AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಇರಿದು ಕೊಂದ ಭಾವ

ಪ್ರತ್ಯೇಕ ಘಟನೆ: ಮೈಸೂರಿನ ಕುವೆಂಪುನಗರ(Kuvempu Nagar)ದ ಐ ಬ್ಲಾಕ್​ನಲ್ಲಿ ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಭಾವನೇ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ. ಇತ್ತ ಬಸವನಬಾಗೇವಾಡಿ ತಾಲೂಕಿನ ಗುಳಬಾಳ ಬಳಿ ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಇರಿದು ಕೊಂದ ಭಾವ
ಮೃತ ವ್ಯಕ್ತಿ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 08, 2024 | 5:38 PM

Share

ಮೈಸೂರು, ಜೂ.08: ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಭಾವನೇ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರಿನ ಕುವೆಂಪುನಗರ(Kuvempu Nagar)ದ ಐ ಬ್ಲಾಕ್​ನಲ್ಲಿ ನಡೆದಿದೆ. ಅಭಿಷೇಕ್(27) ಸಾವನ್ನಪ್ಪಿದ ಯುವಕ. ಬಾಮೈದನಿಗೆ ಚಾಕುವಿನಿಂದ ಇರಿದು ಹತ್ಯೆಗೈದು ಆರೋಪಿ ಭಾವ ರವಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕುವೆಂಪುನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಗುಳಬಾಳ ಬಳಿ ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ ದುಷ್ಕರ್ಮಿಗಳು ಯುವಕನನ್ನು ಕೊಂದು ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಜಮೀನಿನಲ್ಲಿ ಮಹಾಂತೇಶ ಬಿರಾದಾರ(25) ಎಂಬುವವರ ಮೃತದೇಹ ಪತ್ತೆಯಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮೃತನ ಸಹೋದರ ಮಂಜುನಾಥ್​, ಮಹಾಂತೇಶನನ್ನು ಕೊಂದಿದ್ದಾರೆಂದು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು

ಆಟೋ ಪಲ್ಟಿಯಾಗಿ ಆಟೋದಲ್ಲಿದ್ದ ಓರ್ವ ಸಾವು

ಕೋಲಾರ: ಮಾಲೂರು ತಾಲೂಕಿನ ಅಂಚೆ ಮುಸ್ಕೂರು ಗ್ರಾಮದ ಬಳಿ ಆಟೋ ಪಲ್ಟಿಯಾಗಿ ವೃದ್ಧನೋರ್ವ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ 6 ಜನರಿಗೆ ಗಾಯವಾಗಿದ್ದು, ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎಟ್ಟಕೋಡಿ ಗ್ರಾಮದ ಚಿನ್ನಪ್ಪ(70) ಮೃತ ದುರ್ದೈವಿ. ಘಟನೆಗೆ ಕುಡಿದು ವಾಹನ ಚಾಲನೆ ಮಾಡಿದ್ದೇ ಕಾರಣ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ