AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯ ಹೋಟೆಲ್​ನಲ್ಲಿ ಇನ್ಫೋಸಿಸ್​ನ ಮಹಿಳಾ ಟೆಕ್ಕಿಯ ಹತ್ಯೆ

ಪುಣೆಯ ಹೊರವಲಯದಲ್ಲಿರುವ ಹೋಟೆಲ್‌ವೊಂದರಲ್ಲಿ ಶನಿವಾರ ರಾತ್ರಿ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಟೆಕ್ಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ಆರೋಪದಲ್ಲಿ ಮಹಿಳೆಯ ಗೆಳೆಯನನ್ನು ಬಂಧಿಸಲಾಗಿದ್ದು, ಆತನಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.

ಪುಣೆಯ ಹೋಟೆಲ್​ನಲ್ಲಿ ಇನ್ಫೋಸಿಸ್​ನ ಮಹಿಳಾ ಟೆಕ್ಕಿಯ ಹತ್ಯೆ
ಟೆಕ್ಕಿImage Credit source: NDTV
ನಯನಾ ರಾಜೀವ್
|

Updated on: Jan 29, 2024 | 10:19 AM

Share

ಪುಣೆಯ ಹೊರವಲಯದಲ್ಲಿರುವ ಹೋಟೆಲ್‌ವೊಂದರಲ್ಲಿ ಶನಿವಾರ ರಾತ್ರಿ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಟೆಕ್ಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಿದ ಆರೋಪದಲ್ಲಿ ಮಹಿಳೆಯ ಗೆಳೆಯನನ್ನು ಬಂಧಿಸಲಾಗಿದ್ದು, ಆತನಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.

ಪಿಂಪ್ರಿ ಚಿಂಚ್‌ವಾಡದ ಹಿಂಜೆವಾರಿ ಪ್ರದೇಶದ ಓಯೋ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹೋಟೆಲ್‌ಗೆ ಆಗಮಿಸಿ ಮಹಿಳೆಯ ಶವವನ್ನು ಹೊರತೆಗೆದರು. ಶವ ನೆಲದ ಮೇಲೆ ಬಿದ್ದಿದ್ದು, ಕೋಣೆಯಲ್ಲಿ ರಕ್ತದ ಕಲೆಗಳು ಕಂಡುಬಂದಿವೆ.

ಪೊಲೀಸರ ಪ್ರಕಾರ, ಮಹಿಳೆಯನ್ನು ವಂದನಾ ದ್ವಿವೇದಿ ಎಂದು ಗುರುತಿಸಲಾಗಿದೆ ಮತ್ತು ಆಕೆಯ ಗೆಳೆಯ ರಿಷಬ್ ನಿಗಮ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಉತ್ತರ ಪ್ರದೇಶದವರು. ಇವರಿಬ್ಬರ ನಡುವೆ ಪರಸ್ಪರ ಸಂಬಂಧವಿದ್ದು, ಜಗಳವೇ ಕೊಲೆಗೆ ಕಾರಣ ಎಂಬುದು ಈವರೆಗಿನ ತನಿಖೆಯಿಂದ ತಿಳಿದುಬಂದಿದೆ. ಈ ದುರಂತ ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ಈಗ ವಿಚಾರಣೆ ನಡೆಸಲಾಗುತ್ತಿದೆ.

ಮತ್ತಷ್ಟು ಓದಿ: ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ

ಹೋಟೆಲ್‌ನ ಸಿಸಿಟಿವಿ ಫೂಟೇಜ್‌ನಲ್ಲಿ ರಿಷಬ್ ತಡರಾತ್ರಿ ಕೋಣೆಯಿಂದ ಹೊರಬರುವುದನ್ನು ಕಾಣಬಹುದು. ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳನ್ನು ಸ್ಕ್ಯಾನ್ ಮಾಡಲು ಪ್ರಾರಂಭಿಸಿದರು ಬಳಿಕ ಆತ ಸಿಕ್ಕಿಬಿದ್ದಿದ್ದಾನೆ.

ಈ ಹೋಟೆಲ್​ ರೂಂ ಬುಕಿಂಗ್​ ಅನ್ನು ವಂದನಾ ಮತ್ತು ರಿಷಭ್ ಹೆಸರಿನಲ್ಲಿ ಮಾಡಲಾಗಿತ್ತು. ಆದ್ದರಿಂದ ಆತನ ಮೇಲೆ ಅನುಮಾನ ಹೆಚ್ಚಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಶಾಲ್ ಹಿರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ