AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ವಾತಾವರಣ ವೈಪರೀತ್ಯದಿಂದ ಬೆಳೆಗಳಿಗೆ ಕೀಟಗಳ ಕಾಟ; ರೈತರ ಅಳಲು

ಯಾವುದೇ ಒಂದು ಬೆಳೆ ಬೆಳೆಯಬೇಕಾದರೇ ಕಾಲಕ್ಕೆ ತಕ್ಕಂತೆ ಮಳೆಯಾಗುವುದು ಬಹಳ ಮುಖ್ಯ. ಇದರಿಂದ ಬಿತ್ತಿದ ಬೆಳೆಯು ಸಮೃದ್ಧವಾಗಿ ಬೆಳೆಯುವುದು. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಅದೆಷ್ಟೋ ರೈತರು ಬಿತ್ತನೆಯನ್ನೇ ಮಾಡದೆ ಸುಮ್ಮನೆ ಕೂತರೆ, ಕೆಲ ರೈತರು ಬಿತ್ತಿದ ಬೆಳೆಗೆ ಕಾಯಿಲೆ ಕಾಟ ಶುರುವಾಗಿದೆ.

ಬಾಗಲಕೋಟೆ: ವಾತಾವರಣ ವೈಪರೀತ್ಯದಿಂದ ಬೆಳೆಗಳಿಗೆ ಕೀಟಗಳ ಕಾಟ; ರೈತರ ಅಳಲು
ಬೆಳೆಗಳಿಗೆ ಕೀಟಗಳ ಕಾಟ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 23, 2023 | 9:00 AM

Share

ಬಾಗಲಕೋಟೆ, ಜು.23: ತಾಲೂಕಿನ ಕೆರಕಲಮಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದ ಹೊಲಗಳಲ್ಲಿ ಮೋಡ ಮುಸುಕಿದ ವಾತಾವರಣ, ನಿರಂತರವಾಗಿ ಸುರಿಯುತ್ತಿರುವ ಮಳೆ. ವಾತಾವರಣ ವೈಪರೀತ್ಯ ಹಾಗೂ ತಂಪಾದ ವಾತಾವರಣದಿಂದ ಹೊಲದಲ್ಲಿನ ಬೆಳೆಗಳಿಗೆ ಕೀಟಗಳ ಕಾಟ ಎದುರಾಗಿದ್ದು, ಹೆಸರು ಬೆಳೆ ಹಳದಿ ಬಣ್ಣಕ್ಕೆ ತಿರುಗಿದೆ. ಪರಿಣಾಮ ಇದೀಗ ರೈತರು ಬೆಳೆಗಳಿಗೆ ಕ್ರಿಮಿನಾಷಕ ಸಿಂಪಡಿಸುತ್ತಿದ್ದಾರೆ. ಹೌದು, ಬಾಗಲಕೋಟೆ(Bagalakote) ಜಿಲ್ಲೆಯಲ್ಲಿ ಪ್ರಮುಖವಾಗಿ ಮುಂಗಾರು ಅವಧಿಯಲ್ಲಿ ಬೆಳೆಯಬೇಕಿದ್ದ ಹೆಸರು ಬೆಳೆ ಬಿತ್ತನೆ ಕಾಲದಲ್ಲಿ ಮಳೆ ಆಗದ ಕಾರಣ ಬಹುತೇಕ ರೈತರು ಹೆಸರು ಬಿತ್ತದೆ ಹಾಗೆ ಬಿಟ್ಟಿದ್ದಾರೆ.

ಹೆಸರು ಬೆಳೆಗೆ ಹಳದಿ ರೋಗ, ಜೋಳಕ್ಕೆ ಕೀಟಬಾಧೆ

ಇನ್ನು ಕೆಲವೇ ಕೆಲ ರೈತರು ಬೆಳೆದ ಹೆಸರಿಗೆ ಹಳದಿ ರೋಗ ಶುರುವಾಗಿದೆ. ಕೆಲ ರೈತರು ಹೆಸರು ಬಿತ್ತನೆ ಮಾಡಬೇಕಾದಂತಹ ಪ್ರದೇಶದಲ್ಲಿ ಗೋವಿನ ಜೋಳವನ್ನು ಬೆಳೆದಿದ್ದು, ಗೋವಿನ ಜೋಳಕ್ಕೆ ಈಗ ಕೀಟಗಳ ಬಾದೆ ಶುರುವಾಗಿದೆ. ಹೊಲದಲ್ಲಿ ನೋಡೋಕೆ ಸಾಲು ಸಾಲಾಗಿ ಹಚ್ಚಹಸಿರಾಗಿ ಸಮೃದ್ಧವಾಗಿ ಬೆಳೆದ ರೀತಿಯಲ್ಲಿ ಗೋವಿನ ಜೋಳ ಕಂಡುಬಂದರೂ ಕೂಡ, ಕೀಟಗಳು ಗೋವಿನ ಜೋಳದ ಸುಳಿಯನ್ನು ಕತ್ತರಿಸಿ ಹಾಕುತ್ತಿವೆ. ಇದರಿಂದ ರೈತರಿಗೆ ಭಾರಿ ಪ್ರಮಾಣದಲ್ಲಿ ನಷ್ಟ ಉಂಟು ಮಾಡುತ್ತಿವೆ. ಹೀಗಾಗಿ ರೈತರು ಗೋವಿನ ಜೋಳಕ್ಕೆ ಕ್ರಿಮಿನಾಶಕ ಸಿಂಪಡಿಸುವಲ್ಲಿ ನಿರತರಾಗಿದ್ದಾರೆ. ಸಮಯಕ್ಕೆ ತಕ್ಕಂತೆ ಸುರಿಯದ ಮಳೆ ಒಂದು ಪರಿಣಾಮ ಆದರೆ, ಇನ್ನೊಂದು ಕಡೆ ನಿರಂತರವಾಗಿ ಸುಳಿಯುತ್ತಿರುವ ಮಳೆಮೋಡದ ವಾತಾವರಣದಿಂದ ಕೀಟಬಾಧೆ ಶುರುವಾಗಿದೆಯೆಂದು ರೈತರು ಹೇಳುತ್ತಿದ್ದಾರೆ.

ಇದನ್ನೂ ಓದಿ:N Cheluvarayaswamy: ಕೃಷಿ ಸಚಿವರೇ, ದಾವಣಗೆರೆಯ ಜಗಳೂರು ರೈತರಿಗೆ ಕೃಷಿ ಇಲಾಖೆ ಪೂರೈಸಿರೋದು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳು!

ಜಿಲ್ಲೆಯಲ್ಲಿ 20,250 ಹೆಕ್ಟೇರ್ ಪ್ರದೇಶದಲ್ಲಿ ಹೆಸರು, 42,000 ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬೆಳೆಯುವ ಗುರಿ

ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ ಒಟ್ಟು 2,65,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗುತ್ತದೆ. ಅದರಲ್ಲಿ ಪ್ರಮುಖವಾಗಿ 20,250 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇದುವರೆಗೂ ಕೇವಲ 6809 ಹೆಕ್ಟೇರ್ ಮಾತ್ರ ಹೆಸರು ಬಿತ್ತನೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು 42,000 ಹೆಕ್ಟೇರ್ ಪ್ರದೇಶದಲ್ಲಿ ಗೋವಿನ ಜೋಳ ಬಿತ್ತನೆಯ ಗುರಿಯನ್ನು ಮುಂಗಾರು ಅವಧಿಯಲ್ಲಿ ಹೊಂದಲಾಗಿತ್ತು. ಆದರೆ, ಇದುವರೆಗೂ ಬಿತ್ತನೆಯಾಗಿದ್ದು ಕೇವಲ 19,100 ಹೆಕ್ಟೇರ್ ಮಾತ್ರ, ಇದೀಗ ಬಿತ್ತಿದಂತಹ ಗೋವಿನ ಜೋಳ ಬೆಳೆಗೂ ಕೂಡ ಕೀಟಗಳ ಬಾದೆ ಶುರುವಾಗಿದ್ದು, ಸುಳಿಯನ್ನು ಕತ್ತರಿಸಿ ಹಾಕುತ್ತಿವೆ‌‌.

ಇನ್ನು ಧಾರಾಕಾರ ಮಳೆ ಸುರಿದು ಬಿಸಿಲು ಬಿದ್ದರೆ ಕೀಟಗಳ ಬಾಧೆ ಇರುವುದಿಲ್ಲ. ಆದರೆ, ಇಂತಹ ಮಳೆಯಿಂದ ಬೆಳೆಗೆ ಕಾಯಿಲೆ ಕಾಟ ಶುರುವಾಗಿದ್ದು, ಕೃಷಿ ಅಧಿಕಾರಿಗಳು ಸ್ಥಳಕ್ಕ ಭೇಟಿ ನೀಡಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ರೈತರು ಕೇಳಿಕೊಳ್ಳುತ್ತಿದ್ದಾರೆ. ಒಂದು ಕಡೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಎಲ್ಲ ನದಿಗಳು ತುಂಬಿ ತುಳುಕುತ್ತಿವೆ. ಆದರೆ, ವಾತಾವರಣ ವೈಫರೀತ್ಯದಿಂದ ರೈತರ ಪ್ರಮುಖ ಬೆಳೆ ಹಾಳಾಗುತ್ತಿರೋದು ರೈತರ ನೆಮ್ಮದಿ ಕೆಡುವಂತಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Sun, 23 July 23

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು