AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಪ್ರೇಯಸಿಯ ಕತ್ತು ಸೀಳಿ ಬರ್ಬರ ಹತ್ಯೆಗೈದ ಪ್ರೇಮಿ

ಮಾಹಿತಿ ಪ್ರಕಾರ ಮುಂಬೈನ ಸಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕೊಲೆ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಇಬ್ಬರ ನಡುವೆ ಜಗಳ ನಡೆದಿದೆ. ಆ ವ್ಯಕ್ತಿ ಚಾಕುವಿನಿಂದ ಆತನ ಗೆಳತಿಯ ಕೊಲೆ ಮಾಡಿದ್ದಾನೆ.

ಮುಂಬೈನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಪ್ರೇಯಸಿಯ ಕತ್ತು ಸೀಳಿ ಬರ್ಬರ ಹತ್ಯೆಗೈದ ಪ್ರೇಮಿ
ಹತ್ಯೆ ನಡೆದ ಆಟೋವನ್ನು ಪೊಲೀಸರು ಪರಿಶೀಲಿಸುತ್ತಿರುವುದು
ರಶ್ಮಿ ಕಲ್ಲಕಟ್ಟ
|

Updated on: Jun 19, 2023 | 7:58 PM

Share

ಮುಂಬೈ: ಮಹಾರಾಷ್ಟ್ರದ (Maharashtra) ಮುಂಬೈನಲ್ಲಿ (Mumbai) ಚಲಿಸುತ್ತಿದ್ದ ಆಟೋದಲ್ಲಿ ಸೋಮವಾರ ಕೊಲೆಯೊಂದು ನಡೆದಿದೆ. ಮಾಹಿತಿಯ ಪ್ರಕಾರ, ಮುಂಬೈನ ಸಕಿನಾಕಾ ಪ್ರದೇಶದಲ್ಲಿ ಜೋಡಿಯೊಂದು ಪ್ರಯಾಣಿಸುತ್ತಿತ್ತು. ಈ ನಡುವೆ ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕುಪಿತಗೊಂಡ ವ್ಯಕ್ತಿ ತನ್ನ ಜತೆಯಲ್ಲಿದ್ದ ಮಹಿಳೆಯ ಕತ್ತು  ಸೀಳಿದ್ದಾನೆ.  ಕೃತ್ಯವೆಸಗಿದ ನಂತರ ಚಲಿಸುತ್ತಿದ್ದ ಆಟೋದಿಂದ ಜಿಗಿದು ಅಪರಾಧ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ, ಸ್ವಲ್ಪ ದೂರದಲ್ಲಿ ಪೊಲೀಸ್ ಅಧಿಕಾರಿಗಳು ಇದ್ದಿದ್ದು, ಹಾಡಹಗಲೇ ಬರ್ಬರವಾಗಿ ಹತ್ಯೆ (murder) ಮಾಡಿ ಅಪರಾಧ ಸ್ಥಳದಿಂದ ತಪ್ಪಿಸಿಕೊಳ್ಳಲು ಮುಂದಾಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

30 ವರ್ಷದ ಪಂಚಶಿಲಾ ಅಶೋಕ್ ಜಾಮ್ದಾರ್ ಎಂಬ ಮಹಿಳೆ ಕೊಲೆಯಾಗಿದ್ದಾರೆ. ಈಕೆ ಮುಂಬೈನ ಸಕಿನಾಕಾದಲ್ಲಿರುವ ಚಂಡಿವಾಲಿ ಪ್ರದೇಶದ ಸಂಘರ್ಷನಗರ ನಿವಾಸಿ. ಆರೋಪಿ ಕಟರ್ ಬಳಸಿ ಈಕೆಯ ಕತ್ತು ಸೀಳಿದ್ದಾನೆ.

ಮಾಹಿತಿ ಪ್ರಕಾರ ಮುಂಬೈನ ಸಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕೊಲೆ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಇಬ್ಬರ ನಡುವೆ ಜಗಳ ನಡೆದಿದೆ. ಆ ವ್ಯಕ್ತಿ ಚಾಕುವಿನಿಂದ ಆತನ ಗೆಳತಿಯ ಕೊಲೆ ಮಾಡಿದ್ದಾನೆ. ಇದಾದ ನಂತರ ಚಲಿಸುತ್ತಿದ್ದ ಆಟೋ ರಿಕ್ಷಾದಿಂದ ಹಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು ಎಂದು ವಲಯ 10 ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ದತ್ತಾ ನಲವಾಡೆ ಹೇಳಿದ್ದಾರೆ.

ಇದನ್ನೂ ಓದಿ: Mandya News: ಚಲಿಸುತ್ತಿದ್ದ KSRTC ಬಸ್​ನಿಂದ ಬಿದ್ದು ಪ್ರಯಾಣಿಕ ಸಾವು

ಈ ಬರ್ಬರ ಕೃತ್ಯದ ಹಿಂದಿನ ಕಾರಣ ಮತ್ತು ಉದ್ದೇಶ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಕ್ರೈ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!