AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ತಂಗಿಯ ಶಿರಚ್ಛೇದ ಮಾಡಿ, ಆಕೆಯ ತಲೆಯೊಂದಿಗೆ ಬೀದಿಯಲ್ಲಿ ತಿರುಗಾಡಿದ ಅಣ್ಣ

ಮಿತ್ವಾರಾ ಗ್ರಾಮದಲ್ಲಿ, 24 ವರ್ಷದ ರಿಯಾಜ್ ಎಂಬ ವ್ಯಕ್ತಿ ತನ್ನ ಸಹೋದರಿಯ ಶಿರಚ್ಛೇದ ಮಾಡಿದ್ದಾನೆ. ಆಕೆ ತನ್ನ ಗ್ರಾಮದ ಅದೇ ಸಮುದಾಯದ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ಈ ಸಂಬಂಧ ಯುವತಿಯ ತಂದೆ ದೂರು  ದಾಖಲಿಸಿದ್ದರು.

ಉತ್ತರ ಪ್ರದೇಶ: ತಂಗಿಯ ಶಿರಚ್ಛೇದ ಮಾಡಿ, ಆಕೆಯ ತಲೆಯೊಂದಿಗೆ ಬೀದಿಯಲ್ಲಿ ತಿರುಗಾಡಿದ ಅಣ್ಣ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Jul 21, 2023 | 6:05 PM

ಅಲಹಾಬಾದ್ ಜುಲೈ 21 : ಉತ್ತರ ಪ್ರದೇಶದ (Uttar pradesh) ಬಾರಾಬಂಕಿ (Barabanki) ಜಿಲ್ಲೆಯ ಹಳ್ಳಿಯೊಂದರಲ್ಲಿ 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯ ಶಿರಚ್ಛೇದ ಮಾಡಿದ ಪ್ರಕರಣ ವರದಿ ಆಗಿದೆ. ತಂಗಿಯ ಪ್ರೇಮ ಸಂಬಂಧವನ್ನು ವಿರೋಧಿಸಿ ಈ ಕೃತ್ಯ ಎಸಗಿದ್ದು ಈತನನ್ನು ಬಂಧಿಸಲಾಗಿದ. ಮಿತ್ವಾರಾ ಗ್ರಾಮದಲ್ಲಿ, 24 ವರ್ಷದ ರಿಯಾಜ್ ಎಂಬ ವ್ಯಕ್ತಿ ತನ್ನ ಸಹೋದರಿಯ ಶಿರಚ್ಛೇದ ಮಾಡಿದ್ದಾನೆ. ಆಕೆ ತನ್ನ ಗ್ರಾಮದ ಅದೇ ಸಮುದಾಯದ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಆಕೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ಈ ಸಂಬಂಧ ಯುವತಿಯ ತಂದೆ ದೂರು  ದಾಖಲಿಸಿದ್ದರು. ತಂಗಿಯ ಪ್ರೇಮದ ಬಗ್ಗೆ  ಕೋಪಗೊಂಡ ರಿಯಾಜ್ ಆಕೆಯ ಶಿರಚ್ಛೇದ ಮಾಡಿದ್ದಾನೆ. ಪೊಲೀಸರು ಗ್ರಾಮವನ್ನು ತಲುಪಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ-ಉತ್ತರ) ಅಶುತೋಷ್ ಮಿಶ್ರಾ ತಿಳಿಸಿದ್ದಾರೆ.

ಏನಿದು ಪ್ರಕರಣ?

ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ವಾರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಿಯಾಜ್ ಎಂದು ಗುರುತಿಸಲಾದ ಆರೋಪಿಯು ತನ್ನ ಸಹೋದರಿ ಆಶಿಫಾಳ ಶಿರಚ್ಛೇದ ಮಾಡಿದ್ದಾನೆ. ಗ್ರಾಮದ ಚಾಂದ್ ಬಾಬು ಎಂಬಾತನ ಜೊತೆ ಆಶಿಫಾಗೆ ಇದ್ದ ಪ್ರೇಮ ಸಂಬಂಧವೇ ವಾದಕ್ಕೆ ಕಾರಣ. ಹಲವು ದಿನಗಳ ಹಿಂದೆ, ಚಾಂದ್ ಬಾಬು ಆಶಿಫಾಳನ್ನು ಕರೆದುಕೊಂಡು ಹೋಗಿದ್ದರು. ಆಕೆಯ ಕುಟುಂಬವು ಪೋಲಿಸ್ ದೂರು ದಾಖಲಿಸಿತ್ತು.

ಆಶಿಫಾಳ ಸಹೋದರ ರಿಯಾಜ್​​ಗೆ ತನ್ನ ಸಹೋದರಿ ಚಾಂದ್ ಬಾಬು ಜೊತೆಗಿನ ಪ್ರೇಮ ಸಂಬಂಧದ ಬಗ್ಗೆ ತೀವ್ರ ಸಿಟ್ಟಿತ್ತು. ಈ ಪ್ರೇಮ ಸಂಬಂಧದಿಂದ ಇವರಿಬ್ಬರ ನಡುವೆ ಜಗಳವಾಗಿತ್ತು. ಶುಕ್ರವಾರ ಮಧ್ಯಾಹ್ನ ಅಣ್ಣ ಮತ್ತು ತಂಗಿ ನಡುವೆ ವಾಗ್ವಾದ ನಡೆದಿದ್ದು, ಸಿಟ್ಟಿನ ಭರದಲ್ಲಿ ರಿಯಾಜ್ ಹರಿತವಾದ ಆಯುಧದಿಂದ ತಂಗಿಯ ತಲೆ ಕಡಿದಿದ್ದಾನೆ. ಕೃತ್ಯವೆಸಗಿದ ನಂತರ ಸಹೋದರಿಯ ಕತ್ತರಿಸಿದ ತಲೆಯನ್ನು ಕೈಯಲ್ಲಿ ಹಿಡಿದು ಮನೆಯಿಂದ ಹೊರಗೆ ಹೋಗಿದ್ದಾನೆ.

ಇದನ್ನೂ ಓದಿ: ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ಭಯಭೀತರಾದ ಗ್ರಾಮಸ್ಥರು ಕೂಡಲೇ ಫತೇಪುರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ್ದು, ಆಶಿಫಾಳ ತಲೆಯನ್ನು ಹಿಡಿದುಕೊಂಡಿದ್ದ ಆತನನ್ನು ಸ್ಥಳದಲ್ಲೇ ಬಂಧಿಸಲಾಯಿತು.

ಪೊಲೀಸರು ಆಶಿಫಾಳ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಘಟನೆಯ ಉದ್ದೇಶ ಮತ್ತು ಸಂದರ್ಭಗಳ ಬಗ್ಗೆ ತನಿಖೆ ನಡೆಯುತ್ತಿದೆ. ರಿಯಾಜ್ ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭೀಕರ ಅಪರಾಧಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Fri, 21 July 23

ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?