AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಮಹಿಳೆಗೆ ಬೆದರಿಸಿ 27 ಲಕ್ಷ ಹಣ ಪೀಕಿದ ಸೈಬರ್ ವಂಚಕರು, 6 ಲಕ್ಷ ಕಳೆದುಕೊಂಡ ನಿವೃತ್ತ ಅಧಿಕಾರಿ

ಹಣ ಡಬ್ಬಲಿಂಗ್‌ ಆಸೆ ಆಯ್ತು, ಕೆಲಸ ಕೊಡಿಸುವ ನೆಪದಲ್ಲಿ ವಂಚನೆ ಆಯ್ತು, ಇದೀಗ ಸೈಬರ್ ವಂಚಕರು ಜನರಿಗೆ ಭಯ ಹುಟ್ಟಿಸಿ ಹಣ ವಸೂಲಿ ಮಾಡುವ ಕುತಂತ್ರವನ್ನು ರೂಪಸಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ಮಹಿಳೆಯನ್ನ ಬೆದರಿಸಿ ಸೈಬರ್ ಅಪರಾಧಿಗಳು 27‌ ಲಕ್ಷ ರೂ. ಸುಲಿಗೆ ಮಾಡಿದ್ದಾರೆ.

ತುಮಕೂರಿನ ಮಹಿಳೆಗೆ ಬೆದರಿಸಿ 27 ಲಕ್ಷ ಹಣ ಪೀಕಿದ ಸೈಬರ್ ವಂಚಕರು, 6 ಲಕ್ಷ ಕಳೆದುಕೊಂಡ ನಿವೃತ್ತ ಅಧಿಕಾರಿ
ತುಮಕೂರಿನ ಮಹಿಳೆಗೆ ಬೆದರಿಸಿ 27 ಲಕ್ಷ ಹಣ ಪೀಕಿದ ಸೈಬರ್ ವಂಚಕರು, 6 ಲಕ್ಷ ಕಳೆದುಕೊಂಡ ನಿವೃತ್ತ ಅಧಿಕಾರಿ (ಸಾಂದರ್ಭಿಕ ಚಿತ್ರ)Image Credit source: iStock Photo
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Dec 15, 2023 | 10:46 AM

Share

ತುಮಕೂರು, ಡಿ.15: ಸೈಬರ್ (Cyber crime) ವಂಚಕರು ಜನರಿಗೆ ಭಯ ಹುಟ್ಟಿಸಿ ಹಣ ವಸೂಲಿ ಮಾಡುವ ಕುತಂತ್ರವನ್ನು ರೂಪಸಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ಮಹಿಳೆಯನ್ನ ಬೆದರಿಸಿ 27‌ ಲಕ್ಷ ರೂ. ಸುಲಿಗೆ ಮಾಡಿದ್ದಾರೆ. ಇನ್ನೊಂದೆಡೆ, ಸೈಬರ್ ವಂಚಕರ ನಗ್ನ ವಿಡಿಯೋ ಕಾಲ್ ಬಲೆಗೆ‌ ಸಿಲುಕಿ ನಿವೃತ್ತ ಸಹಾಯಕ ನಿರ್ದೇಶಕರೊಬ್ಬರು 6.13 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ತುಮಕೂರು ನಗರದ‌ ಸಪ್ತಗಿರಿ ಬಡಾವಣೆಯ ಮಹೇಂದ್ರಿ ಎಂಬ ವೃದ್ಧೆಯಿಂದ ಸೈಬರ್ ಖದೀಮರು 27 ಲಕ್ಷ ದೋಚಿದ್ದಾರೆ. ಮಹೇಂದ್ರಿ ಎಂಬವರಿಗೆ ದೂರವಾಣಿ ಕರೆ ಮಾಡಿದ ಸೈಬರ್ ಖದೀಮರು, ನಾವು ಮುಂಬೈ ಪೊಲೀಸರು, ನೀವು ಸಾರ್ವಜನಿಕರಿಗೆ ಕರೆ ಮಾಡಿ ತೊಂದರೆ ಕೊಡುತ್ತಿದ್ದೀರಿ ಎಂದು ದೂರು ದಾಖಲಾಗಿದೆ. ಇದನ್ನು ಮುಚ್ಚಿ ಹಾಕಲು ಹಣ ನೀಡುವಂತೆ ಬೇಡಿಕೆ ಇಟ್ಟು 27 ಲಕ್ಷ ಹಣ ಪೀಕಿದ್ದಾರೆ. ಬಳಿಕ ಸೈಬರ್ ವಂಚಕರ ಮೋಸದ ಬಲೆಗೆ ಬಿದ್ದಿರುವುದು ತಿಳಿದ ಮಹೇಂದ್ರಿ, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ; ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್​ ಹೆಸರಿನಲ್ಲಿ ವಂಚನೆ: 15 ದಿನದಲ್ಲಿ ಮೂರು ಕೋಟಿ ಕಳೆದುಕೊಂಡ ಏಳು ಜನರು, ಏನಿದು ಡಿಜಿಟಲ್ ಅರೆಸ್ಟ್?

ಆರು ಲಕ್ಷ ಕಳೆದುಕೊಂಡು ನಿವೃತ್ತ ಸಹಾಯಕ ನಿರ್ದೇಶಕ

ಸೈಬರ್ ವಂಚಕರ ನಗ್ನ ವಿಡಿಯೋ ಬಲೆಗೆ‌ ಸಿಲುಕಿ ನಿವೃತ್ತ ಸಹಾಯಕ ನಿರ್ದೇಶಕರೊಬ್ಬರು 6.13 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಾಣಿಕ್ಯಾಚಾರ್ ಎಂಬವರಿಗೆ ವಾಟ್ಸ್​ಆ್ಯಪ್ ಮೂಲಕ ವಿಡಿಯೋ ಕರೆ ಬಂದಿದೆ. ವಿಡಿಯೋ ಕಾಲ್ ರಿಸೀವ್ ಮಾಡಿದ ತಕ್ಷಣ ಸೈಬರ್ ಖದೀಮರು ನಗ್ನ ಚಿತ್ರ ಪ್ರದರ್ಶನ ಮಾಡಿ ಸ್ಕ್ರೀನ್ ರೆಕಾರ್ಡಿಂಗ್ ಮಾಡಿ ಬಳಿಕ ಬೆದರಿಕೆ ಹಾಕಲು ಆರಂಭಿಸಿದ್ದಾರೆ.

ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಭೀತಿಗೊಂಡ ಮಾಣಿಕ್ಯಚಾರ್, ಒಟ್ಟಾರೆಯಾಗಿ 6.13 ಲಕ್ಷ ಹಣವನ್ನ ವಂಚಕರಿಗೆ ಕಳಿಸಿದ್ದಾರೆ. ಬಳಿಕ ತುಮಕೂರು ಸೈಬರ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ