AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ಬರ್ಬರ ಹತ್ಯೆ

ತುಮಕೂರು ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ(Bukkapatna) ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ಬರ್ಬರ ಹತ್ಯೆ
ವೃದ್ದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 11, 2024 | 3:03 PM

Share

ತುಮಕೂರು, ಆ.11: ದೇವರ ಉತ್ಸವ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ(Bukkapatna) ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ನಡೆದಿದೆ. ಮದ್ದಮ್ಮ (68) ಮೃತ ವೃದ್ದೆ. ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು, ರಾತ್ರಿ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಇನ್ನು ಹಂತಕರು ವೃದ್ದೆಯನ್ನ ಕೊಲೆ ಮಾಡಿದ ನಂತರ ಆಕೆಯ ಮೈ ಮೇಲೆ ಇದ್ದ ಚಿನ್ನದ ಸರವನ್ನು ಕದ್ದು, ಶವವನ್ನು ನಿರ್ಮಾಣ ಹಂತದ ಕಟ್ಟಡದ ಬಳಿ ಎಸೆದು ಎಸ್ಕೇಪ್​ ಆಗಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕಾಗಮಿಸಿದ ಶಿರಾ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ  ಪೊಲೀಸರು ಬಲೆಬೀಸಿದ್ದಾರೆ.

ಇದನ್ನೂ ಓದಿ:ಮರ್ಯಾದಾ ಹತ್ಯೆ; ಹಿಂದೂ ಯುವಕನನ್ನು ಪ್ರೀತಿಸಿದ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಅಣ್ಣ

ಕರಡಿ ದಾಳಿಯಿಂದ ಗಾಯಗೊಂಡಿದ್ದ ರೈತ ಸಾವು

ಹಾಸನ: ಕರಡಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ, ಚಿಕಿತ್ಸೆ ಫಲಿಸದೆ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ರೈತ ಮಹಾಲಿಂಗಪ್ಪ(75) ಮೃತ ರೈತ, ಜು.25 ರಂದು ಅರಸೀಕೆರೆ ತಾಲೂಕಿನ ಜನ್ನಾವರದಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ತೋಟದ ಮನೆ ಬಳಿ ನಿಂತಿದ್ದಾಗ ರೈತನ ಮೇಲೆ ಕರಡಿ ದಾಳಿ ಮಾಡಿತ್ತು. ಈ ವೇಳೆ ವೃದ್ಧನ ತಲೆ ಹಾಗೂ ಮುಖದ ಮೇಲೆ ತೀವ್ರವಾಗಿ ಗಾಯವಾಗಿತ್ತು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ರೈತ ಮಹಾಲಿಂಗಪ್ಪ ಕೊನೆಯುಸಿರೆಳೆದಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sun, 11 August 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು