AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ

ವಿವಾಹಿತ ಮಹಿಳೆಯೊಂದಿಗೆ ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಕೊನೆಗೆ ಆಕೆಯನ್ನು ಅಪಹರಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಫೇಸ್​ಬುಕ್​ನಲ್ಲಿ ವಿವಾಹಿತ ಮಹಿಳೆಯೊಂದಿಗೆ ಸ್ನೇಹ, ಮಧ್ಯಪ್ರದೇಶದಿಂದ ಹೈದರಾಬಾದ್​ಗೆ ಬಂದು ಆಕೆಯನ್ನು ಅಪಹರಿಸಿದ ಪ್ರಿಯಕರ
ಅಪಹರಣ
ನಯನಾ ರಾಜೀವ್
|

Updated on:Jul 13, 2023 | 8:03 AM

Share

ವಿವಾಹಿತ ಮಹಿಳೆಯೊಂದಿಗೆ ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ ಕೊನೆಗೆ ಆಕೆಯನ್ನು ಅಪಹರಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆಕೆ ಹೈದರಾಬಾದ್​ ನಿವಾಸಿ ಆತ ಮಧ್ಯಪ್ರದೇಶದವನಾಗಿದ್ದು, ಇಬ್ಬರಿಗೂ ಫೇಸ್​ಬುಕ್​ನಿಂದ ಪ್ರೀತಿ ಶುರುವಾಗಿತ್ತು.  ಮಧ್ಯಪ್ರದೇಶದ ಇಂದೋರ್‌ನಲ್ಲಿ ನಾಪತ್ತೆಯಾಗಿರುವ ಪುರುಷ ಮತ್ತು ಮಹಿಳೆಗಾಗಿ ಹೈದರಾಬಾದ್ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇಬ್ಬರು ನಿರಂತರವಾಗಿ ತಮ್ಮ ಸ್ಥಳವನ್ನು ಬದಲಾಯಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜುಲೈ 2 ರಿಂದ, ಹೈದರಾಬಾದ್ ನಿವಾಸಿಯಾಗಿರುವ ವಿವಾಹಿತ ಮಹಿಳೆ ತನ್ನ ಫೇಸ್‌ಬುಕ್ ಸ್ನೇಹಿತನೊಂದಿಗೆ ನಾಪತ್ತೆಯಾಗಿದ್ದಾಳೆ. ಮಹಿಳೆಯ ಪತಿ ಪತ್ನಿಯ ಅಪಹರಣದ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೈದರಾಬಾದ್‌ನಲ್ಲಿ ಕಾಸ್ಮೆಟಿಕ್ಸ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿರುವ ಸಂಜಯ್ ಜೈನ್ ಅವರು ತಮ್ಮ ಪತ್ನಿ ಸಲೋನಿಯನ್ನು ಅಪಹರಣ ಮಾಡಿರುವ ಬಗ್ಗೆ ದೂರು ದಾಖಲಿಸಿದ್ದಾರೆ.

ಇವರಿಬ್ಬರು ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು, ಎರಡು ವರ್ಷದ ಮಗ ಮತ್ತು ಆರು ತಿಂಗಳ ಹೆಣ್ಣು ಮಗುವಿದೆ. ಕಳೆದ ವರ್ಷ, ಸಲೋನಿ ಇಂದೋರ್‌ನ ರೋಹಿತ್ ಜತೆ ಫೇಸ್​ಬುಕ್​ನಲ್ಲಿ ಸ್ನೇಹ ಶುರುವಾಗಿತ್ತು.

ಮತ್ತಷ್ಟು ಓದಿ: Belagavi News: ಹಾಡಹಗಲೇ ಬಾಲಕಿ ಕಿಡ್ನಾಪ್​ಗೆ ಯತ್ನ; ಬೆಚ್ಚಿಬಿದ್ದ ಬೆಳಗಾವಿ ಜನ

ಕೆಲವು ದಿನಗಳ ಹಿಂದೆ, ಸಲೋನಿ ರೋಹಿತ್‌ನನ್ನು ಭೇಟಿಯಾಗಲು ಇಂದೋರ್‌ಗೆ ಹೋಗಿದ್ದರು. ಜುಲೈ 2ರಂದು ಹೈದರಾಬಾದಿಗೆ ಬಂದು ಆಕೆಯನ್ನು ಕರೆದುಕೊಂಡು ಹೋಗಿದ್ದ. ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ, ಇಬ್ಬರು ಇಂದೋರ್‌ನಲ್ಲಿದ್ದಾರೆ ಎಂದು ಪೊಲೀಸರು ಪತ್ತೆ ಮಾಡಿದ್ದರು.

ಈ ಬಗ್ಗೆ ಪೊಲೀಸರು ಮಹಿಳೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸಲೋನಿಯ ಇಬ್ಬರೂ ಮಕ್ಕಳು ಪ್ರಸ್ತುತ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ.

ಸದ್ಯ ಪೊಲೀಸರು ನಿರಂತರವಾಗಿ ಅವರಿರುವ ಸ್ಥಳದ ಮೇಲೆ ನಿಗಾ ಇಡುತ್ತಿದ್ದು, ಶೀಘ್ರದಲ್ಲಿ ಅವರನ್ನು ಪತ್ತೆ ಮಾಡುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Thu, 13 July 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ