AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ

ವಿವಾಹಿತ ಮಹಿಳೆಯೊಂದಿಗೆ ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಕೊನೆಗೆ ಆಕೆಯನ್ನು ಅಪಹರಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ
ಅಪಹರಣ
ನಯನಾ ರಾಜೀವ್
|

Updated on:Jul 13, 2023 | 8:03 AM

Share

ವಿವಾಹಿತ ಮಹಿಳೆಯೊಂದಿಗೆ ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಕೊನೆಗೆ ಆಕೆಯನ್ನು ಅಪಹರಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆಕೆ ಹೈದರಾಬಾದ್​ ನಿವಾಸಿ ಆತ ಮಧ್ಯಪ್ರದೇಶದವನಾಗಿದ್ದು, ಇಬ್ಬರಿಗೂ ಫೇಸ್​ಬುಕ್​ನಿಂದ ಪ್ರೀತಿ ಶುರುವಾಗಿತ್ತು.  ಮಧ್ಯಪ್ರದೇಶದ ಇಂದೋರ್‌ನಲ್ಲಿ ನಾಪತ್ತೆಯಾಗಿರುವ ಪುರುಷ ಮತ್ತು ಮಹಿಳೆಗಾಗಿ ಹೈದರಾಬಾದ್ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇಬ್ಬರು ನಿರಂತರವಾಗಿ ತಮ್ಮ ಸ್ಥಳವನ್ನು ಬದಲಾಯಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜುಲೈ 2 ರಿಂದ, ಹೈದರಾಬಾದ್ ನಿವಾಸಿಯಾಗಿರುವ ವಿವಾಹಿತ ಮಹಿಳೆ ತನ್ನ ಫೇಸ್‌ಬುಕ್ ಸ್ನೇಹಿತನೊಂದಿಗೆ ನಾಪತ್ತೆಯಾಗಿದ್ದಾಳೆ. ಮಹಿಳೆಯ ಪತಿ ಪತ್ನಿಯ ಅಪಹರಣದ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೈದರಾಬಾದ್‌ನಲ್ಲಿ ಕಾಸ್ಮೆಟಿಕ್ಸ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿರುವ ಸಂಜಯ್ ಜೈನ್ ಅವರು ತಮ್ಮ ಪತ್ನಿ ಸಲೋನಿಯನ್ನು ಅಪಹರಣ ಮಾಡಿರುವ ಬಗ್ಗೆ ದೂರು ದಾಖಲಿಸಿದ್ದಾರೆ.

ಇವರಿಬ್ಬರು ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು, ಎರಡು ವರ್ಷದ ಮಗ ಮತ್ತು ಆರು ತಿಂಗಳ ಹೆಣ್ಣು ಮಗುವಿದೆ. ಕಳೆದ ವರ್ಷ, ಸಲೋನಿ ಇಂದೋರ್‌ನ ರೋಹಿತ್ ಜತೆ ಫೇಸ್​ಬುಕ್​ನಲ್ಲಿ ಸ್ನೇಹ ಶುರುವಾಗಿತ್ತು.

ಮತ್ತಷ್ಟು ಓದಿ: Belagavi News: ಹಾಡಹಗಲೇ ಬಾಲಕಿ ಕಿಡ್ನಾಪ್​ಗೆ ಯತ್ನ; ಬೆಚ್ಚಿಬಿದ್ದ ಬೆಳಗಾವಿ ಜನ

ಕೆಲವು ದಿನಗಳ ಹಿಂದೆ, ಸಲೋನಿ ರೋಹಿತ್‌ನನ್ನು ಭೇಟಿಯಾಗಲು ಇಂದೋರ್‌ಗೆ ಹೋಗಿದ್ದರು. ಜುಲೈ 2ರಂದು ಹೈದರಾಬಾದಿಗೆ ಬಂದು ಆಕೆಯನ್ನು ಕರೆದುಕೊಂಡು ಹೋಗಿದ್ದ. ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ, ಇಬ್ಬರು ಇಂದೋರ್‌ನಲ್ಲಿದ್ದಾರೆ ಎಂದು ಪೊಲೀಸರು ಪತ್ತೆ ಮಾಡಿದ್ದರು.

ಈ ಬಗ್ಗೆ ಪೊಲೀಸರು ಮಹಿಳೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸಲೋನಿಯ ಇಬ್ಬರೂ ಮಕ್ಕಳು ಪ್ರಸ್ತುತ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ.

ಸದ್ಯ ಪೊಲೀಸರು ನಿರಂತರವಾಗಿ ಅವರಿರುವ ಸ್ಥಳದ ಮೇಲೆ ನಿಗಾ ಇಡುತ್ತಿದ್ದು, ಶೀಘ್ರದಲ್ಲಿ ಅವರನ್ನು ಪತ್ತೆ ಮಾಡುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Thu, 13 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ