AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಹೆಂಡಿರ ಜಗಳದಲ್ಲಿ ಕೂಸು ಹತವಾಯ್ತು, ಎಲ್ಲಿ?

ಬೆಂಗಳೂರು: ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಗಾದೆಯಿದೆ. ಆದರೆ, ಗಂಡ ಹೆಂಡಿರ ಜಗಳದಲ್ಲಿ ಕೂಸು ಸಾವನ್ನಪ್ಪಿರೋ ಘಟನೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ನಡೆದಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲೂಕಿನ ನಿವಾಸಿಗಳಾದ ಜನನಿ ಮತ್ತು ಶ್ರೀನಿವಾಸ್ ದಂಪತಿ ಎರಡು‌ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. 3 ತಿಂಗಳ ಹಿಂದೆ ದಂಪತಿಗೆ ಹೆಣ್ಣು ಮಗು ಹುಟ್ಟಿತ್ತು. ಅದರೆ, ಇತ್ತೀಚೆಗೆ ಪ್ರತಿದಿನ ಜಗಳವಾಡುತ್ತಿದ್ದ ದಂಪತಿ ನಿನ್ನೆ ರಾತ್ರಿಯೂ ಸಹ ಜಗಳಕ್ಕೆ ಮುಂದಾದರು. ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ […]

ಗಂಡ ಹೆಂಡಿರ ಜಗಳದಲ್ಲಿ ಕೂಸು ಹತವಾಯ್ತು, ಎಲ್ಲಿ?
KUSHAL V
|

Updated on:Jul 05, 2020 | 7:38 PM

Share

ಬೆಂಗಳೂರು: ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಗಾದೆಯಿದೆ. ಆದರೆ, ಗಂಡ ಹೆಂಡಿರ ಜಗಳದಲ್ಲಿ ಕೂಸು ಸಾವನ್ನಪ್ಪಿರೋ ಘಟನೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ನಡೆದಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲೂಕಿನ ನಿವಾಸಿಗಳಾದ ಜನನಿ ಮತ್ತು ಶ್ರೀನಿವಾಸ್ ದಂಪತಿ ಎರಡು‌ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. 3 ತಿಂಗಳ ಹಿಂದೆ ದಂಪತಿಗೆ ಹೆಣ್ಣು ಮಗು ಹುಟ್ಟಿತ್ತು. ಅದರೆ, ಇತ್ತೀಚೆಗೆ ಪ್ರತಿದಿನ ಜಗಳವಾಡುತ್ತಿದ್ದ ದಂಪತಿ ನಿನ್ನೆ ರಾತ್ರಿಯೂ ಸಹ ಜಗಳಕ್ಕೆ ಮುಂದಾದರು. ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ ಶ್ರೀನಿವಾಸ್ ಜನನಿಯನ್ನು ನೂಕಿದ್ದಾನೆ. ಈ ವೇಳೆ ಜನನಿ ಪಕ್ಕದಲ್ಲೇ ಜೋಳಿಗೆಯಲ್ಲಿ ಮಲಗಿದ್ದ ಮಗುವಿನ ಮೇಲೆ ಬಿದ್ದಿದ್ದಾಳೆ. ಇದರಿಂದ ಗಾಬರಿಯಾದ ಮಗು ಅಳಲಾರಂಭಿಸಿತು.

ಮಗುವಿನ ಅಳುವನ್ನು ಕೇಳಿ ಕೋಪಗೊಂಡ ಶ್ರೀನಿವಾಸ್ ಮಗುವನ್ನು ಜೋಳಿಗೆಯಿಂದ ಹೊರತೆಗೆದು ಬಿಸಾಡಿದ್ದಾನೆ. ಗೋಡೆಗೆ ತಗಲಿದ ಕೂಸು ಕೊನೆಗೆ ಪ್ರಜ್ಞೆ ತಪ್ಪಿತ್ತು. ತಕ್ಷಣವೇ ಜನನಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದಳು. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಮಗು ಸಾವನ್ನಪ್ಪಿದ್ದೆ. ಇನ್ನು ಸ್ಥಳಕ್ಕೆ ಭೇಟಿಕೊಟ್ಟ ಅತ್ತಿಬೆಲೆ ಪೊಲೀಸರು ಪಾಪಿ ತಂದೆಯನ್ನು ಬಂಧಿಸಿದ್ದಾರೆ.

Published On - 3:57 pm, Sun, 5 July 20

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ