ಬೆಂಗಳೂರು: ಹಾಡಹಗಲೇ ಸೀರೆ ಅಂಗಡಿಯಲ್ಲಿ 10 ಲಕ್ಷ ನಗದು, ಬೆಳ್ಳಿ ಆಭರಣ ಕಳ್ಳತನ

| Updated By: ಸಾಧು ಶ್ರೀನಾಥ್​

Updated on: Apr 15, 2022 | 6:55 PM

ಗುರುವಾರ ಮಧ್ಯಾಹ್ನ ಕೆಲಸಗಾರ ಅಂಗಡಿಗೆ ಬೀಗ ಹಾಕಿ, ಊಟಕ್ಕೆ ತೆರಳಿದ್ದ. ಆ ವೇಳೆ ರಾಡ್ ನಿಂದ ಶಟರ್ ಮುರಿದು ಕಳ್ಳತನ ಮಾಡಲಾಗಿದೆ. ಲಾಕರ್ ನಲ್ಲಿದ್ದ 10 ಲಕ್ಷ ನಗದು ಮತ್ತು ಬೆಳ್ಳಿ ಆಭರಣ ಕಳವು ಮಾಡಲಾಗಿದೆ. ಪರಿಚಯಸ್ಥರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಹಾಡಹಗಲೇ ಸೀರೆ ಅಂಗಡಿಯಲ್ಲಿ 10 ಲಕ್ಷ  ನಗದು, ಬೆಳ್ಳಿ ಆಭರಣ ಕಳ್ಳತನ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳ್ಳರು ತಮ್ಮ ಕರಾಮತ್ತು ತೋರಿದ್ದಾರೆ. ಹಾಡಹಗಲೇ ಸೀರೆ ಅಂಗಡಿಯಲ್ಲಿ (Saree Shop) ಲಾಕರ್ ನಲ್ಲಿದ್ದ 10 ಲಕ್ಷ ನಗದು, ಬೆಳ್ಳಿ ಆಭರಣ ಕಳ್ಳತನ ಮಾಡಿದ್ದಾರೆ. ಪ್ರತಾಪ್ ರಾಮ್ ಎಂಬುವವರ ಮಾಲೀಕತ್ವದ ಹನುಮಾನ್ ಸಿಲ್ಕ್ಸ್ ಶಾಪ್​ನನಲ್ಲಿ ಈ ಕಳವು ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಶಾಂತ್ ಕಾಂಪೆಕ್ಸ್ ನಲ್ಲಿ ಘಟನೆ ನಡೆದಿದೆ.

ಗುರುವಾರ ಮಧ್ಯಾಹ್ನ ಕೆಲಸಗಾರ ಅಂಗಡಿಗೆ ಬೀಗ ಹಾಕಿ, ಊಟಕ್ಕೆ ತೆರಳಿದ್ದ. ಆ ವೇಳೆ ರಾಡ್ ನಿಂದ ಶಟರ್ ಮುರಿದು ಕಳ್ಳತನ (Theft) ಮಾಡಲಾಗಿದೆ. ಲಾಕರ್ ನಲ್ಲಿದ್ದ 10 ಲಕ್ಷ ನಗದು ಮತ್ತು ಬೆಳ್ಳಿ ಆಭರಣ ಕಳವು ಮಾಡಲಾಗಿದೆ. ಪರಿಚಯಸ್ಥರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ (Halsuru gate police station limits) ಪ್ರಕರಣ ದಾಖಲಾಗಿದೆ.

ಮದುವೆ ಮುಗಿಸಿ ಬರುವಾಗ ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಸ್ಥಳದಲ್ಲೇ ದುರ್ಮರಣ:
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಅಣ್ಣಿಗೇರಿ ಗ್ರಾಮದ ಪ್ರದೀಪ್(9) ಮತ್ತು ವಿನಾಯಕ್(19) ಮೃತಪಟ್ಟವರು. ಮದುವೆ ಸಮಾರಂಭ ಮುಗಿಸಿ ವಾಪಸ್ ಊರಿಗೆ ಬರುವಾಗ ಈ ದುರ್ಘಟನೆ ನಡೆದಿದೆ.  ಗಾಯಾಳುಗಳಿಗೆ ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅಂತರಗಂಗೆ ರಸ್ತೆಯಲ್ಲಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿ:
ಕೋಲಾರ: ನಗರದ ಅಂತರಗಂಗೆ ರಸ್ತೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ಬೈಕ್‌ನಲ್ಲಿ ಬಂದು ಮಹಿಳೆಯ ಚಿನ್ನದ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಪರಿಚಿತ ಬೈಕ್ ಸವಾರರು ಉಮಾದೇವಿ ಎಂಬುವರ 50 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪೇರಿ ಕಿತ್ತಿದ್ದಾರೆ. ಕೋಲಾರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದೂ ಓದಿ:
DK Shivakumar: ಹುಡುಗಾಟ ಮಾಡಬೇಡಿ ಎಂದು ಡಿಕೆ ಶಿವಕುಮಾರ್​​ಗೆ ಉಚಿತ ಸಲಹೆ ನೀಡಿದ ಸಚಿವ ಆರ್. ಅಶೋಕ್

ಇದೂ ಓದಿ:
ಸಚಿವ ಕೆಎಸ್ ಈಶ್ವರಪ್ಪ ನಿರ್ಗಮನ, ರಾಜ್ಯ ಬಿಜೆಪಿಯಲ್ಲಿ ಮುಂದಿನ ಪರ್ವ ಏನು? ಟಿವಿ 9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

Published On - 5:30 pm, Fri, 15 April 22