AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ವಾತಾವರಣ ವೈಪರೀತ್ಯದಿಂದ ಬೆಳೆಗಳಿಗೆ ಕೀಟಗಳ ಕಾಟ; ರೈತರ ಅಳಲು

ಯಾವುದೇ ಒಂದು ಬೆಳೆ ಬೆಳೆಯಬೇಕಾದರೇ ಕಾಲಕ್ಕೆ ತಕ್ಕಂತೆ ಮಳೆಯಾಗುವುದು ಬಹಳ ಮುಖ್ಯ. ಇದರಿಂದ ಬಿತ್ತಿದ ಬೆಳೆಯು ಸಮೃದ್ಧವಾಗಿ ಬೆಳೆಯುವುದು. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಅದೆಷ್ಟೋ ರೈತರು ಬಿತ್ತನೆಯನ್ನೇ ಮಾಡದೆ ಸುಮ್ಮನೆ ಕೂತರೆ, ಕೆಲ ರೈತರು ಬಿತ್ತಿದ ಬೆಳೆಗೆ ಕಾಯಿಲೆ ಕಾಟ ಶುರುವಾಗಿದೆ.

ಬಾಗಲಕೋಟೆ: ವಾತಾವರಣ ವೈಪರೀತ್ಯದಿಂದ ಬೆಳೆಗಳಿಗೆ ಕೀಟಗಳ ಕಾಟ; ರೈತರ ಅಳಲು
ಬೆಳೆಗಳಿಗೆ ಕೀಟಗಳ ಕಾಟ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 23, 2023 | 9:00 AM

Share

ಬಾಗಲಕೋಟೆ, ಜು.23: ತಾಲೂಕಿನ ಕೆರಕಲಮಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದ ಹೊಲಗಳಲ್ಲಿ ಮೋಡ ಮುಸುಕಿದ ವಾತಾವರಣ, ನಿರಂತರವಾಗಿ ಸುರಿಯುತ್ತಿರುವ ಮಳೆ. ವಾತಾವರಣ ವೈಪರೀತ್ಯ ಹಾಗೂ ತಂಪಾದ ವಾತಾವರಣದಿಂದ ಹೊಲದಲ್ಲಿನ ಬೆಳೆಗಳಿಗೆ ಕೀಟಗಳ ಕಾಟ ಎದುರಾಗಿದ್ದು, ಹೆಸರು ಬೆಳೆ ಹಳದಿ ಬಣ್ಣಕ್ಕೆ ತಿರುಗಿದೆ. ಪರಿಣಾಮ ಇದೀಗ ರೈತರು ಬೆಳೆಗಳಿಗೆ ಕ್ರಿಮಿನಾಷಕ ಸಿಂಪಡಿಸುತ್ತಿದ್ದಾರೆ. ಹೌದು, ಬಾಗಲಕೋಟೆ(Bagalakote) ಜಿಲ್ಲೆಯಲ್ಲಿ ಪ್ರಮುಖವಾಗಿ ಮುಂಗಾರು ಅವಧಿಯಲ್ಲಿ ಬೆಳೆಯಬೇಕಿದ್ದ ಹೆಸರು ಬೆಳೆ ಬಿತ್ತನೆ ಕಾಲದಲ್ಲಿ ಮಳೆ ಆಗದ ಕಾರಣ ಬಹುತೇಕ ರೈತರು ಹೆಸರು ಬಿತ್ತದೆ ಹಾಗೆ ಬಿಟ್ಟಿದ್ದಾರೆ.

ಹೆಸರು ಬೆಳೆಗೆ ಹಳದಿ ರೋಗ, ಜೋಳಕ್ಕೆ ಕೀಟಬಾಧೆ

ಇನ್ನು ಕೆಲವೇ ಕೆಲ ರೈತರು ಬೆಳೆದ ಹೆಸರಿಗೆ ಹಳದಿ ರೋಗ ಶುರುವಾಗಿದೆ. ಕೆಲ ರೈತರು ಹೆಸರು ಬಿತ್ತನೆ ಮಾಡಬೇಕಾದಂತಹ ಪ್ರದೇಶದಲ್ಲಿ ಗೋವಿನ ಜೋಳವನ್ನು ಬೆಳೆದಿದ್ದು, ಗೋವಿನ ಜೋಳಕ್ಕೆ ಈಗ ಕೀಟಗಳ ಬಾದೆ ಶುರುವಾಗಿದೆ. ಹೊಲದಲ್ಲಿ ನೋಡೋಕೆ ಸಾಲು ಸಾಲಾಗಿ ಹಚ್ಚಹಸಿರಾಗಿ ಸಮೃದ್ಧವಾಗಿ ಬೆಳೆದ ರೀತಿಯಲ್ಲಿ ಗೋವಿನ ಜೋಳ ಕಂಡುಬಂದರೂ ಕೂಡ, ಕೀಟಗಳು ಗೋವಿನ ಜೋಳದ ಸುಳಿಯನ್ನು ಕತ್ತರಿಸಿ ಹಾಕುತ್ತಿವೆ. ಇದರಿಂದ ರೈತರಿಗೆ ಭಾರಿ ಪ್ರಮಾಣದಲ್ಲಿ ನಷ್ಟ ಉಂಟು ಮಾಡುತ್ತಿವೆ. ಹೀಗಾಗಿ ರೈತರು ಗೋವಿನ ಜೋಳಕ್ಕೆ ಕ್ರಿಮಿನಾಶಕ ಸಿಂಪಡಿಸುವಲ್ಲಿ ನಿರತರಾಗಿದ್ದಾರೆ. ಸಮಯಕ್ಕೆ ತಕ್ಕಂತೆ ಸುರಿಯದ ಮಳೆ ಒಂದು ಪರಿಣಾಮ ಆದರೆ, ಇನ್ನೊಂದು ಕಡೆ ನಿರಂತರವಾಗಿ ಸುಳಿಯುತ್ತಿರುವ ಮಳೆಮೋಡದ ವಾತಾವರಣದಿಂದ ಕೀಟಬಾಧೆ ಶುರುವಾಗಿದೆಯೆಂದು ರೈತರು ಹೇಳುತ್ತಿದ್ದಾರೆ.

ಇದನ್ನೂ ಓದಿ:N Cheluvarayaswamy: ಕೃಷಿ ಸಚಿವರೇ, ದಾವಣಗೆರೆಯ ಜಗಳೂರು ರೈತರಿಗೆ ಕೃಷಿ ಇಲಾಖೆ ಪೂರೈಸಿರೋದು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳು!

ಜಿಲ್ಲೆಯಲ್ಲಿ 20,250 ಹೆಕ್ಟೇರ್ ಪ್ರದೇಶದಲ್ಲಿ ಹೆಸರು, 42,000 ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬೆಳೆಯುವ ಗುರಿ

ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ ಒಟ್ಟು 2,65,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗುತ್ತದೆ. ಅದರಲ್ಲಿ ಪ್ರಮುಖವಾಗಿ 20,250 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇದುವರೆಗೂ ಕೇವಲ 6809 ಹೆಕ್ಟೇರ್ ಮಾತ್ರ ಹೆಸರು ಬಿತ್ತನೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು 42,000 ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬಿತ್ತನೆಯ ಗುರಿಯನ್ನು ಮುಂಗಾರು ಅವಧಿಯಲ್ಲಿ ಹೊಂದಲಾಗಿತ್ತು. ಆದರೆ, ಇದುವರೆಗೂ ಬಿತ್ತನೆಯಾಗಿದ್ದು ಕೇವಲ 19,100 ಹೆಕ್ಟೇರ್ ಮಾತ್ರ, ಇದೀಗ ಬಿತ್ತಿದಂತಹ ಗೋವಿನ ಜೋಳ ಬೆಳೆಗೂ ಕೂಡ ಕೀಟಗಳ ಬಾದೆ ಶುರುವಾಗಿದ್ದು, ಸುಳಿಯನ್ನು ಕತ್ತರಿಸಿ ಹಾಕುತ್ತಿವೆ‌‌.

ಇನ್ನು ಧಾರಾಕಾರ ಮಳೆ ಸುರಿದು ಬಿಸಿಲು ಬಿದ್ದರೆ ಕೀಟಗಳ ಬಾಧೆ ಇರುವುದಿಲ್ಲ. ಆದರೆ, ಇಂತಹ ಮಳೆಯಿಂದ ಬೆಳೆಗೆ ಕಾಯಿಲೆ ಕಾಟ ಶುರುವಾಗಿದ್ದು, ಕೃಷಿ ಅಧಿಕಾರಿಗಳು ಸ್ಥಳಕ್ಕ ಭೇಟಿ ನೀಡಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ರೈತರು ಕೇಳಿಕೊಳ್ಳುತ್ತಿದ್ದಾರೆ. ಒಂದು ಕಡೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಎಲ್ಲ ನದಿಗಳು ತುಂಬಿ ತುಳುಕುತ್ತಿವೆ. ಆದರೆ, ವಾತಾವರಣ ವೈಫರೀತ್ಯದಿಂದ ರೈತರ ಪ್ರಮುಖ ಬೆಳೆ ಹಾಳಾಗುತ್ತಿರೋದು ರೈತರ ನೆಮ್ಮದಿ ಕೆಡುವಂತಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Sun, 23 July 23

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ