಆಗಿದ್ದವು. ಆದ್ರೆ, ಅದೇನಾಯ್ತೊ ಎನೋ ಬರ ಬರುತ್ತ ಮಾದೇಶ್​ ಮದ್ಯದ ದಾಸನಾಗಿಬಿಟ್ಟ.

ದಿನ ನಿತ್ಯ ಕುಡಿದುಕೊಂಡು ಬಂದು ಹೆಂಡತಿ ಜೊತೆ ಕಿರಿಕ್ ಮಾಡುತ್ತಿದ್ದ. ಸಾಲದು ಎಂದು ಕಳೆದೊಂದು ತಿಂಗಳ ಹಿಂದೆ ಎಣ್ಣೆ ಏಟಲ್ಲಿ ನಡೆದುಕೊಂಡು ಬರುವಾಗ ಆಯ ತಪ್ಪಿ ಬಿದ್ದು, ಕಾಲು ಮುರಿದು ಕೊಂಡಿದ್ದ. ಪತ್ನಿ ಶೀಲ ಕೂಲಿ ಮಾಡ್ಕೊಂಡು ಬಂದು ಜೀವನ ಸಾಗಿಸುತ್ತಿದ್ದಳು. ಆದ್ರೆ, ಆಕೆ ತಂದ ಕೂಲಿ ಹಣವನ್ನ ಸಹ ಮಾದೇಶ ಕಿತ್ತುಕೊಂಡು ಮದ್ಯಪಾನ ಮಾಡುತ್ತಿದ್ದ. ಇದರಿಂದ ಬೇಸತ್ತ ಶೀಲ ನಿನ್ನೆ(ಜು.12) ಬೆಳಗ್ಗೆ ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ವಿಷ ಕುಡಿದಿದ್ದಾಳೆ.

ಇದನ್ನೂ ಓದಿ:Chikkaballapur News: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು

ಈ ವಿಚಾರ ತಿಳಿದ ಅಕ್ಕ ಪಕ್ಕದ ಮನೆಯವರು ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಯ್ತಾದರೂ, 6 ವರ್ಷದ ಸಿಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ರೆ, ಇತ್ತ ಶೀಲ ಹಾಗೂ ಯಶವಂತ್ ಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶೀಲ ಹಾಗೂ ಯಶವಂತ್​ರನ್ನ ಮೈಸೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಈ ಕುರಿತು ಕೊಳ್ಳೆಗಾಲ ಗ್ರಾಮಾಂತರ ಠಾಣಾ ಪೊಲೀಸರು ಐಪಿಸಿ 302 ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಇತ್ತ ತಲೆ ಮರೆಸಿಕೊಂಡಿರುವ ಪತಿ ಮಾದೇಶನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us