Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ

ವಿವಾಹಿತ ಮಹಿಳೆಯೊಂದಿಗೆ ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಕೊನೆಗೆ ಆಕೆಯನ್ನು ಅಪಹರಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ
ಅಪಹರಣ
Follow us
ನಯನಾ ರಾಜೀವ್
|

Updated on:Jul 13, 2023 | 8:03 AM

ವಿವಾಹಿತ ಮಹಿಳೆಯೊಂದಿಗೆ ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಕೊನೆಗೆ ಆಕೆಯನ್ನು ಅಪಹರಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆಕೆ ಹೈದರಾಬಾದ್​ ನಿವಾಸಿ ಆತ ಮಧ್ಯಪ್ರದೇಶದವನಾಗಿದ್ದು, ಇಬ್ಬರಿಗೂ ಫೇಸ್​ಬುಕ್​ನಿಂದ ಪ್ರೀತಿ ಶುರುವಾಗಿತ್ತು.  ಮಧ್ಯಪ್ರದೇಶದ ಇಂದೋರ್‌ನಲ್ಲಿ ನಾಪತ್ತೆಯಾಗಿರುವ ಪುರುಷ ಮತ್ತು ಮಹಿಳೆಗಾಗಿ ಹೈದರಾಬಾದ್ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇಬ್ಬರು ನಿರಂತರವಾಗಿ ತಮ್ಮ ಸ್ಥಳವನ್ನು ಬದಲಾಯಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜುಲೈ 2 ರಿಂದ, ಹೈದರಾಬಾದ್ ನಿವಾಸಿಯಾಗಿರುವ ವಿವಾಹಿತ ಮಹಿಳೆ ತನ್ನ ಫೇಸ್‌ಬುಕ್ ಸ್ನೇಹಿತನೊಂದಿಗೆ ನಾಪತ್ತೆಯಾಗಿದ್ದಾಳೆ. ಮಹಿಳೆಯ ಪತಿ ಪತ್ನಿಯ ಅಪಹರಣದ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೈದರಾಬಾದ್‌ನಲ್ಲಿ ಕಾಸ್ಮೆಟಿಕ್ಸ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿರುವ ಸಂಜಯ್ ಜೈನ್ ಅವರು ತಮ್ಮ ಪತ್ನಿ ಸಲೋನಿಯನ್ನು ಅಪಹರಣ ಮಾಡಿರುವ ಬಗ್ಗೆ ದೂರು ದಾಖಲಿಸಿದ್ದಾರೆ.

ಇವರಿಬ್ಬರು ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು, ಎರಡು ವರ್ಷದ ಮಗ ಮತ್ತು ಆರು ತಿಂಗಳ ಹೆಣ್ಣು ಮಗುವಿದೆ. ಕಳೆದ ವರ್ಷ, ಸಲೋನಿ ಇಂದೋರ್‌ನ ರೋಹಿತ್ ಜತೆ ಫೇಸ್​ಬುಕ್​ನಲ್ಲಿ ಸ್ನೇಹ ಶುರುವಾಗಿತ್ತು.

ಮತ್ತಷ್ಟು ಓದಿ: Belagavi News: ಹಾಡಹಗಲೇ ಬಾಲಕಿ ಕಿಡ್ನಾಪ್​ಗೆ ಯತ್ನ; ಬೆಚ್ಚಿಬಿದ್ದ ಬೆಳಗಾವಿ ಜನ

ಕೆಲವು ದಿನಗಳ ಹಿಂದೆ, ಸಲೋನಿ ರೋಹಿತ್‌ನನ್ನು ಭೇಟಿಯಾಗಲು ಇಂದೋರ್‌ಗೆ ಹೋಗಿದ್ದರು. ಜುಲೈ 2ರಂದು ಹೈದರಾಬಾದಿಗೆ ಬಂದು ಆಕೆಯನ್ನು ಕರೆದುಕೊಂಡು ಹೋಗಿದ್ದ. ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ, ಇಬ್ಬರು ಇಂದೋರ್‌ನಲ್ಲಿದ್ದಾರೆ ಎಂದು ಪೊಲೀಸರು ಪತ್ತೆ ಮಾಡಿದ್ದರು.

ಈ ಬಗ್ಗೆ ಪೊಲೀಸರು ಮಹಿಳೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸಲೋನಿಯ ಇಬ್ಬರೂ ಮಕ್ಕಳು ಪ್ರಸ್ತುತ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ.

ಸದ್ಯ ಪೊಲೀಸರು ನಿರಂತರವಾಗಿ ಅವರಿರುವ ಸ್ಥಳದ ಮೇಲೆ ನಿಗಾ ಇಡುತ್ತಿದ್ದು, ಶೀಘ್ರದಲ್ಲಿ ಅವರನ್ನು ಪತ್ತೆ ಮಾಡುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Thu, 13 July 23

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ