AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ

ತನಗೇ ಅದೇ ಯುವತಿ ಬೇಕೆಂದು ಹಠಕ್ಕೆ ಬಿದ್ದು ಮದುವೆಯಾಗಿದ್ದ ಆತ, ತಮ್ಮ ಸಂಬಂಧಿಕರ ವಿರೋಧದ ನಡುವೆಯೂ ಆತನಿಗೆ ತಮ್ಮ ಮಗಳನ್ನ ಕೊಟ್ಟು ವಿವಾಹ ಮಾಡಿಕೊಟ್ಟಿದ್ದರು. ಹೀಗೆ ತಾನೇ ಇಷ್ಟಪಟ್ಟು ಮದುವೆಯಾಗಿದ್ದ ಆತ, ಮೂರು ವರ್ಷಗಳ ಸಂಸಾರ ನಡೆಸಿದ್ದ. ಆದರೀಗ ಹಣದ ದಾಹಕ್ಕೆ ಬಿದ್ದಿದ್ದ ಆತ, ಪತ್ನಿಯ ಜೊತೆ ಜಗಳ ಮಾಡುತ್ತಿದ್ದ. ಆ ಜಗಳ ವಿಕೋಪಕ್ಕೆ ಹೋಗಿ, ಮಗುವಿನ ಮೇಲೆ ಹಲ್ಲೆ ನಡೆಸಿ, ಪತ್ನಿಯನ್ನ ಕೊಂದು ಪರಾರಿಯಾಗಿದ್ದಾನೆ.

ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ
ಆರೋಪಿ ಗಂಡ, ಮೃತ ಪತ್ನಿ, ಗಾಯಾಳು ಮಗು
ಪ್ರಶಾಂತ್​ ಬಿ.
| Edited By: |

Updated on: Jul 08, 2023 | 2:02 PM

Share

ಮಂಡ್ಯ: ಕೌಟುಂಬಿಕ ಕಲಹ ಹಾಗೂ ಹಣದ ದಾಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಯನ್ನ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಜೊತೆಗೆ ಮುದ್ದಾದ ಒಂದೂವರೆ ವರ್ಷದ ಗಂಡು ಮಗುವನ್ನು ಕೂಡ ಕತ್ತು ಹಿಸುಕಿ ಹತ್ಯೆ ಮಾಡಲು ಮುಂದಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಹೊಸಯರಗನಹಳ್ಳಿ ಗ್ರಾಮದ ಹೊರವಲಯಲ್ಲಿರೋ ಒಂಟಿ ಮನೆಯಲ್ಲಿ ನಡೆದಿದೆ. ವರ್ಷಿತಾ(24) ಎಂಬ ಗೃಹಣಿ ಕೊಲೆಯಾದ ದುರ್ದೈವಿ. ಒಂದೂವರೆ ವರ್ಷದ ಆರ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಇನ್ನು ಘಟನೆ ನಂತರ ಆರೋಪಿ ಗೌತಮ್ ಪರಾರಿಯಾಗಿದ್ದಾನೆ.

ಮೂರು ವರ್ಷದ ಕೆಳಗೆ ಮದುವೆಯಾಗಿದ್ದ ಜೋಡಿ

ಮೂರು ವರ್ಷಗಳ ಹಿಂದೆ ಮದುವೆಯಾಗಿ, ಗೌತಮ್ ಹಾಗೂ ಆತನ ಪತ್ನಿ ವರ್ಷಿತಾ ಗ್ರಾಮದ ಹೊರವಲಯದಲ್ಲಿರುವ ತಮ್ಮದೇ ಜಮೀನಿನಲ್ಲಿ ಪುಟ್ಟದಾದ ಮನೆಮಾಡಿಕೊಂಡು ಒಂದೂವರೆ ವರ್ಷದಿಂದ ಬದುಕು ಸಾಗಿಸುತ್ತಿದ್ದರು. ಆರಂಭದಲ್ಲಿ ಪತ್ನಿಯ ಜೊತೆಗೆ ಚೆನ್ನಾಗಿಯೇ ಇದ್ದ ಗೌತಮ್, ಹಣಕಾಸಿನ ವಿಚಾರದಲ್ಲಿ ಪತ್ನಿಯ ಜೊತೆಗೆ ಜಗಳ ತೆಗೆಯುತ್ತಿದ್ದ. ಆ ಜಗಳ ವಿಕೋಪಕ್ಕೆ ತಿರುಗಿ ನಿನ್ನೆ(ಜು.6) ಆಕೆಯ ಮೇಲೆ ಮಾರಕಾಸ್ತರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದ. ಅಷ್ಟೇ ಅಲ್ಲದೇ ತನ್ನದೇ ಮಗು ಒಂದೂವರೆ ವರ್ಷ ಆರ್ಯ ಎಂಬ ಕಂದನನ್ನೂ ಕೊಲ್ಲಲು ಯತ್ನಿಸಿರೊ ಆತ, ಮಗುವಿನ ಕತ್ತು ತಿರುಗಿಸಿದ್ದ. ಬಳಿಕ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ವಿಚಾರವನ್ನ ತನ್ನ ತಂದೆಗೆ ಪೋನ್ ಮಾಡಿ ತಿಳಿಸಿ, ಅಲ್ಲಿಂದ ಪರಾರಿಯಾಗಿದ್ದ.

ಇದನ್ನೂ ಓದಿ:ಜೈನಮುನಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್; ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿದ್ರಾ ಆರೋಪಿಗಳು?

ಮದುವೆಯಾಗುವುದಿದ್ದರೆ ವರ್ಷಿತಾಳನ್ನೇ ಎಂದು ಹಠಕ್ಕೆ ಬಿದ್ದು ಮದುವೆಯಾಗಿದ್ದ ಆರೋಪಿ ಗೌತಮ್​

ಇನ್ನು ಈ ಗೌತಮ್​ಗೆ ಯಾವುದೇ ಕೆಲಸ ಇರಲಿಲ್ಲ. ಉಂಡಾಡಿ ಗುಂಡನ ಹಾಗೆ ತಿರುಗಿಕೊಂಡಿದ್ದ. ಇತನ ಜೊತೆ ಮದುವೆಗೆ ವರ್ಷಿತಾಳ ಸಂಬಂಧಿಕರು ಒಪ್ಪಲಿಲ್ಲ. ಊರಿನಲ್ಲಿ ಯಾವಾಗ ತಾನು ವರ್ಷಿತಾಳನ್ನ ಮದುವೆಯಾಗುವುದಕ್ಕೆ ಅವರ ಸಂಬಂಧಿಕರ ವಿರೋಧವಿದೆ ಎಂಬುದನ್ನ ಅರಿತ ಗೌತಮ್ ಮತ್ತು ಅವರ ತಂದೆ ವರ್ಷಿತಾಳ ಹೆತ್ತವರ ಮೇಲೆ ಒತ್ತಡ ತಂದಿದ್ದರು. ಈ ವೇಳೆ ಗೌತಮ್ ಮದುವೆಯಾಗುವುದಿದ್ದರೆ ವರ್ಷಿತಾಳನ್ನೇ ಎಂದು ಹಠಕ್ಕೆ ಬಿದ್ದಿದ್ದ. ಒಂದು ಕಡೆ ವರ್ಷಿತಾಳ ತಂದೆಗೆ ಆರೋಗ್ಯ ಹದಗೆಟ್ಟಿದ್ದು. ಮತ್ತೊಂದು ಕಡೆಗೆ ಗೌತಮ್ ಒತ್ತಾಯಕ್ಕೆ ಮಣಿದು ಸಂಬಂಧಿಕರ ವಿರೋಧದ ನಡುವೆಯೂ ಗೌತಮ್ ಜೊತೆಗೆ ಮದುವೆ ಮಾಡಿಸಿದ್ದರು.

ತೋಟದ ಮನೆಯಲ್ಲಿ ವಾಸವಿದ್ದ ಪತಿ-ಪತ್ನಿ, ಮಗು

ಇನ್ನು ಆರೋಪಿ ಗೌತಮ್, ಹೊಸಯರಗನಹಳ್ಳಿ ಬಳಿಯಲ್ಲಿ ತಮ್ಮ ತಾತನಿಗೆ ಸೇರಿದ 8 ಎಕರೆ ಜಮೀನಿನಲ್ಲಿ ತೋಟದ ಮನೆಯನ್ನ ಕಟ್ಟಿಕೊಂಡಿದ್ದ. ಆರೋಪಿ ಗೌತಮ್ ಪತ್ನಿ, ಮಗನ ಜೊತೆಗೆ ಅಲ್ಲಿಯೇ ವಾಸವಾಗಿದ್ದ. ಜೊತೆಯಲ್ಲಿ ತಾತ ಅಜ್ಜಿಯೂ ಇದ್ದರು. ಜೀವನೋಪಾಯಕ್ಕಾಗಿ ಕುರಿ, ಮೇಕೆ ಹಾಗೂ ಕೋಳಿ ಸಾಕಾಣಿಕೆ ಮಾಡುತ್ತಿದ್ದ. ಎಲ್ಲವನ್ನೂ ಸರಿಯಾಗಿ ನಿರ್ವಹಿಸಿಕೊಂಡು ಹೋಗಿದ್ದರೆ, ಒಳ್ಳೆಯ ಜೀವನ ಮಾಡಬಹುದಿತ್ತು. ಆದರೆ, ಬೈಕ್​ನಲ್ಲಿ ಓಡಾಡಿಕೊಂಡಿರೊ ಶೋಕಿ ಜೀವನಕ್ಕೆ ಹೊಂದಿಕೊಂಡಿದ್ದ ಆತ, ಸದ್ಯ ಪತ್ನಿಯನ್ನ ಕೊಂದು ಪರಾರಿಯಾಗಿದ್ದಾನೆ. ಈ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಕೆಆರ್​ಎಸ್ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?