AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಹಿಳೆಯ ಮೇಲೆ ಅತ್ಯಾಚಾರ, ಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ ಕಾಮುಕರು

ಇಂದೋರ್​ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಬೆತ್ತಲೆಗೊಳಿಸಿ 30 ನಿಮಿಷಗಳ ಕಾಲ ನೃತ್ಯ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಅಪರಾಧ ನಡೆದ 2 ತಿಂಗಳ ನಂತರ ಕೇಸ್ ದಾಖಲಿಸಲಾಗಿದೆ.

Crime News: ಮಹಿಳೆಯ ಮೇಲೆ ಅತ್ಯಾಚಾರ, ಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ ಕಾಮುಕರು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 03, 2024 | 10:21 PM

Share

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ, ಬೆಲ್ಟ್‌ನಿಂದ ಹೊಡೆದು ಅರ್ಧ ಗಂಟೆಗಳ ಕಾಲ ಬೆತ್ತಲೆಯಾಗಿ ನೃತ್ಯ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 2 ತಿಂಗಳ ಹಿಂದೆ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆರೋಪಿಗಳು ಜೂನ್ 11ರಂದು ತನ್ನನ್ನು ಬಲವಂತವಾಗಿ ಗೋಡೌನ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಕನಾಡಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟಿವಿಯಲ್ಲಿ ಅಶ್ಲೀಲ ವೀಡಿಯೋ ನೋಡಿದ ನಂತರ ಆರೋಪಿಗಳು ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News: ರಾತ್ರಿ ಮಲಗಿದ್ದ ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ

ಈ ದೂರನ್ನು ಪೊಲೀಸರು ಆರಂಭದಲ್ಲಿ ಗಂಭೀರವಾಗಿ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿ ಆ ಮಹಿಳೆ ಮಧ್ಯಪ್ರದೇಶ ಹೈಕೋರ್ಟ್‌ಗೆ ತೆರಳಿದ ನಂತರ ಸೋಮವಾರ ತಡರಾತ್ರಿ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜುಲೈ 17ರಂದು ತಾನು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಆಕೆಯ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಮಹಿಳೆಯ ದೂರನ್ನು 90 ದಿನಗಳಲ್ಲಿ ವಿಲೇವಾರಿ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕನಾಡಿಯಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ಸೂಚಿಸಿತು. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಮದುವೆಯ ಶಾಪಿಂಗ್​ಗೆ ಹೋಗುತ್ತಿದ್ದವರ ಹತ್ಯೆ; ಪಂಜಾಬ್‌ನ ಫಿರೋಜ್‌ಪುರದಲ್ಲಿ ತ್ರಿವಳಿ ಕೊಲೆ

ಇದೇ ವೇಳೆ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆಡಳಿತ ಪಕ್ಷದ ಒತ್ತಡದಿಂದಾಗಿ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ. ಆದರೆ, ಮಧ್ಯಪ್ರದೇಶ ರಾಜ್ಯ ಬಿಜೆಪಿ ವಕ್ತಾರ ನರೇಂದ್ರ ಸಲೂಜಾ ಅವರು ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ ಮತ್ತು ನ್ಯಾಯದ ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!