Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ವಾತಾವರಣ ವೈಪರೀತ್ಯದಿಂದ ಬೆಳೆಗಳಿಗೆ ಕೀಟಗಳ ಕಾಟ; ರೈತರ ಅಳಲು

ಯಾವುದೇ ಒಂದು ಬೆಳೆ ಬೆಳೆಯಬೇಕಾದರೇ ಕಾಲಕ್ಕೆ ತಕ್ಕಂತೆ ಮಳೆಯಾಗುವುದು ಬಹಳ ಮುಖ್ಯ. ಇದರಿಂದ ಬಿತ್ತಿದ ಬೆಳೆಯು ಸಮೃದ್ಧವಾಗಿ ಬೆಳೆಯುವುದು. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಅದೆಷ್ಟೋ ರೈತರು ಬಿತ್ತನೆಯನ್ನೇ ಮಾಡದೆ ಸುಮ್ಮನೆ ಕೂತರೆ, ಕೆಲ ರೈತರು ಬಿತ್ತಿದ ಬೆಳೆಗೆ ಕಾಯಿಲೆ ಕಾಟ ಶುರುವಾಗಿದೆ.

ಬಾಗಲಕೋಟೆ: ವಾತಾವರಣ ವೈಪರೀತ್ಯದಿಂದ ಬೆಳೆಗಳಿಗೆ ಕೀಟಗಳ ಕಾಟ; ರೈತರ ಅಳಲು
ಬೆಳೆಗಳಿಗೆ ಕೀಟಗಳ ಕಾಟ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 23, 2023 | 9:00 AM

ಬಾಗಲಕೋಟೆ, ಜು.23: ತಾಲೂಕಿನ ಕೆರಕಲಮಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದ ಹೊಲಗಳಲ್ಲಿ ಮೋಡ ಮುಸುಕಿದ ವಾತಾವರಣ, ನಿರಂತರವಾಗಿ ಸುರಿಯುತ್ತಿರುವ ಮಳೆ. ವಾತಾವರಣ ವೈಪರೀತ್ಯ ಹಾಗೂ ತಂಪಾದ ವಾತಾವರಣದಿಂದ ಹೊಲದಲ್ಲಿನ ಬೆಳೆಗಳಿಗೆ ಕೀಟಗಳ ಕಾಟ ಎದುರಾಗಿದ್ದು, ಹೆಸರು ಬೆಳೆ ಹಳದಿ ಬಣ್ಣಕ್ಕೆ ತಿರುಗಿದೆ. ಪರಿಣಾಮ ಇದೀಗ ರೈತರು ಬೆಳೆಗಳಿಗೆ ಕ್ರಿಮಿನಾಷಕ ಸಿಂಪಡಿಸುತ್ತಿದ್ದಾರೆ. ಹೌದು, ಬಾಗಲಕೋಟೆ(Bagalakote) ಜಿಲ್ಲೆಯಲ್ಲಿ ಪ್ರಮುಖವಾಗಿ ಮುಂಗಾರು ಅವಧಿಯಲ್ಲಿ ಬೆಳೆಯಬೇಕಿದ್ದ ಹೆಸರು ಬೆಳೆ ಬಿತ್ತನೆ ಕಾಲದಲ್ಲಿ ಮಳೆ ಆಗದ ಕಾರಣ ಬಹುತೇಕ ರೈತರು ಹೆಸರು ಬಿತ್ತದೆ ಹಾಗೆ ಬಿಟ್ಟಿದ್ದಾರೆ.

ಹೆಸರು ಬೆಳೆಗೆ ಹಳದಿ ರೋಗ, ಜೋಳಕ್ಕೆ ಕೀಟಬಾಧೆ

ಇನ್ನು ಕೆಲವೇ ಕೆಲ ರೈತರು ಬೆಳೆದ ಹೆಸರಿಗೆ ಹಳದಿ ರೋಗ ಶುರುವಾಗಿದೆ. ಕೆಲ ರೈತರು ಹೆಸರು ಬಿತ್ತನೆ ಮಾಡಬೇಕಾದಂತಹ ಪ್ರದೇಶದಲ್ಲಿ ಗೋವಿನ ಜೋಳವನ್ನು ಬೆಳೆದಿದ್ದು, ಗೋವಿನ ಜೋಳಕ್ಕೆ ಈಗ ಕೀಟಗಳ ಬಾದೆ ಶುರುವಾಗಿದೆ. ಹೊಲದಲ್ಲಿ ನೋಡೋಕೆ ಸಾಲು ಸಾಲಾಗಿ ಹಚ್ಚಹಸಿರಾಗಿ ಸಮೃದ್ಧವಾಗಿ ಬೆಳೆದ ರೀತಿಯಲ್ಲಿ ಗೋವಿನ ಜೋಳ ಕಂಡುಬಂದರೂ ಕೂಡ, ಕೀಟಗಳು ಗೋವಿನ ಜೋಳದ ಸುಳಿಯನ್ನು ಕತ್ತರಿಸಿ ಹಾಕುತ್ತಿವೆ. ಇದರಿಂದ ರೈತರಿಗೆ ಭಾರಿ ಪ್ರಮಾಣದಲ್ಲಿ ನಷ್ಟ ಉಂಟು ಮಾಡುತ್ತಿವೆ. ಹೀಗಾಗಿ ರೈತರು ಗೋವಿನ ಜೋಳಕ್ಕೆ ಕ್ರಿಮಿನಾಶಕ ಸಿಂಪಡಿಸುವಲ್ಲಿ ನಿರತರಾಗಿದ್ದಾರೆ. ಸಮಯಕ್ಕೆ ತಕ್ಕಂತೆ ಸುರಿಯದ ಮಳೆ ಒಂದು ಪರಿಣಾಮ ಆದರೆ, ಇನ್ನೊಂದು ಕಡೆ ನಿರಂತರವಾಗಿ ಸುಳಿಯುತ್ತಿರುವ ಮಳೆಮೋಡದ ವಾತಾವರಣದಿಂದ ಕೀಟಬಾಧೆ ಶುರುವಾಗಿದೆಯೆಂದು ರೈತರು ಹೇಳುತ್ತಿದ್ದಾರೆ.

ಇದನ್ನೂ ಓದಿ:N Cheluvarayaswamy: ಕೃಷಿ ಸಚಿವರೇ, ದಾವಣಗೆರೆಯ ಜಗಳೂರು ರೈತರಿಗೆ ಕೃಷಿ ಇಲಾಖೆ ಪೂರೈಸಿರೋದು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳು!

ಜಿಲ್ಲೆಯಲ್ಲಿ 20,250 ಹೆಕ್ಟೇರ್ ಪ್ರದೇಶದಲ್ಲಿ ಹೆಸರು, 42,000 ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬೆಳೆಯುವ ಗುರಿ

ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ ಒಟ್ಟು 2,65,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗುತ್ತದೆ. ಅದರಲ್ಲಿ ಪ್ರಮುಖವಾಗಿ 20,250 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇದುವರೆಗೂ ಕೇವಲ 6809 ಹೆಕ್ಟೇರ್ ಮಾತ್ರ ಹೆಸರು ಬಿತ್ತನೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು 42,000 ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬಿತ್ತನೆಯ ಗುರಿಯನ್ನು ಮುಂಗಾರು ಅವಧಿಯಲ್ಲಿ ಹೊಂದಲಾಗಿತ್ತು. ಆದರೆ, ಇದುವರೆಗೂ ಬಿತ್ತನೆಯಾಗಿದ್ದು ಕೇವಲ 19,100 ಹೆಕ್ಟೇರ್ ಮಾತ್ರ, ಇದೀಗ ಬಿತ್ತಿದಂತಹ ಗೋವಿನ ಜೋಳ ಬೆಳೆಗೂ ಕೂಡ ಕೀಟಗಳ ಬಾದೆ ಶುರುವಾಗಿದ್ದು, ಸುಳಿಯನ್ನು ಕತ್ತರಿಸಿ ಹಾಕುತ್ತಿವೆ‌‌.

ಇನ್ನು ಧಾರಾಕಾರ ಮಳೆ ಸುರಿದು ಬಿಸಿಲು ಬಿದ್ದರೆ ಕೀಟಗಳ ಬಾಧೆ ಇರುವುದಿಲ್ಲ. ಆದರೆ, ಇಂತಹ ಮಳೆಯಿಂದ ಬೆಳೆಗೆ ಕಾಯಿಲೆ ಕಾಟ ಶುರುವಾಗಿದ್ದು, ಕೃಷಿ ಅಧಿಕಾರಿಗಳು ಸ್ಥಳಕ್ಕ ಭೇಟಿ ನೀಡಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ರೈತರು ಕೇಳಿಕೊಳ್ಳುತ್ತಿದ್ದಾರೆ. ಒಂದು ಕಡೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಎಲ್ಲ ನದಿಗಳು ತುಂಬಿ ತುಳುಕುತ್ತಿವೆ. ಆದರೆ, ವಾತಾವರಣ ವೈಫರೀತ್ಯದಿಂದ ರೈತರ ಪ್ರಮುಖ ಬೆಳೆ ಹಾಳಾಗುತ್ತಿರೋದು ರೈತರ ನೆಮ್ಮದಿ ಕೆಡುವಂತಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Sun, 23 July 23

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ