AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹಿಂದೂ ಯುವತಿಯನ್ನು ಪ್ರೇಮಿಸಿದ ಮುಸ್ಲಿಂ ಯುವಕನ ಹೆತ್ತವರನ್ನು ಹೊಡೆದುಕೊಂದ ಜನ

ಗ್ರಾಮಸ್ಥರ ಪ್ರಕಾರ ಮೃತ ದಂಪತಿಯ ಪುತ್ರ ಹಾಗೂ ಶೌಕತ್ ರಾಂಪಾಲ್ ಅವರ ಪುತ್ರಿ ರೂಬಿ ನಡುವೆ ಪ್ರೇಮ ಸಂಬಂಧವಿತ್ತು. ಶೌಕತ್ 2020 ರಲ್ಲಿ ರೂಬಿಯನ್ನು ಅಪಹರಿಸಿದ್ದರು. ಆಗ ರೂಬಿ ಅಪ್ರಾಪ್ತ ವಯಸ್ಸಿನವಳಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಶೌಕತ್ ನನ್ನು ಜೈಲಿಗೆ ಕಳುಹಿಸಿದ್ದರು. ಇದಾದ ನಂತರ ಮತ್ತೆ ಜೂನ್‌ನಲ್ಲಿ ರೂಬಿಯನ್ನು ಅಪಹರಿಸಿ ಮದುವೆಯಾದರು ಎಂದು ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ಉತ್ತರ ಪ್ರದೇಶ: ಹಿಂದೂ ಯುವತಿಯನ್ನು ಪ್ರೇಮಿಸಿದ ಮುಸ್ಲಿಂ ಯುವಕನ ಹೆತ್ತವರನ್ನು ಹೊಡೆದುಕೊಂದ ಜನ
ಹತ್ಯೆಗೀಡಾದ ದಂಪತಿImage Credit source: NDTV
ರಶ್ಮಿ ಕಲ್ಲಕಟ್ಟ
|

Updated on:Aug 20, 2023 | 11:38 AM

Share

ಸೀತಾಪುರ: ಉತ್ತರ ಪ್ರದೇಶದ (Uttar Pradesh) ಸೀತಾಪುರದಲ್ಲಿ (Sitapur) ಮುಸ್ಲಿಂ ದಂಪತಿಯನ್ನು ಅಕ್ಕಪಕ್ಕದ ಮನೆಯವರು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಹೊಡೆದು ಕೊಂದ ಪ್ರಕರಣ ವರದಿ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಸಂತ್ರಸ್ತೆಯ ಮಗ ಮತ್ತು ಆರೋಪಿಗಳ ಮಗಳ ನಡುವಿನ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಶುಕ್ರವಾರ ನಡೆದ ದಾಳಿಯಲ್ಲಿ ದಂಪತಿಗಳಾದ ಅಬ್ಬಾಸ್ ಮತ್ತು ಅವರ ಪತ್ನಿ ಕಮರುಲ್ ನಿಶಾ ಸ್ಥಳದಲ್ಲೇ ಸಾವಿಗೀಡಾದಿದ್ದು, ಆರೋಪಿಗಳೆಲ್ಲರೂ ಸ್ಥಳದಿಂದ ಪರಾರಿಯಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಅಬ್ಬಾಸ್ ಅವರ ಮಗ ಪಕ್ಕದ ಮನೆಯ ಹುಡುಗಿಯೊಂದಿಗೆ ಓಡಿಹೋಗಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಬ್ಬಾಸ್ ಪುತ್ರನನ್ನು ಜೈಲಿಗೆ ಕಳುಹಿಸಲಾಗಿತ್ತು ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಕೆಲವು ದಿನಗಳ ಹಿಂದೆ ಅಬ್ಬಾಸ್ ಅವರ ಮಗ ಜೈಲಿನಿಂದ ಹೊರಬಂದಾಗ, ಕುಟುಂಬದ ಕೆಲವು ಸದಸ್ಯರು ದಂಪತಿಗಳ ಮೇಲೆ ದಾಳಿ ನಡೆಸಲು ಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರ ಪ್ರಕಾರ ಮೃತ ದಂಪತಿಯ ಪುತ್ರ ಹಾಗೂ ಶೌಕತ್ ರಾಂಪಾಲ್ ಅವರ ಪುತ್ರಿ ರೂಬಿ ನಡುವೆ ಪ್ರೇಮ ಸಂಬಂಧವಿತ್ತು. ಶೌಕತ್ 2020 ರಲ್ಲಿ ರೂಬಿಯನ್ನು ಅಪಹರಿಸಿದ್ದರು. ಆಗ ರೂಬಿ ಅಪ್ರಾಪ್ತ ವಯಸ್ಸಿನವಳಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಶೌಕತ್ ನನ್ನು ಜೈಲಿಗೆ ಕಳುಹಿಸಿದ್ದರು. ಇದಾದ ನಂತರ ಮತ್ತೆ ಜೂನ್‌ನಲ್ಲಿ ರೂಬಿಯನ್ನು ಅಪಹರಿಸಿ ಮದುವೆಯಾದರು ಎಂದು ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ:  ರಾಜೀವ್ ಗಾಂಧಿ 79ನೇ ಜನ್ಮದಿನ: ಲಡಾಖ್‌ನ ಪಾಂಗಾಂಗ್ ಸರೋವರ ದಡದಲ್ಲಿ ಗೌರವ ನಮನ ಸಲ್ಲಿಸಿದ ರಾಹುಲ್ ಗಾಂಧಿ

ತನಿಖೆ ನಡೆಯುತ್ತಿದೆ.ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Sun, 20 August 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?