Crime News: ಹೆಂಡತಿಗೆ ಹೊಡೆದ ಸೈನಿಕನನ್ನು ಶೂಟ್ ಮಾಡಿ ಕೊಂದ ಮಾವ

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ವೈವಾಹಿಕ ಜಗಳದ ಕಾರಣದಿಂದ ಹೆಂಡತಿಯನ್ನು ಹೊಡೆದ ಭಾರತೀಯ ಯೋಧನನ್ನು ಆತನ ಮಾವನೇ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ.

Crime News: ಹೆಂಡತಿಗೆ ಹೊಡೆದ ಸೈನಿಕನನ್ನು ಶೂಟ್ ಮಾಡಿ ಕೊಂದ ಮಾವ
ಸಾಂದರ್ಭಿಕ ಚಿತ್ರImage Credit source: istock
Follow us
|

Updated on: May 11, 2024 | 8:05 PM

ಶ್ರೀನಗರ: ತನ್ನ ಮಗಳ ಮೇಲೆ ಹಲ್ಲೆ ಮಾಡಿದ ಅಳಿಯನನ್ನು ವ್ಯಕ್ತಿಯೊಬ್ಬರು ಕೊಲೆ (Murder) ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿಯ ಕೆಂಬಾಲ್ ದಂಗಾ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಸಮೀಪದ ಪನಾಸಾ ಗ್ರಾಮದ ನಿವಾಸಿ ದೌಲತ್ ರಾಮ್ ರಜೆಯ ಮೇಲೆ ಮನೆಗೆ ಬಂದಿದ್ದ ಸೇನಾ ಯೋಧ ಅಮಿತ್ ಸಿಂಗ್ (Amit Singh) ಅವರನ್ನು ಭೇಟಿಯಾಗಲು ಆಗಮಿಸಿದ್ದರು. ಆಗ ಈ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ವೈವಾಹಿಕ ವಿವಾದಕ್ಕೆ ಸಂಬಂಧಿಸಿದಂತೆ ಸೇನಾ ಯೋಧನನ್ನು ಆತನ ಮಾವ ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸರ ಪ್ರಕಾರ, ಗ್ರಾಮ ರಕ್ಷಣಾ ಪಡೆ (ವಿಡಿಜಿ) ಸದಸ್ಯ ದೌಲತ್ ರಾಮ್ ತನ್ನ 303 ರೈಫಲ್‌ನಿಂದ ತನ್ನ ಅಳಿಯ ಅಮಿತ್ ಸಿಂಗ್‌ಗೆ ಗುಂಡು ಹಾರಿಸಿದ್ದಾರೆ. ಇದರ ಪರಿಣಾಮವಾಗಿ ಅವರಿಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹಾವೇರಿ: ಮಗ ಪ್ರಿಯತಮೆಯೊಂದಿಗೆ ಓಡಿಹೋಗಿದ್ದಕ್ಕೆ ಮಹಿಳೆಯ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಕೆಲವು ದೀರ್ಘಕಾಲದ ವೈವಾಹಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಅಮಿತ್ ಸಿಂಗ್ ತನ್ನ ಪತ್ನಿ (ರಾಮ್‌ನ ಮಗಳು) ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಕೋಪಗೊಂಡ ರಾಮ್ ತನ್ನ ಅಳಿಯನಿಗೆ ಬುದ್ಧಿ ಕಲಿಸಲು ಮಗಳ ಮನೆಗೆ ಬಂದಿದ್ದಾರೆ. ಈ ವೇಳೆ ಜಗಳಗಳಾಗಿದ್ದು, ಕೋಪದ ಭರದಲ್ಲಿ ರಾಮ್ ತನ್ನ ಅಳಿಯನ ಎದೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು.

ಗುಂಡು ಹಾರಿಸಿದ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ, ದೈಹಿಕ ಹಲ್ಲೆಯಿಂದ ಗಾಯಗೊಂಡಿದ್ದ ಅಮಿತ್ ಸಿಂಗ್ ಮತ್ತು ಅವರ ಪತ್ನಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸಲ್ಲು ನಿವಾಸದ ಮೇಲೆ ಗುಂಡು ಹಾರಿಸಿದವರಿಗೆ ಸಿಕ್ಕಿತ್ತು ಲಕ್ಷ ಲಕ್ಷ ಹಣ; ಮೂರನೇ ಆರೋಪಿ ಅರೆಸ್ಟ್

ಪ್ರಾಥಮಿಕ ಚಿಕಿತ್ಸೆಯ ನಂತರ, ಸಿಂಗ್ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು (ಜಿಎಂಸಿ) ಆಸ್ಪತ್ರೆಗೆ ಉಲ್ಲೇಖಿಸಲಾಯಿತು ಆದರೆ ಜಮ್ಮುವಿಗೆ ತೆರಳುವ ಮಾರ್ಗದಲ್ಲಿ ಅವರು ಸಾವನ್ನಪ್ಪಿದರು ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿ ದೌಲತ್ ರಾಮ್ ಅವರನ್ನು ಬಂಧಿಸಲಾಗಿದೆ ಮತ್ತು ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ